ಅನ್ಯಕೋಮಿನ ಯುವತಿಗೆ ಡ್ರಾಪ್​​ ಕೊಟ್ಟಿದ್ದಕ್ಕೆ​ ಯುವಕನಿಗೆ ಹಲ್ಲೆ: ನೈತಿಕ ಪೊಲೀಸ್​ ಗಿರಿ ಮೆರೆದ 6 ಜನ ಅರೆಸ್ಟ್​

ಕಲಬುರಗಿಯಲ್ಲಿ ಅನ್ಯಕೋಮಿನ ಯುವತಿಗೆ ಲಿಫ್ಟ್ ಕೊಟ್ಟಿದ್ದಕ್ಕೆ ಯುವಕನಿಗೆ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ನೈತಿಕ ಪೊಲೀಸ್​ ಗಿರಿ ಮೆರೆದ ಆರು ಜನರನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಜೂನ್ 26 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಎಂ.ಬಿ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನ್ಯಕೋಮಿನ ಯುವತಿಗೆ ಡ್ರಾಪ್​​ ಕೊಟ್ಟಿದ್ದಕ್ಕೆ​ ಯುವಕನಿಗೆ ಹಲ್ಲೆ: ನೈತಿಕ ಪೊಲೀಸ್​ ಗಿರಿ ಮೆರೆದ 6 ಜನ ಅರೆಸ್ಟ್​
ಪ್ರಾತಿನಿಧಿಕ ಚಿತ್ರ
Edited By:

Updated on: Jun 28, 2025 | 8:12 AM

ಕಲಬುರಗಿ, ಜೂನ್ 28: ಅನ್ಯಕೋಮಿನ ಯುವತಿಗೆ ಲಿಫ್ಟ್ ಕೊಟ್ಟಿದ್ದಕ್ಕೆ ಯುವಕನಿಗೆ ಹಲ್ಲೆ ಮಾಡಿ ನೈತಿಕ ಪೊಲೀಸ್​ ಗಿರಿ (moral policing) ಮೆರೆದಿರುವಂತಹ ಘಟನೆ ಜೂನ್​ 26ರ ಮಧ್ಯಾಹ್ನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಎಂ.ಬಿ.ನಗರ ಠಾಣೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ (arrested). ಮೊಹಮ್ಮದ್​​ ಸಲ್ಮಾನ್​​, ಮೊಹಮ್ಮದ್​ ಆದಿಲ್​, ಮೊಹಮ್ಮದ್ ರೆಹಾನ್, ಮೊಹಮ್ಮದ್ ಉಜೈರ್, ಮೊಹಮ್ಮದ್ ಫೈಜ್, ಮೊಹಮ್ಮದ್ ಆಸಿಫ್ ಬಂಧಿತರು.

ನಡೆದದ್ದೇನು?

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್​ ಆಗಿರುವ ಬೈಲಪ್ಪ, ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಅನ್ಯಕೋಮಿನ ಯುವತಿಗೆ ತಮ್ಮ ಬೈಕ್​​ನಲ್ಲಿ ಡ್ರಾಪ್ ನೀಡಿದ್ದಾರೆ. ಈ ವೇಳೆ ಬೈಕ್ ಅಡ್ಡಗಟ್ಟಿ‌ ಕಿಡಗೇಡಿಗಳು ತಮ್ಮ ಸಮುದಾಯದ ಯವತಿಯನ್ನು ಬೈಕ್ ಮೇಲೆ ಡ್ರಾಪ್ ಮಾಡಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ಎಂ.ಬಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೈಕ್​ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ: ಇಬ್ಬರ ಬಂಧನ

ಬೈಕ್​ನಲ್ಲಿ ಹೋಗುತ್ತಿದ್ದ ಯುವಕ, ಯುವತಿಯನ್ನ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದ ಇಬ್ಬರು ಆರೋಪಿಗಳನ್ನ ಬಿಡದಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಮನಗರ ನಿವಾಸಿಗಳಾದ ಮುಕ್ಸೂದ್, ಅಕ್ಮಲ್‌ಪಾಷಾ ಬಂಧಿತ ಆರೋಪಿಗಳು.

ಇದನ್ನೂ ಓದಿ: ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್

ರಾಮನಗರ ತಾಲೂಕಿನ ಭೈರಮಂಗಲ ಕ್ರಾಸ್ ಬಳಿ ಯುವಕನ ಜೊತೆ ಬೈಕ್​ನಲ್ಲಿ ಅನ್ಯಕೋಮಿನ ಯುವತಿ ಹೋಗುತ್ತಿದ್ದ ವೇಳೆ ಮತ್ತೊಂದು ಬೈಕ್​ನಲ್ಲಿ ಬಂದಿದ್ದ ಇಬ್ಬರು ಕಿಡಿಗೇಡಿಗಳು ಬೈಕ್ ಅಡ್ಡಗಟ್ಟಿ ಧಮ್ಕಿ ಹಾಕಿದ್ದರು. ಯುವತಿಯನ್ನ ನೀನು ಯಾಕೆ ಬೈಕ್​ನಲ್ಲಿ ಕರೆದುಕೊಂಡು ಹೋಗುತ್ತಿದ್ದಿಯಾ ಎಂದು ಅವಾಜ್ ಹಾಕಿದ್ದರು.

ಇದನ್ನೂ ಓದಿ: ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು: ಮೇಯರ್ ಸ್ಥಾನಕ್ಕೂ ಕುತ್ತು

ನಿಮ್ಮ ಮನೆಯವರಿಗೆ ಫೋನ್ ಮಾಡು ಎಂದು ಯುವತಿಗೆ ಬೆದರಿಕೆ ಹಾಕಿ‌ ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದರು. ಅಷ್ಟೇ ಅಲ್ಲದೆ ಈ ವೇಳೆ ಮೊಬೈಲ್​ನಲ್ಲಿ ವಿಡಿಯೊ ಮಾಡಿ ಫೇಸ್​ ಬುಕ್​ನಲ್ಲಿ ಹರಿಬಿಟ್ಟಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಕೂಡ ಆಗಿತ್ತು. ಹಿನ್ನೆಲೆಯಲ್ಲಿ ಬಿಡದಿ ಠಾಣೆ ಪೊಲೀಸರು ಸುಮೋಟೊ ಕೇಸ್ ದಾಖಲಿಸಿಕೊಂಡು ಕೋಮುಗಲಭೆಗೆ ಉತ್ತೇಜನ ನೀಡುವ ಆರೋಪದಡಿ ಇಬ್ಬರನ್ನ ಬಂಧಿಸಿದ್ದರು.

ಕರ್ನಾಟದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.