AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಚಿಕು ಸ್ನೇಹಿತನ ಪತ್ನಿ ಜೊತೆಯೇ ಅಕ್ರಮ ಸಂಬಂಧ! ಪ್ರಾಣ ಸ್ನೇಹಿತನ ಪ್ರಾಣವನ್ನೇ ತೆಗೆದ ಗೆಳೆಯ

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮುರಡಿ ಗ್ರಾಮದಲ್ಲಿ ಭೀಕರ ಘಟನೆ ನಡೆದಿದೆ. ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಗೆಳೆಯನನ್ನೇ ಸ್ನೇಹಿತ ವೈರ್​ನಿಂದ ಕತ್ತು ಬಿಗಿದು ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಕೊಲೆ ಮಾಡಿದ ಗೆಳಯ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಕುಚಿಕು ಸ್ನೇಹಿತನ ಪತ್ನಿ ಜೊತೆಯೇ ಅಕ್ರಮ ಸಂಬಂಧ! ಪ್ರಾಣ ಸ್ನೇಹಿತನ ಪ್ರಾಣವನ್ನೇ ತೆಗೆದ ಗೆಳೆಯ
ಅಂಬರೀಶ್, ಅಜಯ್​
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Jul 09, 2025 | 11:44 AM

Share

ಕಲಬುರಗಿ, ಜುಲೈ 09: ತನ್ನ ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನ ಪ್ರಾಣವನ್ನೇ (kill) ಗೆಳೆಯ ತೆಗೆದಿರುವಂತಹ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಮುರಡಿಯಲ್ಲಿ ನಡೆದಿದೆ. ವೈರ್​ನಿಂದ ಕತ್ತಿಗೆ ಬಿಗಿದು ಅಂಬರೀಶ್(28) ನನ್ನ ಅಜಯ್ ಹತ್ಯೆಗೈದಿದ್ದಾನೆ.​ ಕೊಲೆ ಮಾಡಿದ ಅಜಯ್ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಸದ್ಯ ಘಟನೆ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲಾಗಿದೆ.

ನಡೆದದ್ದೇನು?

ಅಂಬರೀಶ್ ಹಾಗೂ ಅಜಯ್ ಇಬ್ಬರು ಕುಚಿಕು ಗೆಳೆಯರು. ಆದರೆ ಅಜಯ್ ಪತ್ನಿ ಜೊತೆ ಅಂಬರೀಶ್ ಅಕ್ರಮ ಸಂಬಂಧ ಹೊಂದಿದ್ದ. ಹೀಗಾಗಿ ಕೆಲ ದಿನಗಳ ಹಿಂದೆ ಅಜಯ್​ ಪತ್ನಿ ಮನೆ ತೊರೆದಿದ್ದಳು. ನನ್ನ ಪತ್ನಿ ನಿನ್ನ ಮಾತು ಕೇಳುತ್ತಾಳೆ. ನನ್ನ ಜೊತೆ ಇರುವುದಕ್ಕೆ ಹೇಳುವಂತೆ ಬಾ ಎಂದು ಅಂಬರೀಶ್ ನನ್ನ ಅಜಯ್​ ಬೆಂಗಳೂರಿನಿಂದ ಮುರಡಿ ಗ್ರಾಮಕ್ಕೆ ಕರೆದುಕೊಂಡು ಬಂದಿದ್ದಾನೆ.

ಇದನ್ನೂ ಓದಿ: ಬೆಟ್ಟಿಂಗ್ ಚಟಕ್ಕೆ ಬಿದ್ದು ತಂದೆ ಆಸ್ತಿ ಮಾರಿಸಿದ ಮಗ: ಆದರೂ ಬುದ್ಧಿ ಕಲಿಯದ ಇಂಜಿನಿಯರ್‌ ಕಳ್ಳನಾದ!

ಇದನ್ನೂ ಓದಿ
Image
ಬೆಂಗಳೂರು, ಕೋಲಾರದಲ್ಲಿ NIA ದಾಳಿ: ಮೂವರು ಶಂಕಿತ ಉಗ್ರರ ಬಂಧನ
Image
ಬೆಟ್ಟಿಂಗ್ ಚಟಕ್ಕೆ ಬಿದ್ದು ತಂದೆ ಆಸ್ತಿ ಮಾರಿಸಿದ ಮಗ: ಇಂಜಿನಿಯರ್‌ ಕಳ್ಳನಾದ
Image
ಮದ್ವೆಯಾಗಲು ನಿರಾಕರಿಸಿದ ಸೊಸೆ ಮೇಲೆ ಆ್ಯಸಿಡ್ ಎರಚಿದ ಸೋದರ ಮಾವ‌
Image
ಅನುಮಾನದ ಭೂತ: ಪತ್ನಿಯ ಮುಖವನ್ನು ಚಾಕುವಿನಿಂದ ವಿರೂಪಗೊಳಿಸಿದ ಪತಿ!

ಈ ವೇಳೆ ತನ್ನ ಮನೆಯಲ್ಲಿ ವೈರ್​ನಿಂದ ಕತ್ತಿಗೆ ಬಿಗಿದು ಅಂಬರೀಶ್​ನನ್ನ ಅಜಯ್ ಹತ್ಯೆ ಮಾಡಿದ್ದಾನೆ. ಸ್ನೇಹಿತ ನನ್ನು ಕೊಲೆ ಮಾಡುವುದಷ್ಟೆ ಅಲ್ಲದೆ ಅಜಯ್​ ಸ್ವತಃ ಪೊಲೀಸರಿಗೆ ಕರೆ ಮಾಡಿ ಮಾಹಿತಿ‌ ನೀಡಿದ್ದಾನೆ. ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ದಾವಣಗೆರೆಯಲ್ಲಿ ಇಬ್ಬರು ಅಂತಾರಾಜ್ಯ ಮಹಿಳಾ ಕಳ್ಳಿಯರ ಬಂಧನ

ದಾವಣಗೆರೆಯಲ್ಲಿ ಇಬ್ಬರು ಅಂತಾರಾಜ್ಯ ಮಹಿಳಾ ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ನಗರದ ಕೆಟಿಜೆ ನಗರ ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದ ನಿವಾಸಿ ಆರ್.ಮಂಜುಳಾ(32), ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ನಿವಾಸಿ ಪೂರ್ಣಿಮಾ(20) ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು, ಕೋಲಾರದಲ್ಲಿ NIA ದಾಳಿ: ಒಟ್ಟು ಮೂವರು ಶಂಕಿತ ಉಗ್ರರ ಬಂಧನ..!

ಸದ್ಯ ಬಂಧಿತರಿಂದ 15 ಲಕ್ಷ ರೂ. ಮೌಲ್ಯದ 155 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ದಾವಣಗೆರೆ ಕೇಂದ್ರ ಬಸ್ ನಿಲ್ದಾಣದಲ್ಲಿ ಟಿ.ಸುಧಾ ಎಂಬುವರ ಚಿನ್ನಾಭರಣಗಳನ್ನು ಕಳ್ಳಿಯರು ಕದ್ದಿದ್ದರು. ದಾವಣಗೆರೆ ರೈಲ್ವೆ ಪೊಲೀಸ್ ಠಾಣೆ, ಬಡಾವಣೆ ಪೊಲೀಸ್ ಠಾಣೆ, ಚಿತ್ರದುರ್ಗ ನಗರದ ಕೋಟೆ ಪೊಲೀಸ್​​ ಠಾಣೆ, ಹೊಳಲ್ಕೆರೆ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:42 am, Wed, 9 July 25

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು