Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ವಕೀಲನ ಬರ್ಬರ ಹತ್ಯೆ ಪ್ರಕರಣ; 6 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು

ಆತ ವೃತ್ತಿಯಲ್ಲಿ ವಕೀಲರು, ಆಗಷ್ಟೇ ಕೋರ್ಟ್‌ಗೆ ತೆರಳಲು ತಮ್ಮ ಅಪಾರ್ಟ್ಮೆಂಟ್​ನಿಂದ ಬೈಕ್ ಮೇಲೆ ಹೊರಟಿದ್ದರು. ಈ ವೇಳೆ ಮಾರಕಾಸ್ತ್ರಗಳ ಸಮೇತ ಎದುರಿಗೆ ಬಂದ ದುಷ್ಕರ್ಮಿಗಳು, ವಕೀಲನ ಬೈಕ್ ಅಡ್ಡಗಟ್ಟಿದ್ದರು. ಅಷ್ಟೇ, ಅಲ್ಲಿಂದ ನಡೆದಿದ್ದು ಸಿನಿಮಿಯ ಶೈಲಿಯ ಮರ್ಡರ್. ವಕೀಲನನ್ನ ಅಟ್ಟಾಡಿಸಿ ಹಾಡುಹಗಲೇ ನಡೆದ ರಣಭೀಕರ ಹತ್ಯೆಯಿಂದ ತೊಗರಿಯ ಕಣಜ ಕಲಬುರಗಿ ಅಕ್ಷರಶಃ ಬೆಚ್ಚಿಬಿದ್ದಿದೆ.

ಹಾಡಹಗಲೇ ವಕೀಲನ ಬರ್ಬರ ಹತ್ಯೆ ಪ್ರಕರಣ; 6 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು
ಮೃತ ಲಾಯರ್​
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 07, 2023 | 8:24 PM

ಕಲಬುರಗಿ, ಡಿ.07: ಕಲಬುರಗಿ(Kalaburagi) ನಗರದಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ಎಫ್‌ಐಆರ್(FIR) ದಾಖಲು ಮಾಡಲಾಗಿದೆ. ನೀಲಕಂಠ ಪೊಲೀಸ್ ಪಾಟೀಲ್, ವಿಜಯಕುಮಾರ್, ಸಿದ್ದಣ್ಣಗೌಡ ಸಿದ್ರಾಮ್, ಅವ್ವಣ್ಣ, ಗುರು ಎಂಬುವವರ ವಿರುದ್ಧ ದಾಖಲಾಗಿದೆ. ಬೆಳಗ್ಗೆ ಗಂಗಾವಿಹಾರ್‌ ಅಪಾರ್ಟ್‌ಮೆಂಟ್‌ನಲ್ಲಿ ವಕೀಲನ ಕೊಲೆ ಆಗಿತ್ತು. ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಈರಣ್ಣ ಗೌಡರನ್ನು ಹತ್ಯೆಗೈದಿದ್ದರು.

ಕಲಬುರಗಿಯಲ್ಲಿ ಹಾಡಹಗಲೇ ಭೀಕರ ಹತ್ಯೆ! ಆಸ್ತಿ ವ್ಯಾಜ್ಯ ಸಂಬಂಧ ವಕೀಲನ ಹತ್ಯೆಯಾಯ್ತಾ?

ಕಲಬುರಗಿ ನಗರದ ಸಾಯಿ ಮಂದಿರ ಬಳಿಯ ಶ್ರೀ ಗಂಗಾ ವಿಹಾರ್ ಅಪಾರ್ಟ್ಮೆಂಟ್‌ನಲ್ಲಿ‌‌. ವೃತ್ತಿಯಲ್ಲಿ ವಕೀಲರು ಆಗಿರುವ 40 ವರ್ಷದ ಈರಣ್ಣಗೌಡ ಎಂಬುವವರು ನೂರಾರು ಎಕರೆ ಜಮೀನಿನ ಜೊತೆಗೆ ರಿಯಲ್ ಎಸ್ಟೇಟ್​ ಬಿಸ್​ನೆಸ್ ಮಾಡುವುದರ ಜೊತೆಗೆ ವಕೀಲ ವೃತ್ತಿಯನ್ನು ಸಹ ಮಾಡಿಕೊಂಡು ಹೋಗುತ್ತಿದ್ದರು. ಇದರ ಮಧ್ಯೆ ಸಂಬಂಧಿಗಳ ಮಧ್ಯೆ ಜಮೀನು/ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ನಡೆಯುತ್ತಾಯಿತ್ತು. ಪ್ರಕರಣ ಕೋರ್ಟ್‌ನಲ್ಲಿದ್ದರು ಸಹ, ಎರಡು ಕುಟುಂಬಸ್ಥರ ಮಧ್ಯೆ ದೊಡ್ಡಮಟ್ಟದ ವೈಷಮ್ಯ ಬೆಳೆದಿತ್ತು. ಹೀಗಾಗಿ ಇಂದು ಬೆಳಗ್ಗೆ 10.30 ಗಂಟೆಗೆ ಅಪಾರ್ಟ್ಮೆಂಟ್‌ನಿಂದ ಕೋರ್ಟ್‌ಗೆ ತೆರಳು ಈರಣ್ಣಗೌಡ ಬೈಕ್ ಮೇಲೆ ಹೊರಟಿದ್ದಾರೆ. ಈ ವೇಳೆ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಹೊಡೆಯಲು ಮುಂದಾದಾಗ ಅವರಿಂದ ತಪ್ಪಿಸಿಕೊಂಡು ಅಪಾರ್ಟ್ಮೆಂಟ್‌ನ ಬೆಸ್‌ಮೆಂಟ್‌ಗೆ ಬಂದಾಗ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ನಂತರ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ..

ಇದನ್ನೂ ಓದಿ:ಕಲಬುರಗಿ: ಬರೋಬ್ಬರಿ ಅರ್ಧ ಕಿಲೋಮೀಟರ್ ಅಟ್ಟಾಡಿಸಿಕೊಂಡು ಹೋಗಿ ವಕೀಲನ ಬರ್ಬರ ಹತ್ಯೆ

ಇನ್ನು ಹತ್ಯೆಯಾದ ವಕೀಲ ಈರಣ್ಣಗೌಡ ಪೊಲೀಸ್ ಪಾಟೀಲ್ ತಂದೆ ಹಾಗೂ ಸಹೋದರರ ಮಧ್ಯೆ ಉದನೂರು ಗ್ರಾಮದಲ್ಲಿ 70 ಎಕರೆ ಜಮೀನು ವಿವಾದದಿಂದ ವೈಷಮ್ಯ ಏರ್ಪಟ್ಟಿತ್ತು. ಮೂವರು ಸಹೋದರರ ಮಧ್ಯೆ ಈರಣ್ಣಗೌಡ ಒಬ್ಬನೇ ಗಂಡು ಮಗನಾಗಿದ್ದ. ಹೀಗಾಗಿ 70 ಎಕರೆ ಆಸ್ತಿ ಎಲ್ಲಿ ಕೈತಪ್ಪಿ‌ ಹೋಗುತ್ತೋ ಎಂದು ಈರಣ್ಣಗೌಡನನ್ನ ಕೊಲೆ ಮಾಡಲು ಸ್ಕೇಚ್ ಹಾಕಿದ್ದಾರೆ. ಅದರಂತೆ ಇಂದು ಸಹೋದರ ಸಂಬಂಧಿಕರ ಮಕ್ಕಳಾದ ಕಂಟೆಪ್ಪಣ ಅವ್ವಣ್ಣ ಮತ್ತು ಭಾಗೇಶ್ ಎಂಬಾತರು ಸೇರಿಕೊಂಡು ಈರಣ್ಣಗೌಡನನ್ನ ಅಟ್ಟಿಸಿಕೊಂಡು ಭೀಕರ ಹತ್ಯೆ ಮಾಡಿದ್ದಾರೆ ಎಂದು ಆರೋಪಸಿದ್ದಾರೆ.

ಅಟ್ಟಿಸಿಕೊಂಡು ಹತ್ಯೆ: ಸಿಸಿ ಕ್ಯಾಮರಾದಲ್ಲಿ ಸೆರೆ

ಅಟ್ಟಿಸಿಕೊಂಡು ಹತ್ಯೆ ಮಾಡುವ ದೃಶ್ಯಗಳು ಅಪಾರ್ಟ್ಮೆಂಟ್‌ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೂ ಈ ಹಿಂದೆ ಸಹ ಈರಣ್ಣಗೌಡ ಮತ್ತು ಕುಟುಂಬಸ್ಥರ ಮೇಲೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಅಟ್ಯಾಕ್ ನಡೆದಿತ್ತು. ತನ್ನ ಜೀವಕ್ಕೆ ಅಪಾಯವಿದೆಯೆಂದು ತಿಳಿದ ಈರಣ್ಣಗೌಡ, ಮನೆ ಹಾಗೂ ತನ್ನ ಜಮೀನಿನಲ್ಲಿ ಸಹ ಸಿಸಿ ಕ್ಯಾಮರಾ ಅಳವಡಿಸಿಕೊಂಡಿದ್ದನು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್ ಚೇತನ್, ‘ಕೋರ್ಟ್‌ಗೆ ಹೋಗುವಾಗ ಹಂತಕರು ಅಟ್ಯಾಕ್ ಮಾಡಿದ್ದಾರೆ. ಹಂತಕರ ಬಂಧನಕ್ಕೆ ವಿವಿ ಠಾಣೆ ಪೊಲೀಸರ ನೇತೃತ್ವದಲ್ಲಿ ಎರಡು ವಿಶೇಷ ತಂಡ ರಚಿಸಲಾಗಿದ್ದು, ಸಿಸಿ ಕ್ಯಾಮರಾ ವಿಡಿಯೋ ಆಧರಿಸಿ ಮತ್ತು ಸ್ಥಳದಲ್ಲಿ ಸಿಕ್ಕ ಕೆಲ ವಸ್ತುಗಳ ಜಾಡು ಹಿಡಿದು ಹಂತಕರನ್ನ ಶೀಘ್ರವೇ ಬಂಧಿಸಲಾಗುವುದೆಂದು ಹೇಳಿದ್ದರು. ಅದೆನೇ ಇರಲಿ ಕಲಬುರಗಿಯಲ್ಲಿ ಮಳೆ ನಿಂತರು ಮಳೆ ಹನಿ ನಿಲ್ಲಲ್ಲ ಎಂಬಂತೆ ಕೊಲೆಗಳು ನಿರಂತರವಾಗಿ ನಡೆಯುತ್ತಿದ್ದು, ಇದೀಗ ಹಾಡುಹಗಲೇ ವಕೀಲನ ಹತ್ಯೆಯಿಂದ ತೊಗರಿಯ ಕಣಜ ಅಕ್ಷರಶಃ ಬೆಚ್ಚಿಬಿದ್ದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ