Kalaburagi News: ಆಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ ಇಪ್ಪತ್ತು ವರ್ಷ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ, ಅತ್ಯಾಚಾರ (Rape Convict) ಎಸಗಿದ್ದ ವ್ಯಕ್ತಿಗೆ, ಕಲಬುರಗಿ ಜಿಲ್ಲಾ ಅಪರ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯ ಇಪ್ಪತು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

Kalaburagi News: ಆಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ ಇಪ್ಪತ್ತು ವರ್ಷ ಜೈಲು ಶಿಕ್ಷೆ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Jun 30, 2023 | 4:44 PM

ಕಲಬುರಗಿ: ಅಪ್ರಾಪ್ತ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ, ಅತ್ಯಾಚಾರ (Rape Convict) ಎಸಗಿದ್ದ ವ್ಯಕ್ತಿಗೆ, ಕಲಬುರಗಿ ಜಿಲ್ಲಾ ಅಪರ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯ ಇಪ್ಪತು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆ ನಡೆಸಿದ, ನ್ಯಾಯಾಧೀಶರಾದ ಯಮನಪ್ಪ ಬಮ್ಮಣಗಿ ಅವರು, ಸಾಕ್ಷ್ಯಾಧಾರಗಳು ಸಾಭಿತಾದ ಹಿನ್ನೆಲೆಯಲ್ಲಿ, ಐಪಿಸಿ ಸೆಕ್ಷನ್ 4,6,8,12, ಪೋಕ್ಸೋ ಕಾಯ್ದೆಯಡಿ ಆರೋಪಿಗೆ ಇಪ್ಪತ್ತು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ಆರೋಪಿಗೆ ಇಪ್ಪತ್ತೈದು ಸಾವಿರ ದಂಡ ವಿಧಿಸಿದ್ದಾರೆ.

ಘಟನೆ ವಿವರ

ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 17, 2022 ರಂದು, ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಬಂದಿದ್ದ ಆರೋಪಿ, ಮನೆಯಲ್ಲಿ ನಾನು ನಿನ್ನ ಪ್ರೀತಿಸುತ್ತೇನೆ ಅಂತ ಹೇಳಿದ್ದ. ಆಗ ಬಾಲಕಿ, ನಾನು ಇನ್ನೂ ಅಪ್ರಾಪ್ತಳಿದ್ದೇನೆ, ಪ್ರೀತಿ, ಮದುವೆ ಮಾತು ಮಾತನಾಡಬೇಡಿ ಅಂತ ಹೇಳಿದ್ದಳಂತೆ. ಆದೆ ದುಷ್ಕರ್ಮಿ, ಕೋಣೆಗೆ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಶಹಬಾದ್ ಪೊಲೀಸ್ ಠಾಣೆಯಲ್ಲಿ ಬಾಲಕಿ ಮತ್ತು ಕುಟುಂಬದವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಜಾರ್ಜ್​ಶೀಟ್ ಸಲ್ಲಿಸಿದ್ದರು.

ಇದನ್ನೂ ಓದಿ: ಸೋಜಿಗ: ಮದುವೆ ಮಂಟಪದಿಂದ ದಿ ಗ್ರೆಟ್ ಎಸ್ಕೇಪ್ ಆಗಲು ಮುಂದಾಗಿದ್ದ ವರ -ಆದರೆ ಆತನ ಕೈಕಾಲು ಕಟ್ಟಿ ತಾಳಿ ಕಟ್ಟಿಸಿದ ಜನ! ಯಾಕೆ ಹೀಗೆ?

ಅರ್ಜಿ ವಿಚಾರಣೆ ನಡೆಸಿದ ನ್ಯಾಯದೀಶರು ಆರೋಪಿಗೆ ಇಪ್ಪತ್ತು ವರ್ಷ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ್ ತುಪ್ಪದ ಅವರು ವಾದ ಮಂಡಿಸಿದ್ದು, ಆರೋಪಿಗೆ ಶಿಕ್ಷೆಯಾಗುವಂತೆ ನೋಡಿಕೊಂಡಿದ್ದಾರೆ.

ಬಾಲಕಿಗೆ ಏಳು ಲಕ್ಷ ರೂಪಾಯಿ ಪರಿಹಾರಕ್ಕೆ ಆದೇಶ

ಇನ್ನು ಅತ್ಯಾಚಾರಕ್ಕೊಳಗಾದ ಸಂತ್ರಸ್ತ ಬಾಲಕಿಗೆ ಏಳು ಲಕ್ಷ ರೂಪಾಯಿ ಪರಿಹಾರವನ್ನು ಕಾನೂನು ಪ್ರಾಧಿಕಾರ ವತಿಯಿಂದ ನೀಡಬೇಕು ಅಂತ ನ್ಯಾಯಧೀಶರು ಆದೇಶ ನೀಡಿದ್ದಾರೆ. ತೀರ್ಪು ಪ್ರಕಟವಾದ ದಿನದಿಂದ ಒಂದು ತಿಂಗಳೊಳಗೆ ನೊಂದ ಬಾಲಕಿಗೆ ಪರಿಹಾರ ಮೊತ್ತವನ್ನು ನೀಡಬೇಕು ಅಂತ ಆದೇಶದಲ್ಲಿ ತಿಳಿಸಿದ್ದಾರೆ.

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ