AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ; 4.1 ರಷ್ಟು ತೀವ್ರತೆ ದಾಖಲು

Kalaburagi News: ರಾತ್ರಿ 9.52ರ ಸುಮಾರಿಗೆ ಭೂಮಿ ಕಂಪಿಸಿರುವ ಅನುಭವ ಆಗಿದೆ. ರಿಕ್ಟರ್​ ಮಾಪಕದಲ್ಲಿ 4.1 ರಷ್ಟು ತೀವ್ರತೆ ದಾಖಲಾಗಿದೆ. ಪದೇ ಪದೆ ಭೂಮಿ ಕಂಪಿಸುತ್ತಿರುವ ಹಿನ್ನೆಲೆ ಜನರಲ್ಲಿ ಆತಂಕ ಹೆಚ್ಚಾಗಿದೆ.

ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ; 4.1 ರಷ್ಟು ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 11, 2021 | 10:59 PM

Share

ಕಲಬುರಗಿ: ಜಿಲ್ಲೆಯ ಹಲವೆಡೆ ಭೂಮಿ ಮತ್ತೆ ಕಂಪಿಸಿದೆ. ಚಿಂಚೋಳಿ, ಕಾಳಗಿ ತಾಲೂಕಿನಲ್ಲಿ ಲಘು ಭೂಕಂಪನ ಉಂಟಾಗಿದೆ. ಕೋಡ್ಲಿ, ಹೊಡೆಬಿರನಳ್ಳಿ, ಗಡಿಕೇಶ್ವರ, ಹೊಸಳ್ಳಿ ಸೇರಿ, 50ಕ್ಕೂ ಹೆಚ್ಚು ಗ್ರಾಮಗಳಲ್ಲಿ ಮತ್ತೆ ಭೂಮಿ ಕಂಪಿಸಿದೆ. ರಾತ್ರಿ 9.52ರ ಸುಮಾರಿಗೆ ಭೂಮಿ ಕಂಪಿಸಿರುವ ಅನುಭವ ಆಗಿದೆ. ರಿಕ್ಟರ್​ ಮಾಪಕದಲ್ಲಿ 4.1 ರಷ್ಟು ತೀವ್ರತೆ ದಾಖಲಾಗಿದೆ. ಪದೇ ಪದೆ ಭೂಮಿ ಕಂಪಿಸುತ್ತಿರುವ ಹಿನ್ನೆಲೆ ಜನರಲ್ಲಿ ಆತಂಕ ಹೆಚ್ಚಾಗಿದೆ.

ಜಿಲ್ಲೆಯ ಹಲವೆಡೆ ನಿನ್ನೆ ಭೂಕಂಪನವಾಗಿತ್ತು. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ಹಲಚೇರಾ, ತೇಗಲತಿಪ್ಪಿ, ಬೆನಕನಳ್ಳಿ, ಭೂತನೂರ, ಹೊಸಳ್ಳಿ ಸೇರಿ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿತ್ತು. ಪದೇ ಪದೇ ಭೂಮಿ ಕಂಪಿಸುತ್ತಿದ್ದರು ಅಧಿಕಾರಿಗಳು ಮಾತ್ರ ಈ ಬಗ್ಗೆ ಗಮನಹರಿಸಿಲ್ಲ. ಹೀಗಾಗಿ ಸಿಟ್ಟಿಗೆದ್ದ ಗ್ರಾಮಸ್ಥರು ಇಂದು (ಅಕ್ಟೋಬರ್ 11) ಹೋರಾಟಕ್ಕೆ ಮುಂದಾಗಿದ್ದರು.

ಅಧಿಕಾರಿಗಳು ಬರುತ್ತಾರೆ ಹೋಗುತ್ತಾರೆ. ನಮಗೆ ನಿಖರವಾದ ಮಾಹಿತಿ ಯಾರು ಹೇಳುವುದಿಲ್ಲ. ಅಪಾಯದ ಮುನ್ಸೂಚನೆ ಇದ್ದರೆ ಗ್ರಾಮಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿ ಎಂದು ಭೀತಿಗೊಳಗಾದ ಜನರು ಆಕ್ರೋಶ ವ್ಯಕ್ತಪಡಿಸಿದ್ದರು.

ಅಕ್ಟೋಬರ್​ 9 ರಂದು ಕೂಡ ಭೂಮಿ ಕಂಪಿಸಿದೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಅಕ್ಟೋಬರ್ 9ರಂದು ಕೂಡ ಲಘು ಭೂಕಂಪದ ಅನುಭವವಾಗಿತ್ತು. ನಸುಕಿನ ಜಾವ 5.40 ರ ಸಮಯದಲ್ಲಿ ಎರಡು ಬಾರಿ ಲಘು ಭೂಕಂಪನದ ಅನುಭವವಾಗಿತ್ತು. ಕಂಪನಕ್ಕೆ ಮನೆಯಲ್ಲಿದ್ದ ಪಾತ್ರೆಗಳು ಕೆಳಗೆ ಬಿದ್ದಿದ್ದು, ಆತಂಕದಿಂದ ಮನೆಯಿಂದ ಹೊರಬಂದ ಗ್ರಾಮಸ್ಥರು ಮಳೆಯಲ್ಲಿಯೇ ಕಾಲ ಕಳೆದಿದ್ದರು.

ಇದನ್ನೂ ಓದಿ: ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ; ರಿಕ್ಟರ್ ಮಾಪಕದಲ್ಲಿ 3.4ರಷ್ಟು ತೀವ್ರತೆ ದಾಖಲು 

ಇದನ್ನೂ ಓದಿ: ಕಲಬುರಗಿ: ಮತ್ತೆ ಲಘು ಭೂಕಂಪನ; ಆತಂಕದಲ್ಲಿ ಮನೆಯಿಂದ ಹೊರ ಬಂದು ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಸ್ಥರು

Published On - 10:53 pm, Mon, 11 October 21

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ