AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi: ದೆಹಲಿ ಪೊಲೀಸರ ಸೋಗಲ್ಲಿ ದರೋಡೆ; ಸಿನಿಮಾ ಸ್ಟೈಲ್​​ನಲ್ಲಿ ಆರೋಪಿಗಳು ಲಾಕ್​​

ದೆಹಲಿ ಪೊಲೀಸರ ಸೋಗಿನಲ್ಲಿ ದರೋಡೆ ನಡೆಸುತ್ತಿದ್ದ ಅಂತಾರಾಜ್ಯ ಗ್ಯಾಂಗ್​​ನ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 27 ಲಕ್ಷ ಮೌಲ್ಯದ ವಸ್ತುಗಳು ಮತ್ತು ಪೊಲೀಸ್ ನಕಲಿ ​​ಐಡಿ ಕಾರ್ಡ್‌ಗಳನ್ನು ಜಪ್ತಿ ಮಾಡಲಾಗಿದೆ. ಹೆದ್ದಾರಿಗಳಲ್ಲಿ ಜನರನ್ನು ನಂಬಿಸಿ, ನಕಲಿ ಚಿನ್ನ ನೀಡಿ ಅಸಲಿ ಚಿನ್ನವನ್ನು ದೋಚೋದು ಖದೀಮರ ಕಾಯಕ ಎನ್ನಲಾಗಿದ್ದು, ಹಲವು ರಾಜ್ಯಗಳ ಪೊಲೀಸರ ನಿದ್ದೆಗೆಡಿಸಿದ್ದ ಈ ಗ್ಯಾಂಗ್‌ನ ಏಳು ಆರೋಪಿಗಳು ಕೊನೆಗೂ ಲಾಕ್​​ ಆಗಿದ್ದಾರೆ.

Kalaburagi: ದೆಹಲಿ ಪೊಲೀಸರ ಸೋಗಲ್ಲಿ ದರೋಡೆ; ಸಿನಿಮಾ ಸ್ಟೈಲ್​​ನಲ್ಲಿ ಆರೋಪಿಗಳು ಲಾಕ್​​
ಬಂಧಿತ ಆರೋಪಿಗಳ ಜೊತೆ ಪೊಲೀಸರುImage Credit source: Tv9 Kannada
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Feb 02, 2026 | 4:27 PM

Share

ಕಲಬುರಗಿ, ಫೆಬ್ರವರಿ 02: ದೆಹಲಿ ಪೊಲೀಸರ ಸೋಗಿನಲ್ಲಿ ದರೋಡೆ ಮಾಡ್ತಿದ್ದ ನಟೋರಿಯಸ್ ಗ್ಯಾಂಗ್​​ನ ಖೆಡ್ಡಾಕ್ಕೆ ಕೆಡವುವಲ್ಲಿ ಕೊನೆಗೂ ಕಲಬುರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳು ದೆಹಲಿ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ಐದು ರಾಜ್ಯಗಳ ಪೊಲೀಸರ ನಿದ್ದೆಗೆಡಿಸಿದ್ದರು ಎನ್ನಲಾಗಿದ್ದು, ಅಂತಾರಾಜ್ಯ ದರೋಡೆ ಕೋರರಿಂದ ದೆಹಲಿ ಪೊಲೀಸರ ನಕಲಿ ಐಡಿ ಕಾರ್ಡ್​​ಗಳನ್ನ ವಶಪಡಿಸಿಕೊಳ್ಳಲಾಗಿದೆ. 90 ಗ್ರಾಂ ಚಿನ್ನಾಭರಣ ಸೇರಿದಂರೆ ಬರೋಬ್ಬರಿ 27 ಲಕ್ಷ ಮೌಲ್ಯದ ವಸ್ತುಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.

ದೆಹಲಿ ಮತ್ತು ಭೂಪಾಲ್ ಮೂಲದ ಜಹೀರ್ ಅಬ್ಬಾಸ್ ಅಲಿ, ಖಾಸೀಂ ಯೂಸುಫ್ ಅಲಿ, ಅಲಿ ಮಿರ್ಜಾ, ಅಲಿ ರಾಜಾ ಶೇಖ್ ಬೇಗ್, ಲಾಲ್​​ಶೇಖ್​, ಜಫರ್ ಮತ್ತು ಜಫರ್ ಆಸೀಮ್ ಬಂಧಿತ ಆರೋಪಿಗಳಾಗಿದ್ದಾರೆ. ದೆಹಲಿ ಪೊಲೀಸರ ಸೋಗಿನಲ್ಲಿ ಸಾರ್ವಜನಿಕ ಚಿನ್ನಾಭರಣ ಲೂಟಿ ಮಾಡಿ ಗ್ಯಾಂಗ್​​ ಎಸ್ಕೇಪ್​​ ಆಗುತ್ತಿತ್ತು ಎನ್ನಲಾಗಿದ್ದು, ಕಳೆದ ವಾರವಷ್ಟೆ ತೆಲಂಗಾಣ ಮೆಹಬೂಬ್ ನಗರ ಜಿಲ್ಲೆಯ ಎರಡೂ ಕಡೆ ಖದೀಮರು ದರೋಡೆ ನಡೆಸಿದ್ದರು. ಬಳಿಕ ಕಲಬುರಗಿಗೆ ಎಂಟ್ರಿ ಕೊಟ್ಟಿದ್ದ ಈ ತಂಡದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸಬ್ ಅರ್ಬನ್ ಪೊಲೀಸರು ನಗರದ ತಾವರಗೇರಾ ಕ್ರಾಸ್ ಬಳಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇನ್ನು ಈ ಗ್ಯಾಂಗ್ ಸುಳಿವು ಕೊಟ್ಟವರಿಗೆ ದೆಹಲಿ ಪೊಲೀಸ್ ಇಲಾಖೆ 2 ಲಕ್ಷ ಬಹುಮಾನ ಘೋಷಣೆ ಮಾಡಿದ್ರೂ ಆರೋಪಿಗಳ ಸುಳಿವು ಸಿಕ್ಕಿರಲಿಲ್ಲ. ಆದರೆ ಕಲಬುರಗಿ ಪೊಲೀಸರ ಕೈಗೀಗ ಖದೀಮರು ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಸಿನಿಮಾ ಸ್ಟೈಲಲ್ಲಿ ಯುವಕನ ಅಡ್ಡಗಟ್ಟಿ, ಲಾಂಗ್ ಬೀಸಿ 31 ಕ್ಷ ರೂ. ದರೋಡೆ; ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ಕೃತ್ಯ

ಇನ್ನು ಈ ಗ್ಯಾಂಗ್​​ನ ಏಳು ಜನರಲ್ಲಿ ಇಬ್ಬರು ಪಿಎಸ್​​ಐ ಎಂದು ಹೇಳಿಕೊಂಡು ಫೀಲ್ಡಿಗಿಳಿಯುತ್ತಿದ್ದರು. ಮುಂದೆ ಕಳ್ಳರು ಇದ್ದಾರೆಂದು ಹೆದ್ದಾರಿಯಲ್ಲಿ ತೆರಳುವ ಕಾರು ಮತ್ತು ಬೈಕ್​​ ಸವಾರರನ್ನು ನಂಬಿಸಿ, ನಿಮ್ಮ ಬಳಿ ಇರುವ ಚಿನ್ನಾಬರಣ ನಮ್ಮ ಬಳಿ ಕೊಡಿ ಎನ್ನುತ್ತಿದ್ದರು. ಅಷ್ಟರಲ್ಲಿ ಉಳಿದವರು ದರೋಡೆಕೋರರಂತೆ ಬಂದಾಗ ಅವರಿಂದ ಕಾಪಾಡಿದ್ದೇವೆ ಎಂಬಂತೆ ಬಿಂಬಿಸಿ ಚಿನ್ನಾಭರಣ ಪಡೆಯುತ್ತಿದ್ದ ಇಬ್ಬರು ನಕಲಿ ಅಧಿಕಾರಿಗಳು ಕ್ಷಣಮಾತ್ರದಲ್ಲಿ ಅವರಿಗೆ ನಕಲಿ ಚಿನ್ನಾಭರಣ ನೀಡುತ್ತಿದ್ದರು. ಇದೇ ರೀತಿ ದೆಹಲಿ, ಮಹಾರಾಷ್ಟ್ರ, ತೆಲಂಗಾಣ , ಮಧ್ಯಪ್ರದೇಶ, ಆಂಧ್ರ ಪ್ರದೇಶದ ಹಲವೆಡೆ ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣವನ್ನು ಆರೋಪಿಗಳು ಲೂಟಿ ಮಾಡಿದ್ದರು. ಅಲ್ಲದೇ ಇದೇ ಗ್ಯಾಂಗ್​​ನ ಆರೋಪಿಯೋರ್ವ ಕಲಬುರಗಿಯ ನೆಂಟಸ್ತನ ಮಾಡಿದ್ದ. ಹೀಗಾಗಿ ಇಲ್ಲಿ ರೂಂ ಮಾಡಿಕೊಂಡು ತೆಲಂಗಾಣದದಲ್ಲಿ ದರೋಡೆ ಮಾಡಲಾಗ್ತಿತ್ತು ಎಂಬ ವಿಚಾರವೂ ಬಯಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ