AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಯೂಟದ ಸಾಂಬರ್​ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಶಾಲಾ ಶಿಕ್ಷಕರ ನಿರ್ಲಕ್ಷ ಆರೋಪ

Kalaburagi News: ಬಿಸಿಯೂಟದ ಸಾಂಬರ್​ ಪಾತ್ರೆಗೆ ವಿದ್ಯಾರ್ಥಿನಿ ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರಿಯಲ್ಲಿ ನಡೆದಿದೆ. ಸರ್ಕಾರಿ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಮಹಂತಮ್ಮಗೆ ಗಾಯಗಳಾಗಿದ್ದು, ಸದ್ಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಿಸಿಯೂಟದ ಸಾಂಬರ್​ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಶಾಲಾ ಶಿಕ್ಷಕರ ನಿರ್ಲಕ್ಷ ಆರೋಪ
ವಿದ್ಯಾರ್ಥಿನಿ ಮಹಂತಮ್ಮ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Nov 16, 2023 | 10:59 PM

Share

ಕಲಬುರಗಿ, ನವೆಂಬರ್​​ 16: ಬಿಸಿಯೂಟದ ಸಾಂಬರ್​ ಪಾತ್ರೆಗೆ ವಿದ್ಯಾರ್ಥಿನಿ (Student) ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರಿಯಲ್ಲಿ ನಡೆದಿದೆ. ಸರ್ಕಾರಿ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಮಹಂತಮ್ಮಗೆ ಗಾಯಗಳಾಗಿದ್ದು, ಸದ್ಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟ ತಯಾರು ಮಾಡುವಾಗ ದುರ್ಘಟನೆ ಸಂಭವಿಸಿದೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರಾ ಗ್ರಾಮದ ಬಾಲಕಿ. ಅದೇ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಾಳೆ. ಮಧ್ಯಾಹ್ನ 1.30 ಕ್ಕೆ ಊಟದ ಸಮಯದಲ್ಲಿ ಮಹಾಂತಮ್ಮ, ಊಟ ಮಾಡಲು ಅಡುಗೆ ಕೋಣೆಯತ್ತ ಹೋಗಿದ್ದಾಳೆ. ಈ ವೇಳೆ ಮಹಾಂತಮ್ಮ ಆಯಾತಪ್ಪಿ ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದಿದ್ದಾಳೆ.

ಇದನ್ನೂ ಓದಿ: ಯುದ್ಧ ನಿಲ್ಲಿಸಿ, ಶಾಂತಿ ನೆಲಸಲಿ: ಕಲಬುರಗಿಯಲ್ಲಿ ಪ್ಯಾಲೆಸ್ಟೈನ್ ಪರವಾಗಿ ವಿವಿಧ ಸಂಘಟನೆಗಳಿಂದ ಧರಣಿ

ಸಾಂಬಾರ್ ಪಾತ್ರೆಗೆ ಬಿದ್ದ ಪರಿಣಾಮ ಬಾಲಕಿ ಮಹಾಂತಮ್ಮ ಗಂಭೀರ ಗಾಯಗೊಂಡಿದ್ದು, ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲಾ ಬಿಸಿಯೂಟ ಸಿಬ್ಬಂದಿ ನಿರ್ಲಕ್ಷದಿಂದಲೇ ದುರ್ಘಟನೆ ಸಂಭವಿಸಿದ್ದು, ಸಿಬ್ಬಂದಿಯ ವಿರುದ್ದ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯದ ಪರಿಣಾಮದಿಂದಲೇ ಎರಡನೇ ತರಗತಿ ಓದುತ್ತಿದ್ದ ಬಾಲಕಿ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದಾಳೆಂದು ಪೋಷಕರು ಆರೋಪ ಮಾಡುತ್ತಿದ್ದಾರೆ. ಇನ್ನೂ ಶಾಲೆಯಲ್ಲಿ ಅಡುಗೆ ಕೋಣೆ ಕಡೆ ಯಾರೊಬ್ಬ ಮಕ್ಕಳನ್ನ ಬಿಡಬಾರದು.

ಇದನ್ನೂ ಓದಿ: ವಿದ್ಯಾಕಾಶಿ ಧಾರವಾಡದಲ್ಲಿ ಈಗ ಹಾಸ್ಟೆಲ್ ಸಮಸ್ಯೆ: ಬಾಡಿಗೆ ಕಟ್ಟಡಗಳ ಮೊರೆಹೋದ ಜಿಲ್ಲಾಡಳಿತ

ಮಕ್ಕಳು ಅಡುಗೆ ಕೋಣೆಯತ್ತ ಬರದಂತೆ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳು ಎಚ್ಚರಿಕೆ ವಹಿಸಬೇಕು. ಆದರೆ ಇಲ್ಲಿ ಮಾತ್ರ ಇಬ್ಬರ ನಿರ್ಲಕ್ಷ್ಯದಿಂದ ಪುಟ್ಟ ಬಾಲಕಿ ಆಯಾ ತಪ್ಪಿ ಸಾಂಬಾರ್ ಪಾತ್ರೆಗೆ ಬಿದ್ದಿದ್ದು, ತೀವ್ರ ತರದ ಸುಟ್ಟ ಗಾಯಗಳೊಂದಿಗೆ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾಳೆ.

ಶಿಕ್ಷಕರ ಮತ್ತು ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಪುಟ್ಟ ಬಾಲಕಿಯೋರ್ವಳು ಸಾಂಬಾರ್ ಪಾತ್ರೆಗೆ ಬಿದ್ದು ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದು, ನಿರ್ಲಕ್ಷ್ಯ ವಹಿಸಿದ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳ ವಿರುದ್ಧ ಶಿಕ್ಷಣ ಇಲಾಖೆ ಕಠಿಣ ಕ್ರಮ ತೆಗೆದುಕೊಂಡು ಮುಂದೆ ಇಂತಹ ಅನಾಹುತ ಸಂಭವಿಸದಂತೆ ನೋಡಿಕೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?