AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಸಿಮೆಂಟ್ ಕಂಪನಿ ವಿರುದ್ಧ ನಿರಂತರವಾಗಿ 172 ದಿನಗಳಿಂದ ಧರಣಿ ನಡೆಸುತ್ತಿದ್ದ ರೈತ ಸಾವು

ಸಿಮೆಂಟ್ ಕಂಪನಿ ವಿರುದ್ಧ ನಿರಂತರವಾಗಿ ಧರಣಿ ನಡೆಸುತ್ತಿದ್ದ ರೈತ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಕೊಡ್ಲಾ-ಬೆನಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಶ್ರೀ ಸಿಮೆಂಟ್ ಕಂಪನಿಗೆ ಜಮೀನು ಮಾರಾಟ ಮಾಡಿದ್ದ ದೇವಿಂದ್ರಪ್ಪ ಹಾಗೂ ನೂರಾರು ರೈತರು ಕಳೆದ 183 ದಿನಗಳಿಂದ ಸಿಮೆಂಟ್ ಫ್ಯಾಕ್ಟರಿ ಮುಂದೆ ನಿರಂತರ ಧರಣಿ ನಡೆಸುತ್ತಿದ್ದರು.

Kalaburagi News: ಸಿಮೆಂಟ್ ಕಂಪನಿ ವಿರುದ್ಧ ನಿರಂತರವಾಗಿ 172 ದಿನಗಳಿಂದ ಧರಣಿ ನಡೆಸುತ್ತಿದ್ದ ರೈತ ಸಾವು
ರೈತ ದೇವಿಂದ್ರಪ್ಪ
ಆಯೇಷಾ ಬಾನು
|

Updated on: May 28, 2023 | 10:51 AM

Share

ಕಲಬುರಗಿ: ದೇಶದ ಬೆನ್ನೆಲುವು ರೈತನ(Farmer) ಕಷ್ಟಗಳು ಒಂದಾ ಎರಡಾ. ಸಾಲಸೂಲ ಮಾಡಿ ಲಕ್ಷ ಲಕ್ಷ ಹಣ ಬಂಡವಾಳ ಹಾಕಿ, ಬೀಜಗಳನ್ನು ಭೂಮಿ ತಾಯಿಗೆ ಅರ್ಪಿಸಿ ಮಗುವಂತೆ ಬೆಳೆದು ಬೆಳೆ ತೆಗೆದು ಮಾರಾಟಕ್ಕೆ ಇಳಿದಾಗ ಉತ್ತಮ ಬೆಲೆ ಸಿಗದೆ ಕಂಗಾಲಾಗಿ ನೊಂದರೂ ಜನರ ಹಸಿವನ್ನು ನೀಗಿಸುತ್ತಾನೆ ಅನ್ನದಾತ.  ಬೆಳೆ ಕೈಕೊಟ್ಟ ಕಂಗಾಲಾದರೂ ಕುಗ್ಗದೆ ಮುನ್ನುಗ್ಗುತ್ತಾನೆ. ಆದ್ರೆ ರಾಜ್ಯದಲ್ಲಿ ರೈತರಿಗೆ ಉತ್ತಮ ಯೋಜನೆಗಳಿಲ್ಲ. ಇದ್ದರೂ ಅವು ಪ್ರಯೋಜನವಿಲ್ಲ. ಸಿಮೆಂಟ್ ಕಂಪನಿ ವಿರುದ್ಧ ನಿರಂತರವಾಗಿ ಧರಣಿ ನಡೆಸುತ್ತಿದ್ದ ರೈತ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಕೊಡ್ಲಾ-ಬೆನಕಹಳ್ಳಿ ಗ್ರಾಮದಲ್ಲಿ ನಡೆದಿದೆ(Farmer Death). ದೇವಿಂದ್ರಪ್ಪ ಮೃತ ರೈತ.

ಕೊಡ್ಲಾ-ಬೆನಕಹಳ್ಳಿ ಗ್ರಾಮದ ಬಳಿ ಇರುವ ಶ್ರೀ ಸಿಮೆಂಟ್ ಕಂಪನಿಗೆ ಜಮೀನು ಮಾರಾಟ ಮಾಡಿದ್ದ ದೇವಿಂದ್ರಪ್ಪ ಹಾಗೂ ನೂರಾರು ರೈತರು ಕಳೆದ 172 ದಿನಗಳಿಂದ ಸಿಮೆಂಟ್ ಫ್ಯಾಕ್ಟರಿ ಮುಂದೆ ನಿರಂತರ ಧರಣಿ ನಡೆಸುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ರೈತ ದೇವಿಂದ್ರಪ್ಪ (50) ಧರಣಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶ್ರೀ ಸಿಮೆಂಟ್ ಫ್ಯಾಕ್ಟರಿಗೆ ಮೃತ ದೇವಿಂದ್ರಪ್ಪ 2.20 ಎಕರೆ ಜಮೀನನ್ನ ನೀಡಿದ್ದರು. ಫ್ಯಾಕ್ಟರಿಗೆ ಭೂಮಿ ನೀಡಿರೋ ರೈತರಿಗೆ ಉದ್ಯೋಗ ಮತ್ತು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು ಅಪಘಡವೊಂದು ಸಂಭವಿಸಿದೆ.

ಇದನ್ನೂ ಓದಿ: ರಾಯಚೂರಿನ ರೇಕಲಮರಡಿ ಬಳಿಕ ಮತ್ತೊಂದು ಗ್ರಾಮದಲ್ಲಿ ಕಲುಷಿತ ನೀರು ಕುಡಿದು‌ 20ಕ್ಕೂ ಹೆಚ್ಚು ಜನ ಅಸ್ವಸ್ಥ

ಸಾಲಭಾದೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆ

ಹುಣಸೂರು(Hunsur) ತಾಲ್ಲೂಕು ಶ್ಯಾನಭೋಗನಹಳ್ಳಿಯ ಸುರೇಶ್(58) ಎಂಬಾತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡು ಎಕರೆ ಜಮೀನು ಹೊಂದಿದ್ದ ರೈತ ಸುರೇಶ್​, ಬ್ಯಾಂಕ್ ಸೊಸೈಟಿ ಸೇರಿ 7 ಲಕ್ಷ ಸಾಲ ರೂಪಾಯಿ ಸಾಲ ಮಾಡಿದ್ದ. ಇನ್ನೇನು ಬೆಳೆ ಬಂದ ಕೂಡಲೇ ಎಲ್ಲವನ್ನ ಹಿಂದಿರುಗಿಸುವ ಉತ್ಸಾಹದಲ್ಲಿದ್ದ ರೈತನಿಗೆ ಬೆಳೆ ಕೈ ಕೊಟ್ಟ ಹಿನ್ನೆಲೆ‌ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಮತ್ತೊಂದೆಡೆ ಹುಣಸೂರು ತಾಲ್ಲೂಕಿನ ಕರ್ಣಕುಪ್ಪೆ ಗ್ರಾಮದ ರಾಜಶೆಟ್ಟಿ (78) ಎಂಬಾತ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 5 ಎಕರೆ ಜಮೀನು ಹೊಂದಿದ್ದ ರಾಜಶೆಟ್ಟಿ, ತಂಬಾಕು ರಾಗಿ ಬೆಳೆ ಬೆಳೆದಿದ್ದರು. ಬ್ಯಾಂಕ್, ಸೊಸೈಟಿ, ಮಹಿಳಾ ಸಂಘ, ಕೈ ಸಾಲ ಸೇರಿ ಸುಮಾರು 8 ಲಕ್ಷ ಸಾಲ ಮಾಡಿದ್ದರು. ಸಾಲ ತೀರಿಸಲಾಗದೆ ಬಡ್ಡಿ ಹೆಚ್ಚಾಗಿತ್ತು. ಇದರಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು