AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಇಎ ಪರೀಕ್ಷೆ ಅಕ್ರಮದ ಕಿಂಗ್​ಪಿನ್​ RD ಪಾಟೀಲ್​ಗೆ ಸಲಾಂ; ಪೊಲೀಸ್ ಕಾನ್ಸಟೇಬಲ್ ಅಮಾನತು

ಕೆಇಎ ಪರೀಕ್ಷಾ ಅಕ್ರಮ ಪ್ರಕರಣವನ್ನು ಸಿಐಡಿಗೆ ವಹಿಸಿದ ಮೇಲೆ ತನಿಖೆ ಚುರುಕುಗೊಂಡಿದೆ. ಅದರಂತೆ ಪ್ರಕರಣದಲ್ಲಿ ಭಾಗಿಯಾದ ಹಲವರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಯುತ್ತಿದೆ. ಅದರಂತೆ ಅಕ್ರಮದ ಕಿಂಗ್​ಪಿನ್​ ಆಗಿರುವ ಆರ್​ಡಿ ಪಾಟೀಲ್(RD Patil) ಅವರನ್ನು ಜಿಮ್ಸ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಕರೆತಂದಾಗ ಓರ್ವ ಕಾನ್ಸಟೇಬಲ್​ ನಮಸ್ಕಾರ ಮಾಡಿದ ಹಿನ್ನಲೆ ಅಮಾನತು ಮಾಡಲಾಗಿದೆ.

ಕೆಇಎ ಪರೀಕ್ಷೆ ಅಕ್ರಮದ ಕಿಂಗ್​ಪಿನ್​ RD ಪಾಟೀಲ್​ಗೆ ಸಲಾಂ; ಪೊಲೀಸ್ ಕಾನ್ಸಟೇಬಲ್ ಅಮಾನತು
ಆರ್​ಡಿ ಪಾಟೀಲ್​ಗೆ ನಮಸ್ಕಾರ ಮಾಡಿದ ಪೊಲೀಸ್​ ಕಾನ್ಸ್​ಟೇಬಲ್​ ಅಮಾನತು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 18, 2023 | 3:04 PM

Share

ಕಲಬುರಗಿ, ನ.18: ಕೆಇಎ(KEA) ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಸಿಐಡಿ(CID)ಗೆ  ವಹಿಸಲಾಗಿದೆ. ಇನ್ನು ಅಕ್ರಮದ ಕಿಂಗ್​ಪಿನ್​ ಆಗಿರುವ ಆರ್​ಡಿ ಪಾಟೀಲ್(RD Patil) ಅವರನ್ನು ಜಿಮ್ಸ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಕರೆತಂದಾಗ ಓರ್ವ ಕಾನ್ಸಟೇಬಲ್​ ನಮಸ್ಕಾರ ಮಾಡಿದ ಹಿನ್ನಲೆ ಅಮಾನತು ಮಾಡಲಾಗಿದೆ.ಆರ್​ಡಿ ಪಾಟೀಲ್​ಗೆ ಸಲಾಂ ಎಂದಿದ್ದ ನಗರದ ಬ್ರಹ್ಮಪೂರ ಪೊಲೀಸ್ ಠಾಣೆಯ ಕಾನ್ಸಟೇಬಲ್ ಮಾಳಪ್ಪ ಭಾಸಗಿ ಎಂಬುವವರನ್ನು ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್.ಚೇತನರವರು ಅಮಾನತಗೊಳಿಸಿ ಆದೇಶಿಸಿದ್ದಾರೆ.

ಚುರುಕುಗೊಂಡ ತನಿಖೆ

ಪ್ರಕರಣವನ್ನು ಸಿಐಡಿಗೆ ವಹಿಸಿದ ಮೇಲೆ ತನಿಖೆ ಚುರುಕುಗೊಂಡಿದೆ. ಅದರಂತೆ ಪ್ರಕರಣದಲ್ಲಿ ಭಾಗಿಯಾದ ಹಲವರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಯುತ್ತಿದೆ. ಅದರಂತೆ ಇಂದು ತನಿಖೆಯಲ್ಲಿ ಮತ್ತೊಂದು ವಾಟ್ಸಪ್ ಚಾಟ್ ಬಯಲಾಗಿದೆ. ಕೋಡ್​ವರ್ಡ್ ಮೂಲಕ ಪ್ರಶ್ನೆಗಳಿಗೆ ಉತ್ತರಗಳನ್ನು ಕಳುಹಿಸಿದ ಚಾಟ್​​ ಇದಾಗಿದೆ. ಅಕ್ರಮದ ಪ್ರಮುಖ ಆರೋಪಿಯಾದ ಸಿದ್ದರಾಮ ಅಲಿಯಸ್ ಪುಟ್ಟು ಎಂಬುವವರ ಮೊಬೈಲ್​ನಿಂದ, ಪರೀಕ್ಷೆ ನಡೆಯುತ್ತಿದ್ದ ಸಮಯದಲ್ಲೇ ಅಭ್ಯರ್ಥಿಗೆ ಪ್ರಶ್ನೆ ಪತ್ರಿಕೆಯಲ್ಲಿದ್ದ ಅಕ್ಷರಗಳ ಆಧಾರದಲ್ಲಿ ಉತ್ತರಗಳು ಬಂದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಕೆಇಎ ಪರೀಕ್ಷೆ ಅಕ್ರಮ: ಮತ್ತೊಂದು ವಾಟ್ಸ್​ಆ್ಯಪ್ ಚಾಟ್ ಬಯಲು, ಕೋಡ್​ವರ್ಡ್ ಹೇಗಿದೆ ಗೊತ್ತಾ?

ಇನ್ನು ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್​ಗೆ ಆನ್‌ಲೈನ್‌ ಗೇಮ್​ಗಳಲ್ಲಿ ಹಣ ಹೂಡಿಕೆ ಮಾಡಿ ಆಟ ಆಡುವ ಚಾಳಿ ಹೊಂದಿರುವುದು ತಿಳಿದುಬಂದಿದೆ. ಆನ್‌ಲೈನ್ ಗೇಮ್‌ಗಾಗಿ ಮೂರು ಮೊಬೈಲ್ ನಂಬರ್ ಅನ್ನು ಬಳಕೆ ಮಾಡಿಕೊಳ್ಳುತ್ತಿದ್ದ ಇತ, ಕೆಲವೇ ತಿಂಗಳಲ್ಲಿ 30 ಲಕ್ಷಕ್ಕೂ ಅಧಿಕ ಹಣವನ್ನು ಹೂಡಿಕೆ ಮಾಡಿದ್ದನು. ಆ ಮೂಲಕ ಮೂರು ಅಕೌಂಟ್​ಗಳಲ್ಲಿನ ಅಕ್ರಮವಾಗಿ ಬಂದ ಹಣವನ್ನು ಬೇಕಾಬಿಟ್ಟಿಯಾಗಿ ಖರ್ಚು ಮಾಡುತ್ತಿದ್ದನು. ಈ ಎಲ್ಲಾ ವಿಚಾರಗಳು ಅಪಾರ್ಟ್ಮೆಂಟ್‌ನಲ್ಲಿ‌ ಸಿಕ್ಕ ಮೊಬೈಲ್‌ ಪರಿಶೀಲನೆ ವೇಳೆ ಬಯಲಿಗೆ ಬಂದಿತ್ತು. ಈ ಮಧ್ಯೆ ಪ್ರಕರಣದ ಆರೋಪಿಗೆ ನಮಸ್ಕಾರ್​ ಮಾಡಿದ ಹಿನ್ನಲೆ ಪೇದೆಯನ್ನು ಅಮಾನತು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?