AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಿಂದ ಕೊಲ್ಹಾಪುರದವರೆಗೂ ರೈಲು: ಸಚಿವ ಪ್ರಲ್ಹಾದ್ ಜೋಶಿಯಿಂದ ಹಸಿರು ನಿಶಾನೆ, ಯಾವೆಲ್ಲಾ ತೀರ್ಥಯಾತ್ರೆ ಮಾಡಬಹುದು, ಇಲ್ಲಿದೆ ವಿವರ

Kalaburagi to Kolhapur Train: ರೈಲು ಮಾರ್ಗ ವಿಸ್ತರಣೆಯಿಂದ ಗಾಣಗಾಪುರದ ದತ್ತಾತ್ರೇಯ, ಫಂಡರಾಪುರದ ವಿಠ್ಠಲ, ಕೊಲ್ಹಾಪುರದ ಮಹಾಲಕ್ಷ್ಮೀ ದೇವಾಲಯಗಳಿಗೆ ತೆರಳುವ ಭಕ್ತರಿಗೆ ಸಹಾಯಕವಾಗಲಿದೆ. ಧಾರ್ಮಿಕ ಸ್ಥಳಗಳನ್ನು ಸಂಪರ್ಕಿಸುವ ನೇರ ರೈಲಿಗೆ ಬೇಡಿಕೆ ಇಟ್ಟಿದ್ದ ಜನರಿಗೆ ಕೊನೆಗೂ ಕೇಂದ್ರ ಸರ್ಕಾರ ಸ್ಪಂದಿಸಿದೆ.

ಕಲಬುರಗಿಯಿಂದ ಕೊಲ್ಹಾಪುರದವರೆಗೂ ರೈಲು: ಸಚಿವ ಪ್ರಲ್ಹಾದ್ ಜೋಶಿಯಿಂದ ಹಸಿರು ನಿಶಾನೆ, ಯಾವೆಲ್ಲಾ ತೀರ್ಥಯಾತ್ರೆ ಮಾಡಬಹುದು, ಇಲ್ಲಿದೆ ವಿವರ
ಕಲಬುರಗಿ - ಕೊಲ್ಹಾಪುರ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
TV9 Web
| Updated By: ಸಾಧು ಶ್ರೀನಾಥ್​|

Updated on:Sep 16, 2022 | 9:11 PM

Share

ಕಲಬುರಗಿ-ಕೊಲ್ಹಾಪುರ ರೈಲು ಸಂಚಾರಕ್ಕೆ (Kalaburagi to Kolhapur Train) ಇಂದು ಶುಕ್ರವಾರ ಹಸಿರು ನಿಶಾನೆ ತೋರಿಸಲಾಯಿತು. ಕಲಬುರಗಿ ರೈಲ್ವೇ ನಿಲ್ದಾಣದಲ್ಲಿ ( Kalburagi Railway Station) ಇಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಈ ಮೂಲಕ ಕಲಬುರಗಿ ಕೊಲ್ಹಾಪುರ ಮಾರ್ಗದ ರೈಲು ಸಂಚಾರಕ್ಕೆ ಚಾಲನೆ ನೀಡಿದರು.‌ ಇಲ್ಲಿಯ ವರೆಗೆ ಸೊಲ್ಹಾಪುರ-ಮೀರಜ್ ನಡುವೆ ಮಾತ್ರ ಸಂಚಾರ ನಡೆಸುತ್ತಿದ್ದ ಎಕ್ಸ್‌ಪ್ರೆಸ್‌ ರೈಲನ್ನು ಕೊಲ್ಹಾಪುರದ ವರೆಗೂ ವಿಸ್ತರಣೆ ಮಾಡಲಾಗಿದೆ. ಕಲಬುರಗಿ – ಕೊಲ್ಹಾಪುರ ರೈಲು ಸಂಚಾರಕ್ಕೆ ಜನರು ಹೆಚ್ಚಿನ ಬೇಡಿಕೆ ಇಟ್ಟಿದ್ದರು. ಸಂಸದ ಉಮೇಶ್ ಜಾಧವ್ (Umesh Jadhav) ಕೇಂದ್ರ ಸರ್ಕಾರಕ್ಕೆ ಈ ಕುರಿತಂತೆ ಮನವಿ ಮಾಡಿದ್ದರು.

ರೈಲು ಸಂಚಾರದ ವೇಳಾಪಟ್ಟಿ ಹೀಗಿದೆ:

ಕಲಬುರಗಿ-ಕೊಲ್ಹಾಪುರ ನಡುವೆ ಸಂಚರಿಸಲಿರುವ ರೈಲು, ಕಲಬುರಗಿ ನಗರದಿಂದ ಪ್ರತಿದಿನ ಮುಂಜಾನೆ 6.40ಕ್ಕೆ ಪ್ರಯಾಣ ಆರಂಭಿಸಲಿದೆ. ಮಧ್ಯಾಹ್ನ 2.15ಕ್ಕೆ ಕೊಲ್ಹಾಪುರಕ್ಕೆ ತಲುಪಲಿದೆ. ಕೊಲ್ಹಾಪುರದಿಂದ ಮಧ್ಯಾಹ್ನ 3 ಗಂಟೆಗೆ ಹೊರಡಲಿದ್ದು, ರಾತ್ರಿ 10.45ಕ್ಕೆ ಕಲಬುರಗಿ ತಲುಪಲಿದೆ.

ರೈಲು ಮಾರ್ಗ ವಿಸ್ತರಣೆಯಿಂದ ಗಾಣಗಾಪುರದ ದತ್ತಾತ್ರೇಯ, ಫಂಡರಾಪುರದ ವಿಠ್ಠಲ, ಕೊಲ್ಹಾಪುರದ ಮಹಾಲಕ್ಷ್ಮೀ ದೇವಾಲಯಗಳಿಗೆ ತೆರಳುವ ಭಕ್ತರಿಗೆ ಸಹಾಯಕವಾಗಲಿದೆ. ಧಾರ್ಮಿಕ ಸ್ಥಳಗಳನ್ನು ಸಂಪರ್ಕಿಸುವ ನೇರ ರೈಲಿಗೆ ಬೇಡಿಕೆ ಇಟ್ಟಿದ್ದ ಜನರಿಗೆ ಕೊನೆಗೂ ಕೇಂದ್ರ ಸರ್ಕಾರ ಸ್ಪಂದಿಸಿದೆ.

ಕಲಬುರಗಿಯಿಂದ ಹೊರಡುವ ರೈಲು 7.05ಕ್ಕೆ ಗಾಣಗಾಪುರ, 7.46ಕ್ಕೆ ಅಕ್ಕಲಕೋಟ, 9.30ಕ್ಕೆ ಕುರುಡ್ವಾಡಿ, 10.20ಕ್ಕೆ ಪಂಡರಾಪುರ, 12.45 ಮೀರಜ್, 1.10ಕ್ಕೆ ಜೈಸಿಂಗ್‌ಪುರ, 1.25ಕ್ಕೆ ಹತ್ಕಣಂಗಲೆ ಮೂಲಕ ಕೊಲ್ಹಾಪುರ ತಲುಪಲಿದೆ.

Published On - 9:08 pm, Fri, 16 September 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!