AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಅಂಗನವಾಡಿಗಳಲ್ಲಿ ಕಳಪೆ ಆಹಾರ ಪೂರೈಕೆ; ಲೋಕಾಯುಕ್ತ ಅಧಿಕಾರಿಗಳ ಧಿಡಿರ್ ದಾಳಿ

ಕಲಬುರಗಿ(Kalaburagi) ಜಿಲ್ಲೆಯ ಹಲವು ಅಂಗನವಾಡಿಗಳ ಮೇಲೆ ಲೋಕಾಯುಕ್ತ(Lokayukta) ಅಧಿಕಾರಿಗಳು ದಿಢೀರ್ ದಾಳಿ ಮಾಡಿದ್ದಾರೆ. ಕಲಬುರಗಿಯ ಹನುಮಾನ ನಗರದ ತಾಂಡಾ ಅಂಗನವಾಡಿಯಲ್ಲಿ ಪರೀಶಿಲನೆ‌ ವೇಳೆ ಮೊಟ್ಟೆ ತೂಕದಲ್ಲಿ ಬಾರಿ ವ್ಯತ್ಯಾಸ ಬಂದಿದ್ದು, ನಿಗದಿತ ತೂಕಕ್ಕಿಂತ ಕಡಿಮೆಯಿದೆ. ಚಿಕ್ಕ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲಿಯೂ ಭಾರಿ ಗೋಲ್ ಮಾಲ್ ಆಗಿದ್ದು,ಇದನ್ನು ಕಂಡು ಖುದ್ದು ಲೋಕಾಯುಕ್ತ ಎಸ್ಪಿ ಹೌಹಾರಿದ್ದಾರೆ.

ಕಲಬುರಗಿ: ಅಂಗನವಾಡಿಗಳಲ್ಲಿ ಕಳಪೆ ಆಹಾರ ಪೂರೈಕೆ; ಲೋಕಾಯುಕ್ತ ಅಧಿಕಾರಿಗಳ ಧಿಡಿರ್ ದಾಳಿ
ಕಲಬುರಗಿ ಅಂಗನವಾಡಿಗಳ ಮೇಲೆ ಲೋಕಾಯುಕ್ತ ದಾಳಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Mar 15, 2024 | 3:45 PM

Share

ಕಲಬುರಗಿ, ಮಾ.15: ಅಂಗನವಾಡಿಗಳಲ್ಲಿ ಕಳಪೆ ಆಹಾರ ಪೂರೈಕೆ ಹಿನ್ನೆಲೆ ಕಲಬುರಗಿ(Kalaburagi) ಜಿಲ್ಲೆಯ ಹಲವು ಅಂಗನವಾಡಿಗಳ ಮೇಲೆ ಲೋಕಾಯುಕ್ತ(Lokayukta) ಅಧಿಕಾರಿಗಳು ದಿಢೀರ್ ದಾಳಿ ಮಾಡಿದ್ದಾರೆ. ಕಲಬುರಗಿಯ ಹನುಮಾನ ನಗರದ ತಾಂಡಾ ಅಂಗನವಾಡಿಯಲ್ಲಿ ಪರೀಶಿಲನೆ‌ ವೇಳೆ ಮೊಟ್ಟೆ ತೂಕದಲ್ಲಿ ಬಾರಿ ವ್ಯತ್ಯಾಸ ಬಂದಿದ್ದು, ನಿಗದಿತ ತೂಕಕ್ಕಿಂತ ಕಡಿಮೆಯಿದೆ. ಕನಿಷ್ಠ 50 ಗ್ರಾಂ ಮೊಟ್ಟೆ ತೂಕ ಇರಬೇಕು‌ ಎಂಬ ನಿಯಮವಿದೆ. ಆದ್ರೆ, ಅಂಗನವಾಡಿಗಳಲ್ಲಿ ಸಿಕ್ಕ ಮೊಟ್ಟೆಯ ತೂಕ 23-30 ಗ್ರಾಂ ಮಾತ್ರ ಇದೆ.

ಮೊಟ್ಟೆಯಲ್ಲಿಯೂ ಭಾರಿ ಗೋಲ್ ಮಾಲ್

ಲೋಕಾಯುಕ್ತ ಎಸ್ಪಿ ಜಾನ್ ಆಂಟೋನಿ ನೇತೃತ್ವದಲ್ಲಿ ಇಂದು(ಮಾ.15) ಅಧಿಕಾರಿಗಳು ದಾಳಿ ನಡೆಸಿದ್ದರು. ಚಿಕ್ಕ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲಿಯೂ ಭಾರಿ ಗೋಲ್ ಮಾಲ್ ಆಗಿದ್ದು, ಮೊಟ್ಟೆ ತೂಕ ಕಡಿಮೆ ಜೊತೆಗೆ ಮೊಟ್ಟೆಗಳು ಕೂಡ ಕೊಳೆತ ಹೋಗಿವೆ. ಇನ್ನು ಆಹಾರ ಪೊಟ್ಟಣಗಳಲ್ಲಿಯೂ ಕಳಪೆ ಆಹಾರ ಪೂರೈಕೆ ಪತ್ತೆಯಾಗಿದೆ. ಇದನ್ನು ಕಂಡು ಖುದ್ದು ಲೋಕಾಯುಕ್ತ ಎಸ್ಪಿ ಹೌಹಾರಿದ್ದಾರೆ. ಇಂತಹ ಆಹಾರಗಳನ್ನು ಅಂಗನವಾಡಿ ಮಕ್ಕಳು ಮತ್ತು ಗರ್ಭಿಣಿಯರಿಗೆ ನೀಡಿ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ.

ಇದನ್ನೂ ಓದಿ:ಬಳ್ಳಾರಿಯಲ್ಲಿ 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಇಂಜಿನಿಯರ್

ಲೋಕಸಭಾ ಚುನಾವಣೆ ಹಿನ್ನೆಲೆ ರೌಡಿಶೀಟರ್​ಗಳಿಗೆ ಎಚ್ಚರಿಕೆ

ಕೋಲಾರ: ಲೋಕಸಭಾ ಚುನಾವಣೆ ಹಿನ್ನೆಲೆ, ಅಪರ ಎಸ್ಪಿ ರವಿಶಂಕರ್ ನೇತೃದಲ್ಲಿ ಕೋಲಾರ ಜಿಲ್ಲಾ ಪೋಲೀಸರಿಂದ ನಗರದ ಕವಾಯತು ಮೈದಾನದಲ್ಲಿ ರೌಡಿ ಶೀಟರ್ಸ್ ಪೆರೇಡ್ ನಡೆಸಲಾಗಿದೆ. ಯಾವುದೇ ರೀತಿ ದೌರ್ಜನ್ಯ, ಗಲಾಟೆ ನಡೆಸದಂತೆ, ಜೊತೆಗೆ ಯಾವುದೇ ಪ್ರಕರಣದಲ್ಲಿ ಭಾಗಿಯಾದರೆ ಗಡಿಪಾರು ಮಾಡುವುದಾಗಿ ರೌಡಿ ಶೀಟರ್ಸ್​ಗೆ ಎಚ್ಚರಿಕೆ ನೀಡಲಾಗಿದೆ. ಇನ್ನು ವಯಸ್ಸಾದವರೂ ಇದ್ದರೆ ಅವರನ್ನು ರೌಡಿ ಶೀಟರ್ ಹೆಸರಿನಿಂದ ಕೈಬಿಡಲಾಗುತ್ತದೆ ಎಂದರು. ಪೆರೇಡ್​ನಲ್ಲಿ ಡಿವೈಎಸ್ಪಿ ಎಂ. ಹೆಚ್ ನಾಗ್ತೆ, ವೃತ್ತ ನಿರೀಕ್ಷಕರು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ