AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಕಂಡಕ್ಟರ್ ಆಗಲು ಅಕ್ರಮ, ಮತ್ತೊಬ್ಬ ಅಭ್ಯರ್ಥಿಯ ಕಳ್ಳಾಟ ಪತ್ತೆ: ಗೋಧಿಹಿಟ್ಟನ್ನು ಹೀಗೂ ಬಳಸಬಹುದು

ಅಕ್ರಮವಾಗಿ ದೈಹಿಕ ಪರೀಕ್ಷೆ ಪಾಸಾಗಲು ತೊಡೆಗೆ ಗೋದಿ ಹಿಟ್ಟನ್ನು ಮೆತ್ತಿಕೊಂಡು ಬಂದಿದ್ದ ಓರ್ವ ಅಭ್ಯರ್ಥಿ ಕಳ್ಳಾಟ ಬಯಲಾಗಿದೆ.

TV9 Web
| Edited By: ಆಯೇಷಾ ಬಾನು|

Updated on:Feb 11, 2023 | 8:02 AM

Share

ಕಲಬುರಗಿ: ಕಾಲಿನಲ್ಲಿ ಕಬ್ಬಿಣದ ಪೀಸ್​ಗಳು, ಒಳ ಉಡುಪಲ್ಲಿ ಕೆಜಿ ಕಲ್ಲು, ಶರ್ಟ್​ ಜೇಬು ಒಳಗೆ ಐರನ್ ಪೀಸ್​ಗಳನ್ನು ಇಟ್ಟುಕೊಂಡು ಬಂದು ಸರ್ಕಾರಿ ಹುದ್ದೆ ಪಡೆಯಬೇಕೆಂದು ಕೊಂಡಿದ್ದ ಖತರ್ನಾಕ್ ಕಿಲಾಡಿಗಳು ನಿನ್ನೆ ಸಿಕ್ಕಿಬಿದ್ದಿದ್ದರು. ಈಗ ಇದೇ ರೀತಿಯ ಮತ್ತೊಂದು ಐಡಿಯಾ ನೋಡಿ ಕೆಲಸ ಪಡೆಯಲೇ ಬೇಕು ಎಂದು ಬಂದಿದ್ದ ಮತ್ತೊಬ್ಬ ಕಿಲಾಡಿ ಸಿಕ್ಕಿಬಿದ್ದಿದ್ದಾನೆ. ಅಕ್ರಮವಾಗಿ ದೈಹಿಕ ಪರೀಕ್ಷೆ ಪಾಸಾಗಲು ತೊಡೆಗೆ ಗೋದಿ ಹಿಟ್ಟನ್ನು ಮೆತ್ತಿಕೊಂಡು ಬಂದಿದ್ದ ಓರ್ವ ಅಭ್ಯರ್ಥಿ ಕಳ್ಳಾಟ ಬಯಲಾಗಿದೆ.

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 1619 ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿ ಮಾಡಿಕೊಳ್ತಿದೆ. ಇದಕ್ಕೆ 38 ಸಾವಿರ ಅಭ್ಯರ್ಥಿಗಳು ಅರ್ಜಿ ಹಾಕಿದ್ದಾರೆ. ಮೊದಲ ಹಂತದಲ್ಲಿ, ದಾಖಲಾತಿ ಪರಿಶೀಲನೆ, ದೇಹದಾರ್ಡ್ಯ ಪರೀಕ್ಷೆ ನಡೆಸಲಾಗುತ್ತಿದೆ. ಚಾಲಕ ಕಂ ನಿರ್ವಾಹಕನಾಗಲು 55 ಕೆಜಿ ತೂಕ, 163 ಸೆಂಟಿ ಮೀಟರ್ ಎತ್ತರವಿರಬೇಕು. ಆದ್ರೆ, ಟೆಸ್ಟ್​ಗೆ ಬಂದಿದ್ದ ನಾಲ್ವರು ಖದೀಮರು ತೂಕ ಹೆಚ್ಚಳಕ್ಕಾಗಿ ಒಳ ಉಡುಪಲ್ಲಿ ಕೆಜಿ ಕಲ್ಲು, ಕಾಲುಗಳಿಗೆ, ಸೊಂಟಕ್ಕೆ ಕಬ್ಬಿಣದ ಪೀಸ್​ಗಳನ್ನು ಕಟ್ಟಿಕೊಂಡಿದ್ರು. ಅಲ್ಲದೇ ಶರ್ಟ್​​ ಒಳಗೆ ಜೇಬುಗಳನ್ನ ಮಾಡಿಸಿಕೊಂಡು ಕಬ್ಬಿಣದ ಪೀಸ್​ಗಳನ್ನು ಹುದುಗಿಸಿಟ್ಟಿದ್ರು. ಈ ಖದೀಮರ ಕಳ್ಳಾಟ ಕಂಡು ಅಧಿಕಾರಿಗಳೇ ಶಾಕ್ ಆಗಿದ್ದರು. ಇದೇ ರೀತಿಯ ಖತರ್ನಾಕ್ ಐಡಿಯಾ ಮಾಡಿಕೊಂಡು ಬಂದಿದ್ದ ಮತ್ತೋರ್ವ ಅಭ್ಯರ್ಥಿ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ಓದಿ: ಉದ್ಯೋಗಕ್ಕಾಗಿ ಅಡ್ಡದಾರಿ! ಕಂಡಕ್ಟರ್​ ಕೆಲಸ ಪಡೆಯಲು ಈ ಕಿಲಾಡಿಗಳು ಮಾಡಿದ ಪ್ಲಾನ್ ಕೇಳಿದ್ರೆ, ಶಾಕ್ ಆಗ್ತೀರಿ

ತೊಡೆಗೆ ಗೋದಿ ಹಿಟ್ಟನ್ನು ಮೆತ್ತಿಕೊಂಡು ಬಂದಿದ್ದ ಖದೀಮನ ಕಳ್ಳಾಟ ಬಯಲು

ಅಕ್ರಮವಾಗಿ ದೈಹಿಕ ಪರೀಕ್ಷೆ ಪಾಸಾಗಲು ಯತ್ನಿಸಿದ ಓರ್ವ ಅಭ್ಯರ್ಥಿ ತನ್ನ ತೊಡೆಗೆ ಗೋದಿ ಹಿಟ್ಟನ್ನು ಮೆತ್ತಿಕೊಂಡು ಬಂದ್ದಿದ್ದಾನೆ. ಇಲಾಖೆಯ ಸಿಬ್ಬಂದಿ ಪರಿಶೀಲನೆ ವೇಳೆ ಅಭ್ಯರ್ಥಿ ಕಳ್ಳಾಟ ಬಯಲಾಗಿದೆ. ಸದ್ಯ ಅಭ್ಯರ್ಥಿಯನ್ನು ನೇಮಕಾತಿ ಪ್ರಕ್ರಿಯೆಯಿಂದಲೇ ಕೈಬಿಡಲಾಗಿದೆ. ಮಾನವೀಯತೆ ದೃಷ್ಟಿಯಿಂದ ಕೇಸ್​​ ದಾಖಲಿಸದೆ ಬಿಟ್ಟು ಕಳಿಸಲಾಗಿದೆ. ಹೆಚ್ಚು ತೂಕವನ್ನು ತೋರಿಸಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿರುವುದು ಇಲಾಖೆ ಅಧಿಕಾರಿಗಳಿಗೆ ತಲೆ ನೋವಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:00 am, Sat, 11 February 23

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ