AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯಕೋಮಿನ ಯುವತಿಗೆ ಡ್ರಾಪ್​​ ಕೊಟ್ಟಿದ್ದಕ್ಕೆ​ ಯುವಕನಿಗೆ ಹಲ್ಲೆ: ನೈತಿಕ ಪೊಲೀಸ್​ ಗಿರಿ ಮೆರೆದ 6 ಜನ ಅರೆಸ್ಟ್​

ಕಲಬುರಗಿಯಲ್ಲಿ ಅನ್ಯಕೋಮಿನ ಯುವತಿಗೆ ಲಿಫ್ಟ್ ಕೊಟ್ಟಿದ್ದಕ್ಕೆ ಯುವಕನಿಗೆ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ನೈತಿಕ ಪೊಲೀಸ್​ ಗಿರಿ ಮೆರೆದ ಆರು ಜನರನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಜೂನ್ 26 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಎಂ.ಬಿ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನ್ಯಕೋಮಿನ ಯುವತಿಗೆ ಡ್ರಾಪ್​​ ಕೊಟ್ಟಿದ್ದಕ್ಕೆ​ ಯುವಕನಿಗೆ ಹಲ್ಲೆ: ನೈತಿಕ ಪೊಲೀಸ್​ ಗಿರಿ ಮೆರೆದ 6 ಜನ ಅರೆಸ್ಟ್​
ಪ್ರಾತಿನಿಧಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Jun 28, 2025 | 8:12 AM

Share

ಕಲಬುರಗಿ, ಜೂನ್ 28: ಅನ್ಯಕೋಮಿನ ಯುವತಿಗೆ ಲಿಫ್ಟ್ ಕೊಟ್ಟಿದ್ದಕ್ಕೆ ಯುವಕನಿಗೆ ಹಲ್ಲೆ ಮಾಡಿ ನೈತಿಕ ಪೊಲೀಸ್​ ಗಿರಿ (moral policing) ಮೆರೆದಿರುವಂತಹ ಘಟನೆ ಜೂನ್​ 26ರ ಮಧ್ಯಾಹ್ನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಎಂ.ಬಿ.ನಗರ ಠಾಣೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ (arrested). ಮೊಹಮ್ಮದ್​​ ಸಲ್ಮಾನ್​​, ಮೊಹಮ್ಮದ್​ ಆದಿಲ್​, ಮೊಹಮ್ಮದ್ ರೆಹಾನ್, ಮೊಹಮ್ಮದ್ ಉಜೈರ್, ಮೊಹಮ್ಮದ್ ಫೈಜ್, ಮೊಹಮ್ಮದ್ ಆಸಿಫ್ ಬಂಧಿತರು.

ನಡೆದದ್ದೇನು?

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್​ ಆಗಿರುವ ಬೈಲಪ್ಪ, ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಅನ್ಯಕೋಮಿನ ಯುವತಿಗೆ ತಮ್ಮ ಬೈಕ್​​ನಲ್ಲಿ ಡ್ರಾಪ್ ನೀಡಿದ್ದಾರೆ. ಈ ವೇಳೆ ಬೈಕ್ ಅಡ್ಡಗಟ್ಟಿ‌ ಕಿಡಗೇಡಿಗಳು ತಮ್ಮ ಸಮುದಾಯದ ಯವತಿಯನ್ನು ಬೈಕ್ ಮೇಲೆ ಡ್ರಾಪ್ ಮಾಡಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ಎಂ.ಬಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೈಕ್​ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ: ಇಬ್ಬರ ಬಂಧನ

ಬೈಕ್​ನಲ್ಲಿ ಹೋಗುತ್ತಿದ್ದ ಯುವಕ, ಯುವತಿಯನ್ನ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದ ಇಬ್ಬರು ಆರೋಪಿಗಳನ್ನ ಬಿಡದಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಮನಗರ ನಿವಾಸಿಗಳಾದ ಮುಕ್ಸೂದ್, ಅಕ್ಮಲ್‌ಪಾಷಾ ಬಂಧಿತ ಆರೋಪಿಗಳು.

ಇದನ್ನೂ ಓದಿ: ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್

ರಾಮನಗರ ತಾಲೂಕಿನ ಭೈರಮಂಗಲ ಕ್ರಾಸ್ ಬಳಿ ಯುವಕನ ಜೊತೆ ಬೈಕ್​ನಲ್ಲಿ ಅನ್ಯಕೋಮಿನ ಯುವತಿ ಹೋಗುತ್ತಿದ್ದ ವೇಳೆ ಮತ್ತೊಂದು ಬೈಕ್​ನಲ್ಲಿ ಬಂದಿದ್ದ ಇಬ್ಬರು ಕಿಡಿಗೇಡಿಗಳು ಬೈಕ್ ಅಡ್ಡಗಟ್ಟಿ ಧಮ್ಕಿ ಹಾಕಿದ್ದರು. ಯುವತಿಯನ್ನ ನೀನು ಯಾಕೆ ಬೈಕ್​ನಲ್ಲಿ ಕರೆದುಕೊಂಡು ಹೋಗುತ್ತಿದ್ದಿಯಾ ಎಂದು ಅವಾಜ್ ಹಾಕಿದ್ದರು.

ಇದನ್ನೂ ಓದಿ: ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು: ಮೇಯರ್ ಸ್ಥಾನಕ್ಕೂ ಕುತ್ತು

ನಿಮ್ಮ ಮನೆಯವರಿಗೆ ಫೋನ್ ಮಾಡು ಎಂದು ಯುವತಿಗೆ ಬೆದರಿಕೆ ಹಾಕಿ‌ ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದರು. ಅಷ್ಟೇ ಅಲ್ಲದೆ ಈ ವೇಳೆ ಮೊಬೈಲ್​ನಲ್ಲಿ ವಿಡಿಯೊ ಮಾಡಿ ಫೇಸ್​ ಬುಕ್​ನಲ್ಲಿ ಹರಿಬಿಟ್ಟಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಕೂಡ ಆಗಿತ್ತು. ಹಿನ್ನೆಲೆಯಲ್ಲಿ ಬಿಡದಿ ಠಾಣೆ ಪೊಲೀಸರು ಸುಮೋಟೊ ಕೇಸ್ ದಾಖಲಿಸಿಕೊಂಡು ಕೋಮುಗಲಭೆಗೆ ಉತ್ತೇಜನ ನೀಡುವ ಆರೋಪದಡಿ ಇಬ್ಬರನ್ನ ಬಂಧಿಸಿದ್ದರು.

ಕರ್ನಾಟದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ