ಕಲಬುರಗಿ: ಸಂಸದ ಉಮೇಶ್​ ಜಾಧವ್ ಬೆಂಬಲಿಗನ ಬರ್ಬರ ಹತ್ಯೆ

ಕಲಬುರಗಿ ಸಂಸದ ಉಮೇಶ್​ ಜಾಧವ್​ ಬೆಂಬಲಿಗನೂ ಆಗಿರುವ ಬಿಜೆಪಿ ಮುಖಂಡ ಗಿರೀಶ್ ಚಕ್ರ ಅವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ನಡೆದಿದೆ. ನಾಲ್ಕು ದಿನಗಳ ಹಿಂದೆಯಷ್ಟೇ BSNL ಸಲಹಾ ಸಮಿತಿ ನಿರ್ದೇಶಕರನ್ನಾಗಿ ಗಿರೀಶ್ ಅವರನ್ನು ಸಂಸದ ಉಮೇಶ್ ಜಾಧವ್ ನೇಮಕ ಮಾಡಿದ್ದರು.

ಕಲಬುರಗಿ: ಸಂಸದ ಉಮೇಶ್​ ಜಾಧವ್ ಬೆಂಬಲಿಗನ ಬರ್ಬರ ಹತ್ಯೆ
ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ಸಂಸದ ಉಮೇಶ್​ ಜಾಧವ್ ಬೆಂಬಲಿಗ ಗಿರೀಶ್ ಚಕ್ರನ ಬರ್ಬರ ಹತ್ಯೆ
Follow us
| Updated By: Rakesh Nayak Manchi

Updated on:Mar 01, 2024 | 8:54 AM

ಕಲಬುರಗಿ, ಮಾ.1: ಸಂಸದ ಡಾ. ಉಮೇಶ್​ ಜಾಧವ್ (Dr. Umesh Jadhav)​ ಬೆಂಬಲಿಗನೂ ಆಗಿರುವ ಬಿಜೆಪಿ ಮುಖಂಡರೊಬ್ಬರನ್ನು ಬರ್ಬರವಾಗಿ ಹತ್ಯೆ (Murder) ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ನಡೆದಿದೆ. ಗಿರೀಶ್ ಚಕ್ರ ಕೊಲೆಯಾದ ಬಿಜೆಪಿ ಮುಖಂಡ. ನಾಲ್ಕು ದಿನಗಳ ಹಿಂದೆಯಷ್ಟೇ BSNL ಸಲಹಾ ಸಮಿತಿ ನಿರ್ದೇಶಕರನ್ನಾಗಿ ಗಿರೀಶ್ ಅವರನ್ನು ಸಂಸದ ಉಮೇಶ್ ಜಾಧವ್ ನೇಮಕ ಮಾಡಿದ್ದರು.

ಈ ಹಿನ್ನೆಲೆ ಪಾರ್ಟಿ ಕೊಡುವುದಾಗಿ ನಂಬಿಸಿ ಗಿರೀಶ್ ಚಕ್ರ ಅವರನ್ನು ಸ್ನೇಹಿತರೇ ಜಮೀನಿಗೆ ಕರೆಸಿದ್ದರು. ಅದರಂತೆ ಜಮೀನಿಗೆ ಬಂದ ಗಿರೀಶ್ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಗಾಣಗಾಪುರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮುಖ ಜಜ್ಜಿ ಅಪರಿಚಿತ ಮಹಿಳೆಯನ್ನ ಕೊಲೆಗೈದ ದುಷ್ಕರ್ಮಿಗಳು

ಗಿರೀಶ್​ ನನ್ನ ಕಟ್ಟಾ ಬೆಂಬಲಿಗ: ಸಂಸದ ಉಮೇಶ್ ಜಾಧವ್

ಕೊಲೆ ಬಗ್ಗೆ ಟಿವಿ9 ಜೊತೆ ಮಾತನಾಡಿದ ಸಂಸದ ಉಮೇಶ್ ಜಾಧವ್, ಗಿರೀಶ್ ಚಕ್ರ​​ ಕೊಲೆ ವಿಚಾರ ತಿಳಿದು ಆಘಾತ ಉಂಟಾಗಿದೆ. ಗಿರೀಶ್​ ನನ್ನ ಕಟ್ಟಾ ಬೆಂಬಲಿಗನಾಗಿದ್ದ. ಉತ್ತಮ ಕೆಲಸಗಾರ, ಆತನ ಬಗ್ಗೆ ಒಳ್ಳೆಯ ಅಭಿಪ್ರಾಯ ಇತ್ತು. ಬಿಎಸ್​​ಎನ್​ಎಲ್​​ ಸಲಹಾ ಸಮಿತಿ ನಿರ್ದೇಶಕನಾಗಿದ್ದ. ಗಿರೀಶ್​ ಚಕ್ರಗೆ ಯಾವುದೇ ವಿರೋಧಿಗಳು ಇರಲಿಲ್ಲ. ಗಿರೀಶ್ ಚಕ್ರ​​ ಕೊಲೆ ವಿಚಾರ ತಿಳಿದು ತುಂಬಾ ನೋವಾಗಿದೆ. ಆರೋಪಿಗಳನ್ನು ಬಂಧಿಸಿ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:11 am, Fri, 1 March 24

ತಾಜಾ ಸುದ್ದಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ