AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಸಂಸದ ಉಮೇಶ್​ ಜಾಧವ್ ಬೆಂಬಲಿಗನ ಬರ್ಬರ ಹತ್ಯೆ

ಕಲಬುರಗಿ ಸಂಸದ ಉಮೇಶ್​ ಜಾಧವ್​ ಬೆಂಬಲಿಗನೂ ಆಗಿರುವ ಬಿಜೆಪಿ ಮುಖಂಡ ಗಿರೀಶ್ ಚಕ್ರ ಅವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ನಡೆದಿದೆ. ನಾಲ್ಕು ದಿನಗಳ ಹಿಂದೆಯಷ್ಟೇ BSNL ಸಲಹಾ ಸಮಿತಿ ನಿರ್ದೇಶಕರನ್ನಾಗಿ ಗಿರೀಶ್ ಅವರನ್ನು ಸಂಸದ ಉಮೇಶ್ ಜಾಧವ್ ನೇಮಕ ಮಾಡಿದ್ದರು.

ಕಲಬುರಗಿ: ಸಂಸದ ಉಮೇಶ್​ ಜಾಧವ್ ಬೆಂಬಲಿಗನ ಬರ್ಬರ ಹತ್ಯೆ
ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ಸಂಸದ ಉಮೇಶ್​ ಜಾಧವ್ ಬೆಂಬಲಿಗ ಗಿರೀಶ್ ಚಕ್ರನ ಬರ್ಬರ ಹತ್ಯೆ
ದತ್ತಾತ್ರೇಯ ಪಾಟೀಲ್​
| Edited By: Rakesh Nayak Manchi|

Updated on:Mar 01, 2024 | 8:54 AM

Share

ಕಲಬುರಗಿ, ಮಾ.1: ಸಂಸದ ಡಾ. ಉಮೇಶ್​ ಜಾಧವ್ (Dr. Umesh Jadhav)​ ಬೆಂಬಲಿಗನೂ ಆಗಿರುವ ಬಿಜೆಪಿ ಮುಖಂಡರೊಬ್ಬರನ್ನು ಬರ್ಬರವಾಗಿ ಹತ್ಯೆ (Murder) ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ನಡೆದಿದೆ. ಗಿರೀಶ್ ಚಕ್ರ ಕೊಲೆಯಾದ ಬಿಜೆಪಿ ಮುಖಂಡ. ನಾಲ್ಕು ದಿನಗಳ ಹಿಂದೆಯಷ್ಟೇ BSNL ಸಲಹಾ ಸಮಿತಿ ನಿರ್ದೇಶಕರನ್ನಾಗಿ ಗಿರೀಶ್ ಅವರನ್ನು ಸಂಸದ ಉಮೇಶ್ ಜಾಧವ್ ನೇಮಕ ಮಾಡಿದ್ದರು.

ಈ ಹಿನ್ನೆಲೆ ಪಾರ್ಟಿ ಕೊಡುವುದಾಗಿ ನಂಬಿಸಿ ಗಿರೀಶ್ ಚಕ್ರ ಅವರನ್ನು ಸ್ನೇಹಿತರೇ ಜಮೀನಿಗೆ ಕರೆಸಿದ್ದರು. ಅದರಂತೆ ಜಮೀನಿಗೆ ಬಂದ ಗಿರೀಶ್ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಗಾಣಗಾಪುರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮುಖ ಜಜ್ಜಿ ಅಪರಿಚಿತ ಮಹಿಳೆಯನ್ನ ಕೊಲೆಗೈದ ದುಷ್ಕರ್ಮಿಗಳು

ಗಿರೀಶ್​ ನನ್ನ ಕಟ್ಟಾ ಬೆಂಬಲಿಗ: ಸಂಸದ ಉಮೇಶ್ ಜಾಧವ್

ಕೊಲೆ ಬಗ್ಗೆ ಟಿವಿ9 ಜೊತೆ ಮಾತನಾಡಿದ ಸಂಸದ ಉಮೇಶ್ ಜಾಧವ್, ಗಿರೀಶ್ ಚಕ್ರ​​ ಕೊಲೆ ವಿಚಾರ ತಿಳಿದು ಆಘಾತ ಉಂಟಾಗಿದೆ. ಗಿರೀಶ್​ ನನ್ನ ಕಟ್ಟಾ ಬೆಂಬಲಿಗನಾಗಿದ್ದ. ಉತ್ತಮ ಕೆಲಸಗಾರ, ಆತನ ಬಗ್ಗೆ ಒಳ್ಳೆಯ ಅಭಿಪ್ರಾಯ ಇತ್ತು. ಬಿಎಸ್​​ಎನ್​ಎಲ್​​ ಸಲಹಾ ಸಮಿತಿ ನಿರ್ದೇಶಕನಾಗಿದ್ದ. ಗಿರೀಶ್​ ಚಕ್ರಗೆ ಯಾವುದೇ ವಿರೋಧಿಗಳು ಇರಲಿಲ್ಲ. ಗಿರೀಶ್ ಚಕ್ರ​​ ಕೊಲೆ ವಿಚಾರ ತಿಳಿದು ತುಂಬಾ ನೋವಾಗಿದೆ. ಆರೋಪಿಗಳನ್ನು ಬಂಧಿಸಿ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:11 am, Fri, 1 March 24

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!