AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ, ಪ್ರಾಂಶುಪಾಲರ ಮನೆಗೆಲಸ ಮಾಡಿಸಿದ ಆರೋಪ

1 ವರ್ಷದಿಂದ ಪ್ರಾಂಶುಪಾಲರು ಮಕ್ಕಳನ್ನು ಮನೆಗೆಲಸಕ್ಕೆ ಕರೆದೊಯ್ದಿದ್ದಾರೆ. ಕೆಲಸ ಮಾಡದಿದ್ದರೆ ಗದರುವುದು, ಹೊಡೆಯುವುದು ಮಾಡುತ್ತಿದ್ದರು ಎಂದು ಆರೋಪಿಸಿರುವ ಪೋಕರು, ಜೋಹರ ಜಬೀನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಕಲಬುರಗಿ: ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ, ಪ್ರಾಂಶುಪಾಲರ ಮನೆಗೆಲಸ ಮಾಡಿಸಿದ ಆರೋಪ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 15, 2024 | 8:48 AM

Share

ಕಲಬುರಗಿ, ಜನವರಿ 15: ಕೋಲಾರ, ಬೆಂಗಳೂರು, ಶಿವಮೊಗ್ಗದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಗಳ ನೆನಪು ಮಾಸುವ ಮುನ್ನವೇ ಇದೀಗ ಕಲಬುರಗಿಯಲ್ಲಿ (Kalaburagi) ಅಂಥದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳಿಂದ ಶಾಲಾ ಶೌಚಾಲಯ ಸ್ವಚ್ಛ ಮಾಡಿಸಿದ್ದಲ್ಲದೆ, ಪ್ರಾಂಶುಪಾಲರ ಮನೆಗೆಲಸವನ್ನೂ ಮಾಡಿಸಿಕೊಳ್ಳಲಾಗುತ್ತಿದೆ (Students forced to clean toilets) ಎಂದು ಪೋಷಕರು ಆರೋಪಿಸಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.

ಕಲಬುರಗಿಯ ಮಾಲಗತ್ತಿ ರಸ್ತೆಯಲ್ಲಿರುವ ಮೌಲಾನಾ ಆಜಾದ್ ಮಾಡೆಲ್ ಆಂಗ್ಲ ಮಾಧ್ಯಮ ಶಾಲೆಯ ಹಾಗೂ ಪ್ರಾಂಶುಪಾಲ ಜೋಹರ ಜಬೀನ ಅವರ ವಿರುದ್ಧ ಆರೋಪ ವ್ಯಕ್ತವಾಗಿದೆ.

1 ವರ್ಷದಿಂದ ಪ್ರಾಂಶುಪಾಲರು ಮಕ್ಕಳನ್ನು ಮನೆಗೆಲಸಕ್ಕೆ ಕರೆದೊಯ್ದಿದ್ದಾರೆ. ಕೆಲಸ ಮಾಡದಿದ್ದರೆ ಗದರುವುದು, ಹೊಡೆಯುವುದು ಮಾಡುತ್ತಿದ್ದರು ಎಂದು ಆರೋಪಿಸಿರುವ ಪೋಕರು, ಜೋಹರ ಜಬೀನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಷಕರ ದೂರಿನಲ್ಲೇನಿದೆ?

ಕಳೆದ ಹಲವು ತಿಂಗಳುಗಳಿಂದ ಜೋಹರ ಜಬೀನ ಕೆಲವು ವಿದ್ಯಾರ್ಥಿಗಳನ್ನು ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಬಳಸಿದ್ದರೆ, ಇನ್ನು ಕೆಲವರನ್ನು ಅವರ ನಿವಾಸದಲ್ಲಿರುವ ಉದ್ಯಾನವನ್ನು ಸ್ವಚ್ಛಗೊಳಿಸಲು ಸಹ ಕರೆದೊಯ್ಯುತ್ತಿದ್ದರು. ಈ ಬಗ್ಗೆ ತಮ್ಮ ಪುತ್ರ ಮತ್ತು ಇತರ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದರು ಎಂದು ಪೋಷಕರೊಬ್ಬರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಳೆದ ವಾರ ಶಾಲೆಗೆ ಹೋಗಿ, ಶಾಲಾ ವಿದ್ಯಾರ್ಥಿಗಳನ್ನು ಇಂತಹ ಕೆಲಸಗಳಿಗೆ ಬಳಸದಂತೆ ಪ್ರಾಂಶುಪಾಲರಿಗೆ ಎಚ್ಚರಿಕೆ ನೀಡಿದ್ದೆ. ವಿದ್ಯಾರ್ಥಿಗಳನ್ನು ಈ ರೀತಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ದೂರುದಾರರು ಉಲ್ಲೇಖಿಸಿದ್ದಾರೆ.

ಎಚ್ಚರಿಕೆಯ ಹೊರತಾಗಿಯೂ, ಜೋಹರ ಜಬೀನ ಅವರು ಶನಿವಾರ ಅವರ ಮನೆಯ ತೋಟವನ್ನು ಸ್ವಚ್ಛಗೊಳಿಸಲು ಮಗನಿಗೆ ಸೂಚಿಸಿದ್ದರು ಎಂದು ದೂರುದಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಶಾಲೆಯಲ್ಲಿ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸಿದರೆ ತಪ್ಪಿಲ್ಲ ಎಂದ ಸ್ಪೀಕರ್ ಯುಟಿ ಖಾದರ್: ಏನಂದ್ರು ರಾಜಣ್ಣ?

ಕೋಲಾರ, ಬೆಂಗಳೂರು, ಶಿವಮೊಗ್ಗದಲ್ಲಿ ಶಾಲಾ ವಿದ್ಯಾರ್ಥಿಗಳ ಬಳಿ ಶೌಚಾಲಯ ಸ್ವಚ್ಛ ಮಾಡಿಸಿರುವ ಘಟನೆಗಳು ಇತ್ತೀಚೆಗೆ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದವು. ಈ ಘಟನೆಗಳು ನಂತರ ರಾಜಕೀಯ ಆಯಾಮವನ್ನೂ ಪಡೆದಿಕೊಂಡಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ