AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಆಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ ಇಪ್ಪತ್ತು ವರ್ಷ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ, ಅತ್ಯಾಚಾರ (Rape Convict) ಎಸಗಿದ್ದ ವ್ಯಕ್ತಿಗೆ, ಕಲಬುರಗಿ ಜಿಲ್ಲಾ ಅಪರ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯ ಇಪ್ಪತು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

Kalaburagi News: ಆಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ ಇಪ್ಪತ್ತು ವರ್ಷ ಜೈಲು ಶಿಕ್ಷೆ
ಸಾಂದರ್ಭಿಕ ಚಿತ್ರ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jun 30, 2023 | 4:44 PM

Share

ಕಲಬುರಗಿ: ಅಪ್ರಾಪ್ತ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ, ಅತ್ಯಾಚಾರ (Rape Convict) ಎಸಗಿದ್ದ ವ್ಯಕ್ತಿಗೆ, ಕಲಬುರಗಿ ಜಿಲ್ಲಾ ಅಪರ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯ ಇಪ್ಪತು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆ ನಡೆಸಿದ, ನ್ಯಾಯಾಧೀಶರಾದ ಯಮನಪ್ಪ ಬಮ್ಮಣಗಿ ಅವರು, ಸಾಕ್ಷ್ಯಾಧಾರಗಳು ಸಾಭಿತಾದ ಹಿನ್ನೆಲೆಯಲ್ಲಿ, ಐಪಿಸಿ ಸೆಕ್ಷನ್ 4,6,8,12, ಪೋಕ್ಸೋ ಕಾಯ್ದೆಯಡಿ ಆರೋಪಿಗೆ ಇಪ್ಪತ್ತು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ಆರೋಪಿಗೆ ಇಪ್ಪತ್ತೈದು ಸಾವಿರ ದಂಡ ವಿಧಿಸಿದ್ದಾರೆ.

ಘಟನೆ ವಿವರ

ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 17, 2022 ರಂದು, ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಬಂದಿದ್ದ ಆರೋಪಿ, ಮನೆಯಲ್ಲಿ ನಾನು ನಿನ್ನ ಪ್ರೀತಿಸುತ್ತೇನೆ ಅಂತ ಹೇಳಿದ್ದ. ಆಗ ಬಾಲಕಿ, ನಾನು ಇನ್ನೂ ಅಪ್ರಾಪ್ತಳಿದ್ದೇನೆ, ಪ್ರೀತಿ, ಮದುವೆ ಮಾತು ಮಾತನಾಡಬೇಡಿ ಅಂತ ಹೇಳಿದ್ದಳಂತೆ. ಆದೆ ದುಷ್ಕರ್ಮಿ, ಕೋಣೆಗೆ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಶಹಬಾದ್ ಪೊಲೀಸ್ ಠಾಣೆಯಲ್ಲಿ ಬಾಲಕಿ ಮತ್ತು ಕುಟುಂಬದವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಜಾರ್ಜ್​ಶೀಟ್ ಸಲ್ಲಿಸಿದ್ದರು.

ಇದನ್ನೂ ಓದಿ: ಸೋಜಿಗ: ಮದುವೆ ಮಂಟಪದಿಂದ ದಿ ಗ್ರೆಟ್ ಎಸ್ಕೇಪ್ ಆಗಲು ಮುಂದಾಗಿದ್ದ ವರ -ಆದರೆ ಆತನ ಕೈಕಾಲು ಕಟ್ಟಿ ತಾಳಿ ಕಟ್ಟಿಸಿದ ಜನ! ಯಾಕೆ ಹೀಗೆ?

ಅರ್ಜಿ ವಿಚಾರಣೆ ನಡೆಸಿದ ನ್ಯಾಯದೀಶರು ಆರೋಪಿಗೆ ಇಪ್ಪತ್ತು ವರ್ಷ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ್ ತುಪ್ಪದ ಅವರು ವಾದ ಮಂಡಿಸಿದ್ದು, ಆರೋಪಿಗೆ ಶಿಕ್ಷೆಯಾಗುವಂತೆ ನೋಡಿಕೊಂಡಿದ್ದಾರೆ.

ಬಾಲಕಿಗೆ ಏಳು ಲಕ್ಷ ರೂಪಾಯಿ ಪರಿಹಾರಕ್ಕೆ ಆದೇಶ

ಇನ್ನು ಅತ್ಯಾಚಾರಕ್ಕೊಳಗಾದ ಸಂತ್ರಸ್ತ ಬಾಲಕಿಗೆ ಏಳು ಲಕ್ಷ ರೂಪಾಯಿ ಪರಿಹಾರವನ್ನು ಕಾನೂನು ಪ್ರಾಧಿಕಾರ ವತಿಯಿಂದ ನೀಡಬೇಕು ಅಂತ ನ್ಯಾಯಧೀಶರು ಆದೇಶ ನೀಡಿದ್ದಾರೆ. ತೀರ್ಪು ಪ್ರಕಟವಾದ ದಿನದಿಂದ ಒಂದು ತಿಂಗಳೊಳಗೆ ನೊಂದ ಬಾಲಕಿಗೆ ಪರಿಹಾರ ಮೊತ್ತವನ್ನು ನೀಡಬೇಕು ಅಂತ ಆದೇಶದಲ್ಲಿ ತಿಳಿಸಿದ್ದಾರೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ