AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆದಷ್ಟೂ ಬಯಲಾಗುತ್ತಿದೆ ಪಿಎಸ್ಐ ನೇಮಕಾತಿ ಅಕ್ರಮ; ಮತ್ತೋರ್ವ ಕಿಂಗ್ ಪಿನ್ ಮಂಜುನಾಥ ಮೇಳಕುಂದಿ ನಾಪತ್ತೆ

ಸಿಐಡಿ ಮಂಜುನಾಥ ಮನೆಗೆ ಹೋಗಿ ಪರಿಶೀಲನೆ ನಡೆಸಿದ್ದು ಮಂಜುನಾಥ ಮನೆಯಲ್ಲಿ ಅನೇಕ ಪರೀಕ್ಷೆಯ ಹಾಲ್ ಟಿಕೆಟ್ಗಳು ಪತ್ತೆಯಾಗಿವೆ. ಬೇರೆ ಬೇರೆ ಅಭ್ಯರ್ಥಿಗಳ ಹಾಲ್ ಟಿಕೆಟ್ಗಳು ಸಿಕ್ಕಿವೆ.

ಬಗೆದಷ್ಟೂ ಬಯಲಾಗುತ್ತಿದೆ ಪಿಎಸ್ಐ ನೇಮಕಾತಿ ಅಕ್ರಮ; ಮತ್ತೋರ್ವ ಕಿಂಗ್ ಪಿನ್ ಮಂಜುನಾಥ ಮೇಳಕುಂದಿ ನಾಪತ್ತೆ
ಕಲಬುರಗಿಯಲ್ಲಿ 545 ಪಿಎಸ್‌ಐಗಳ ನೇಮಕಾತಿಯಲ್ಲಿ ಭಾರೀ ಅಕ್ರಮ
TV9 Web
| Updated By: ಆಯೇಷಾ ಬಾನು|

Updated on: Apr 21, 2022 | 7:17 AM

Share

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಬಗೆದಷ್ಟು ಆಳಕ್ಕೆ ಹೋಗ್ತಿದೆ. ಅಕ್ರಮದ ಮತ್ತೋರ್ವ ಕಿಂಗ್ ಪಿನ್ ಮಂಜುನಾಥ ಮೇಳಕುಂದಿ ನಾಪತ್ತೆಯಾಗಿದ್ದಾರೆ. ಕಲಬುರಗಿ ನೀರಾವರಿ ಇಲಾಖೆಯ ಸಹಾಯಕ ಇಂಜನೀಯರ್ ಮಂಜುನಾಥ ಮೇಳಕುಂದಿ ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದಾರೆ. ಕಲಬುರಗಿ ನಗರದ ಎನ್ಜಿಒ ಕಾಲೋನಿ ನಿವಾಸಿ ಮಂಜುನಾಥ, ಕಲಬುರಗಿ ಜಿಲ್ಲೆಯ ಸೇಡಂ ನಿವಾಸಿ ವಿರೇಶ್ ಅನ್ನೋ ಅಭ್ಯರ್ಥಿಯಿಂದ ಬರೋಬ್ಬರಿ 39 ಲಕ್ಷ ಹಣ ಪಡೆದಿದ್ದ. ವಿರೇಶ್, ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ. ಇಡೀ ಪ್ರಕರಣ ಬೆಳಕಿಗೆ ಬಂದಿದ್ದೆ ವಿರೇಶ್ ಅನ್ನೋ ಅಭ್ಯರ್ಥಿ ಬಂಧನದ ನಂತರ. ಸದ್ಯ ವಿಚಾರಣೆ ವೇಳೆ ತಾನು ಮಂಜುನಾಥ ಅನ್ನೋನಿಗೆ 39 ಲಕ್ಷ ಹಣ ನೀಡಿರೋದಾಗಿ ವಿರೇಶ್ ತಪ್ಪೊಪ್ಪಿಕೊಂಡಿದ್ದಾನೆ. ಪಿಎಸ್ಐ ಪರೀಕ್ಷೆ ಅಕ್ರಮವಾಗಿ ಪಾಸ್ ಮಾಡಿಸಲು ಹಣ ನೀಡಿರೋದಾಗಿ ವಿರೇಶ್ ಹೇಳಿಕೆ ನೀಡಿದ್ದಾನೆ. ವಿರೇಶ್ ಮಾಹಿತಿ ಮೇರೆಗೆ ಮಂಜುನಾಥನನ್ನು ಸಿಐಡಿ ಪೊಲೀಸರು ವಿಚಾರಣೆಗೆ ಕರೆದಿದ್ದರು. ಆದ್ರೆ ಕಳೆದ ಕೆಲ ದಿನಗಳಿಂದ ಮಂಜುನಾಥ ನಾಪತ್ತೆಯಾಗಿದ್ದಾನೆ.

ಸಿಐಡಿ ಮಂಜುನಾಥ ಮನೆಗೆ ಹೋಗಿ ಪರಿಶೀಲನೆ ನಡೆಸಿದ್ದು ಮಂಜುನಾಥ ಮನೆಯಲ್ಲಿ ಅನೇಕ ಪರೀಕ್ಷೆಯ ಹಾಲ್ ಟಿಕೆಟ್ಗಳು ಪತ್ತೆಯಾಗಿವೆ. ಬೇರೆ ಬೇರೆ ಅಭ್ಯರ್ಥಿಗಳ ಹಾಲ್ ಟಿಕೆಟ್ಗಳು ಸಿಕ್ಕಿವೆ. ಅಕ್ರಮವಾಗಿ ಪರೀಕ್ಷೆ ಬರೆಯಲು ಅಭ್ಯರ್ಥಿಗಳನ್ನು ಹುಡುಕುತ್ತಿದ್ದ ಈ ಮಂಜುನಾಥ, ಅಭ್ಯರ್ಥಿಗಳನ್ನು ಹುಡುಕಿ ಪರೀಕ್ಷಾ ಕೇಂದ್ರದವರ ಜೊತೆ ಡೀಲ್ ಮಾಡಿಸುತ್ತಿದ್ದ. ವಿರೇಶ್ ನಿಂದ ಹಣ ಪಡೆದಿರೋ ಅನೇಕ ಸಾಕ್ಷಿಗಳು ಸಿಐಡಿ ಪೊಲೀಸರಿಗೆ ತನಿಕೆ ವೇಳೆ ಸಿಕ್ಕಿವೆ. ನಾಪತ್ತೆಯಾಗಿರೋ ಮಂಜುನಾಥನಿಗಾಗಿ ಸಿಐಡಿ ಹುಡುಕಾಟ ನಡೆಸುತ್ತಿದೆ.

ಪ್ರಕರಣ ಸಂಬಂಧ 8 ಜನ ಅರೆಸ್ಟ್ ಇನ್ನು ಸಿಐಡಿ ಪೊಲೀಸರು ಇಲ್ಲಿವರಗೆ ಎಂಟು ಜನರನ್ನು ಬಂಧಿಸಿದ್ದಾರೆ. ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ನಾಲ್ವರು ಅಭ್ಯರ್ಥಿಗಳು, ಮೂವರು ಕೊಠಡಿ ಮೇಲ್ವಿಚಾರಕಿಯರು, ಓರ್ವ ಜ್ಞಾನಜೋತಿ ಇಂಗ್ಲಿಷ್ ಶಾಲೆ ಅಧ್ಯಕ್ಷ ರಾಜೇಶ್ ಹಾಗರಗಿಯನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಆರು ಜನರನ್ನು ಮೂರು ದಿನಗಳ ಕಾಲ ತಮ್ಮ ಕಸ್ಟಡಿಗೆ ತಗೆದುಕೊಂಡು ಸಿಐಡಿ ವಿಚಾರಣೆ ನಡೆಸಿದೆ. ಆದ್ರೆ ವಿಚಾರಣೆ ವೇಳೆ ಯಾವುದೇ ಸತ್ಯವನ್ನು ಅಭ್ಯರ್ಥಿಗಳು ಬಾಯಿಬಿಟ್ಟಿಲ್ಲ. ತಮಗೇನು ಗೊತ್ತಿಲ್ಲಾ, ತಾವು ಅಕ್ರಮ ಮಾಡೇ ಇಲ್ಲಾ ಅಂತ ಹೇಳ್ತಿದ್ದಾರೆ. ಆದ್ರೆ ವೀರೇಶ್ ಅನ್ನೋ ಅಭ್ಯರ್ಥಿ ಹಣ ನೀಡಿರೋ ಬಗ್ಗೆ ಹೇಳಿಕೆ ನೀಡಿದ್ದಾನೆ. ಕಿಂಗ್ ಪಿನ್ ಮಂಜುನಾಥನಿಗೆ 39 ಲಕ್ಷ ಹಣ ನೀಡಿದ್ದೇನೆ ಎಂದಿದ್ದಾನೆ. ಅಕ್ರಮದ ಬಗ್ಗೆ ಬೇರೆ ಬೇರೆ ರೀತಿಯಿಂದ ಸಿಐಡಿ ತನಿಖೆ ನಡೆಸುತ್ತಿದೆ. ಬಂಧಿತ ಅಭ್ಯರ್ಥಿಗಳ ಬ್ಯಾಂಕ್ ಡಿಟೈಲ್ಸ್, ಹಣದ ವರ್ಗಾವಣೆ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.

ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಕಿಂಗ್ ಪಿನ್ಗಳು ಪ್ರಕರಣದ ಕಿಂಗ್ ಪಿನ್ ಜ್ಞಾನಜೋತಿ ಇಂಗ್ಲಿಷ್ ಶಾಲೆ ಕಾರ್ಯದರ್ಶಿ ದಿವ್ಯಾ ಹಾಗರಗಿ ಮತ್ತು ಶಾಲೆಯ ಹೆಡ್ ಮಾಸ್ಟರ್ ಕಾಶಿನಾಥ್ ಸೇರಿದಂತೆ ಅನೇಕರು ನಾಪತ್ತೆಯಾಗಿದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಕಲಬುರಗಿ ಒಂದನೇ ಜೆಎಂಎಫ್ಸಿ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇಂದು ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆಗೆ ಬರೋ ಸಾಧ್ಯತೆ ಇದೆ. ಮತ್ತೊಂದಡೆ ಈಗಾಗಲೇ ಬಂಧನವಾಗಿರೋ ಎಂಟು ಜನರಿಂದ ಕೂಡಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ.

ಇದನ್ನೂ ಓದಿ: ವಿವೇಕ್ ಅಗ್ನಿಹೋತ್ರಿ ಮುಂದಿನ ಚಿತ್ರ ‘ದಿ ಡೆಲ್ಲಿ ಫೈಲ್ಸ್​​’ ವಿರೋಧಿಸಿದ ಮಹಾರಾಷ್ಟ್ರ ಸಿಖ್ ಅಸೋಸಿಯೇಷನ್; ಕಾರಣವೇನು?

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್