AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ರಾಘವ ಚೈತನ್ಯ ರಥಯಾತ್ರೆಗೆ ಷರತ್ತು ಬದ್ಧ ಅನುಮತಿ ನೀಡಿದ ಹೈಕೋರ್ಟ್

ಸುಕ್ಷೇತ್ರ ನರೋಣಾ ಗ್ರಾಮದಿಂದ ಆಳಂದ್ ಪಟ್ಟಣದ ಮಶಾಕ್ ದರ್ಗಾದವರೆಗೆ ಹಮ್ಮಿಕೊಂಡಿರುವ ರಥಯಾತ್ರೆಗೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿತ್ತು. ಸದ್ಯ ಲಾಡ್ಲೆ ಮಶಾಕ್ ದರ್ಗಾ ವಿವಾದ ಹಿನ್ನೆಲೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ.

ಕಲಬುರಗಿ: ರಾಘವ ಚೈತನ್ಯ ರಥಯಾತ್ರೆಗೆ ಷರತ್ತು ಬದ್ಧ ಅನುಮತಿ ನೀಡಿದ ಹೈಕೋರ್ಟ್
ಕಳೆದ ವರ್ಷ ನಡೆದ ಗಲಾಟೆ ದೃಶ್ಯಗಳು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಆಯೇಷಾ ಬಾನು|

Updated on:Mar 03, 2024 | 1:53 PM

Share

ಕಲಬುರಗಿ, ಮಾರ್ಚ್.03: ರಾಘವ ಚೈತನ್ಯ ರಥಯಾತ್ರೆಗೆ (Raghava Chaitanya Rath Yatra) ಷರತ್ತು ಬದ್ಧ ಅನುಮತಿ ನೀಡಿ ಕಲಬುರಗಿ ಹೈಕೋರ್ಟ್ ಪೀಠ ಅನುಮತಿ ನೀಡಿದೆ. ಶಿವರಾತ್ರಿಯಂದು (Shivratri) ಕಲಬುರಗಿ ಜಿಲ್ಲೆ ಆಳಂದ ಪಟ್ಟಣದಲ್ಲಿ ನಡೆಯಲಿರುವ ರಥಯಾತ್ರೆಗೆ ಅನುಮತಿ ಕೋರಿ ಹಿಂದೂ ಮುಖಂಡರು ಅರ್ಜಿ ಸಲ್ಲಿಸಿದ್ದರು. ಸದ್ಯ ಲಾಡ್ಲೆ ಮಶಾಕ್ ದರ್ಗಾ ವಿವಾದ ಹಿನ್ನೆಲೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ.

ರಥಯಾತ್ರೆ ವೇಳೆ ಡಿಜೆ, ಟ್ರಾಫಿಕ್ ನಿಯಮ ಉಲ್ಲಂಘಿಸುವಂತಿಲ್ಲ. ಅನ್ಯ ಸಮುದಾಯದ ವಿರುದ್ಧ ಯಾರೂ ಘೋಷಣೆ‌ ಕೂಗುವಂತಿಲ್ಲ. ವಿವಾದಿತ ಸ್ಥಳದ ಕಡೆ ರಾಘವ ಚೈತನ್ಯ ರಥಯಾತ್ರೆ ಹೋಗುವಂತಿಲ್ಲ. ಸೂರ್ಯಾಸ್ತದ ನಂತರ ರಥಯಾತ್ರೆ ಮಾಡದಂತೆ ಕೋರ್ಟ್​​ ಷರತ್ತು ಬದ್ಧ ಅನುಮತಿ ನೀಡಿದೆ. ಕಳೆದ ಬಾರಿ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ದಿನ ಗಲಾಟೆ ನಡೆದಿತ್ತು.ಶಿವಲಿಂಗ ಪೂಜೆಗೆ ತೆರಳಿದ ಸಮಯದಲ್ಲಿ ದೊಡ್ಡ ಗಲಾಟೆಯಾಗಿತ್ತು. ಹೀಗಾಗಿ ಈ ಬಾರಿ ಈ ಅನಾಹುತ ತಡೆಯಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ.

ಇದನ್ನೂ ಓದಿ: ಕಲಬುರಗಿ ಲಾಡ್ಲೆ ಮಶಾಕ್ ದರ್ಗಾ ರಾಘವ ಚೈತನ್ಯ ಶಿವಲಿಂಗ ದೇವಸ್ಥಾನಕ್ಕೆ ಶಿವರಾತ್ರಿಯಂದು ಅಡಿಗಲ್ಲು: ಪ್ರಮೋದ್ ಮುತಾಲಿಕ್</a

ಕಲಬುರಗಿ ಜಿಲ್ಲೆಯ ಆಳಂದ್ ಪಟ್ಟಣದ ಪ್ರಸಿದ್ಧ ಸೂಫಿ ಸಂತ್ ಹಜರತ್ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ರಾಘವ ಚೈತನ್ಯ ದೇವಸ್ಥಾನ ಇದೆ. ಇಲ್ಲಿನ ಶಿವಲಿಂಗದ ಪೂಜೆಗಾಗಿ ಹಮ್ಮಿಕೊಂಡಿರುವ ರಥಯಾತ್ರೆಗೆ ಇಲ್ಲಿನ ಉಚ್ಛ ನ್ಯಾಯಾಲಯವು ಷರತ್ತು ಬದ್ಧ ಅನುಮತಿ ನೀಡಿದೆ. ಸುಕ್ಷೇತ್ರ ನರೋಣಾ ಗ್ರಾಮದಿಂದ ಆಳಂದ್ ಪಟ್ಟಣದ ಮಶಾಕ್ ದರ್ಗಾದವರೆಗೆ ಹಮ್ಮಿಕೊಂಡಿರುವ ರಥಯಾತ್ರೆಗೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿತ್ತು. ಅದನ್ನು ಪ್ರಶ್ನಿಸಿ ಆಳಂದ್ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಅವರ ಪುತ್ರ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹರ್ಷನಂದ್ ಗುತ್ತೇದಾರ್, ಹಿಂದೂ ಜಾಗರಣ ವೇದಿಕೆಯ ನಾಗೇಂದ್ರ ಕಬಾಡೆ ಹಾಗೂ ಎಸ್.ಎ. ಪಾಟೀಲ್ ಅವರನ್ನು ಒಳಗೊಂಡು ಮೂವರು ಅರ್ಜಿದಾರರು ಸ್ಥಳೀಯ ಉಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಲಯ ಪೀಠವು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ ಶಾಂತಿಯುತವಾಗಿ ರಥಯಾತ್ರೆ ನಡೆಸಲು ಪ್ರಮುಖ ಐದು ಶರತ್ತುಗಳನ್ನು ವಿಧಿಸಿ ಅವಕಾಶ ನೀಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:16 am, Sun, 3 March 24

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು