AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಆರೋಪಿ ಜೊತೆಗಿನ ಕಾಂಗ್ರೆಸ್ ಶಾಸಕನ ಫೋಟೋ ವೈರಲ್

ಕಲಬುರಗಿ ನಗರದ ಹೊರವಲಯದ ಕೊಟನೂರು ಡಿ ಗ್ರಾಮದ ಬಳಿ ಡಾ. ಬಿಆರ್ ಅಂಬೇಡ್ಕರ್ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಗಮೇಶ, ಶಾಸಕ ಅಲ್ಲಮಪ್ರಭು ಪಾಟೀಲ್ ಜೊತೆಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಕಲಬುರಗಿ: ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಆರೋಪಿ ಜೊತೆಗಿನ ಕಾಂಗ್ರೆಸ್ ಶಾಸಕನ ಫೋಟೋ ವೈರಲ್
ಶಾಸಕ ಅಲ್ಲಮಪ್ರಭು ಪಾಟೀಲ್, ಆರೋಪಿ ಸಂಗಮೇಶ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಆಯೇಷಾ ಬಾನು|

Updated on: Jan 25, 2024 | 10:38 AM

Share

ಕಲಬುರಗಿ, ಜ.25: ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ (Ambedkar Statue) ಅಪಮಾನ ಮಾಡಿದ್ದ ಪ್ರಕರಣ‌ ಸಂಬಂಧ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ್ದು ಕಾಂಗ್ರೆಸ್ ಕಾರ್ಯಕರ್ತನಾ? (Congress Worker) ಎಂಬ ಪ್ರಶ್ನೆ ಎದ್ದಿದೆ. ಆರೋಪಿ ಸಂಗಮೇಶ, ಶಾಸಕ ಅಲ್ಲಮಪ್ರಭು ಪಾಟೀಲ್ (Allama Prabhu Patil) ಜೊತೆಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಕಲಬುರಗಿ ನಗರದ ಹೊರವಲಯದ ಕೊಟನೂರು ಡಿ ಗ್ರಾಮದ ಬಳಿ ಡಾ. ಬಿಆರ್ ಅಂಬೇಡ್ಕರ್ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ. 26 ವರ್ಷದ ಕಿರಣ್, 25 ವರ್ಷದ ಹನುಮಂತ, 31 ವರ್ಷದ ಮಾನು ಹಾಗೂ 38 ವರ್ಷದ ಸಂಗಪ್ಪ ಅಲಿಯಾಸ್ ಸಂಗಮೇಶ್ ಸೇರಿದಂತೆ ನಾಲ್ವರನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪೈಕಿ ಆರೋಪಿ ಸಂಗಮೇಶ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಜೊತೆಗಿನ ಫೋಟೋಗಳು ವೈರಲ್ ಆಗಿವೆ. ಇನ್ನುಳಿದ ಬಂಧಿತ ಆರೋಪಿಗಳಾದ ಹಣಮಂತ, ಕಿರಣ್ ಮತ್ತು ಮಾನು ಸಹ ಕೋಟನೂರ ಗ್ರಾಮಸ್ಥರು. ಆದರೆ ತನ್ನ ಜೊತೆಗೆ ಫೋಟೋ ತೆಗೆಸಿಕೊಂಡ ಆರೋಪಿ ಕೈ ಕಾರ್ಯಕರ್ತ ಅಲ್ಲ ಎಂದು ಶಾಸಕರು ತಿಳಿಸಿದ್ದಾರೆ.

ಚುನಾವಣೆ ವೇಳೆ ಪ್ರಚಾರ, ಓಡಾಡೋ ಫೋಟೋ ಬಳಸಿ ಅಪಪ್ರಚಾರ‌ ಮಾಡಲಾಗುತ್ತಿದೆ. ನನ್ನ ತೆಜೋವಧೆ ಮಾಡುವಂತ ಕೆಲಸ ಮಾಡಲಾಗುತ್ತಿದೆ. ನನ್ನ ಅನುಯಾಯಿ ಅಂತ ಬಿಂಬಿಸೋ ಪ್ರಯತ್ನ ಮಾಡಲಾಗುತ್ತಿದೆ. ಇಂತದೆಕ್ಕೆಲ್ಲಾ ನಾನು ಆಸ್ಪದ ನೀಡೋದಿಲ್ಲ. ನಾನು ಬುದ್ದ, ಬಸವ, ಅಂಬೇಡ್ಕರ್ ಅನುಯಾಯಿ‌‌. ಅಂಬೇಡ್ಕರ್ ಪ್ರತಿಮೆಗೆ ಯಾರೇ ಅಪಮಾನ ಮಾಡಿದ್ರು. ಅವರಿಗೆ ಉಗ್ರವಾದ ಶಿಕ್ಷೆಯಾಗಬೇಕು ಅಂತ ಹೇಳಿದ್ದೇನೆ. ನನ್ನ ಪುತ್ರನೇ ಇಂತಹ ಕೆಲಸ ಮಾಡಿದ್ರು ನಾನು ಸಹಿಸೋದಿಲ್ಲ ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್​ ಮೊಮ್ಮಗನ ಮೊರೆ ಹೋದ ಕುಮಾರಸ್ವಾಮಿ, ಕೋಲಾರದಲ್ಲಿ ಸಿದ್ದರಾಮಯ್ಯನನ್ನು ಸೋಲಿಸಲು ಮಾಹಾ ಪ್ಲಾನ್

ಡಾ ಅಂಬೇಡ್ಕರ್ ಮೂರ್ತಿಗೆ ಅಪಮಾನ ಮಾಡಿದ ಘಟನೆ ಖಂಡಿಸಿ ನಗರದಲ್ಲಿ ವಿವಿಧ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಇನ್ನು ಈ ಘಟನೆ ಸಂಬಂಧ ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿರೋ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿವಿ ಠಾಣೆ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ. ನಿನ್ನೆ ಕೆಲವೆಡೆ ಕಲ್ಲು ತೂರಾಟ ನಡೆಸಲಾಗಿದ್ದು, ಕಲ್ಲು ತೂರಾಟ ನಡೆಸಿದವರು ಅಂಬೇಡ್ಕರ್ ಅಭಿಮಾನಿಗಳಲ್ಲ ಅಂತಾ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಧರಣಿ ಮಾಡೋಕೆ ಅವಕಾಶವಿದ್ದು, ಅದು ಬಿಟ್ಟು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವುದು ಸರಿಯಲ್ಲವೆಂದಿದ್ದಾರೆ. ಅಂಬೇಡ್ಕರ್‌ರನ್ನ ಅವಮಾನ ಮಾಡಿದ್ದವರನ್ನ ಬಂಧಿಸಲಾಗಿದ್ದು, ಪ್ರತಿಭಟನೆ ವೇಳೆ ಆಸ್ತಿಪಾಸ್ತಿ ಹಾನಿ ಮಾಡಿದವರನ್ನ ಸಹ ಅರೆಸ್ಟ್ ಮಾಡುತ್ತೇವೆಂದು ಹೇಳಿದ್ದಾರೆ. ಇನ್ನೂ ಬಸವಣ್ಣ ಹಾಗೂ ಅಂಬೇಡ್ಕರ್‌ರನ್ನ ಅವಮಾನಿಸೋದು ಮನುವಾದಿಗಳ ಕೆಲಸವೆಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

SENA ದೇಶಗಳ ವಿರುದ್ಧ ಪಾರುಪತ್ಯ ಮುಂದುವರೆಸಿದ ಬುಮ್ರಾ
SENA ದೇಶಗಳ ವಿರುದ್ಧ ಪಾರುಪತ್ಯ ಮುಂದುವರೆಸಿದ ಬುಮ್ರಾ
ಸಾಲುಮರದ ತಿಮ್ಮಕ್ಕ ಕೊನೆ ಆಸೆ ಏನಿತ್ತು? ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ
ಸಾಲುಮರದ ತಿಮ್ಮಕ್ಕ ಕೊನೆ ಆಸೆ ಏನಿತ್ತು? ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ
ಕ್ರಾಂತಿ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆ ತಂದ ಬಿಹಾರ ರಿಸಲ್ಟ್​!
ಕ್ರಾಂತಿ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆ ತಂದ ಬಿಹಾರ ರಿಸಲ್ಟ್​!
ವೃಕ್ಷಮಾತೆ ಸಾಲುಮರದ ತಿಮ್ಮಕ್ಕರ ಅಂತಿಮ ಕ್ಷಣ ಹೇಗಿತ್ತು?
ವೃಕ್ಷಮಾತೆ ಸಾಲುಮರದ ತಿಮ್ಮಕ್ಕರ ಅಂತಿಮ ಕ್ಷಣ ಹೇಗಿತ್ತು?
ಚುನಾವಣಾ ಆಯೋಗ ಆರ್​ಎಸ್​ಎಸ್​ ಘಟಕವೇ? ಬಿಕೆ ಹರಿಪ್ರಸಾದ್ ಟೀಕೆ
ಚುನಾವಣಾ ಆಯೋಗ ಆರ್​ಎಸ್​ಎಸ್​ ಘಟಕವೇ? ಬಿಕೆ ಹರಿಪ್ರಸಾದ್ ಟೀಕೆ
ಬಿಹಾರದಲ್ಲಿ ಎನ್​ಡಿಎ ಜಯಭೇರಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ
ಬಿಹಾರದಲ್ಲಿ ಎನ್​ಡಿಎ ಜಯಭೇರಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ
ಹಾಸ್ಟೆಲ್​ನಲ್ಲಿ ಅನ್ನದ ಪಾತ್ರೆಯೊಳಗೆ ಕಾಲಿಟ್ಟು ಮಲಗಿದ ಕಾವಲುಗಾರ
ಹಾಸ್ಟೆಲ್​ನಲ್ಲಿ ಅನ್ನದ ಪಾತ್ರೆಯೊಳಗೆ ಕಾಲಿಟ್ಟು ಮಲಗಿದ ಕಾವಲುಗಾರ
ಎನ್ಡಿಎಗೆ ಬಹುಮತ ಬರುತ್ತಿದ್ದಂತೆ ಕಾಂಗ್ರೆಸ್​ನಿಂದ ಶುರುವಾಯ್ತು ಪ್ರತಿಭಟನೆ
ಎನ್ಡಿಎಗೆ ಬಹುಮತ ಬರುತ್ತಿದ್ದಂತೆ ಕಾಂಗ್ರೆಸ್​ನಿಂದ ಶುರುವಾಯ್ತು ಪ್ರತಿಭಟನೆ
ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ: ADGP ಏನಂದ್ರು?
ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ: ADGP ಏನಂದ್ರು?
ದುಡ್ಡು ಕೊಟ್ಟು ‘ಜೈ’ ಸಿನಿಮಾ ಮೊದಲ ಟಿಕೆಟ್ ಖರೀದಿಸಿದ ಸುದೀಪ್
ದುಡ್ಡು ಕೊಟ್ಟು ‘ಜೈ’ ಸಿನಿಮಾ ಮೊದಲ ಟಿಕೆಟ್ ಖರೀದಿಸಿದ ಸುದೀಪ್