AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ ಮಠದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ಲಿಂಗೈಕ್ಯ

ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ, ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಲಬುರಗಿಯ ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಡಾ. ಶ್ರೀ ಶರಣಬಸಪ್ಪ ಅಪ್ಪಾ ಅವರು ಪತ್ನಿ, ನಾಲ್ವರು ಪುತ್ರಿ ಮತ್ತು ಓರ್ವ ಪುತ್ರ ಹಾಗೂ ಲಕ್ಷಾಂತರ ಭಕ್ತರನ್ನು ಅವರು ಅಗಲಿದ್ದಾರೆ.

ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ ಮಠದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ಲಿಂಗೈಕ್ಯ
ಕಲಬುರಗಿಯ ಡಾ. ಶ್ರೀ ಶರಣಬಸಪ್ಪ ಅಪ್ಪ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Aug 14, 2025 | 10:52 PM

Share

ಕಲಬುರಗಿ, ಆಗಸ್ಟ್​ 14: ಕಲಬುರಗಿಯ (Kalaburagi) ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶರಣಬಸಪ್ಪ ಅಪ್ಪ (Sharanabasappa appa) ಅವರು ಕಲಬುರಗಿಯ ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು (ಆ.14) ಲಿಂಗೈಕ್ಯರಾಗಿದ್ದಾರೆ. ಡಾ. ಶ್ರೀ ಶರಣಬಸಪ್ಪ ಅಪ್ಪಾ ಅವರು ಪತ್ನಿ, ನಾಲ್ವರು ಪುತ್ರಿ ಮತ್ತು ಓರ್ವ ಪುತ್ರ ಹಾಗೂ ಲಕ್ಷಾಂತರ ಭಕ್ತರನ್ನು ಅವರು ಅಗಲಿದ್ದಾರೆ.

ಡಾ. ಶ್ರೀ ಶರಣಬಸಪ್ಪ ಅಪ್ಪ ಅವರು ಕಳೆದ ತಿಂಗಳು ಜುಲೈ 26 ರಂದು ವಯೋಸಹಜ ಕಾಯಿಲೆ ಮತ್ತು ನ್ಯುಮೋನಿಯಾ ಚಿಕಿತ್ಸೆಗಾಗಿ ಚಿರಾಯು ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ (ಆ.14) ಡಾ.ಶರಣಬಸಪ್ಪ ಅಪ್ಪ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಶರಣಬಸವೇಶ್ವರ ಮಠಕ್ಕೆ ಶಿಫ್ಟ್‌ ಮಾಡಲಾಗಿತ್ತು. ಮಠಕ್ಕೆ ಶಿಫ್ಟ್‌ ಆಗುತ್ತಿದ್ದಂತೆ ಡಾ.ಶರಣಬಸಪ್ಪ ಅಪ್ಪ ಲಿಂಗೈಕ್ಯರಾಗಿದ್ದಾರೆ.

ಡಾ. ಶ್ರೀ ಶರಣಬಸಪ್ಪ ಅಪ್ಪ ಅವರು ಕಲಬುರಗಿಯಲ್ಲಿ ಶೈಕ್ಷಣಿಕ ಕ್ರಾಂತಿಗೆ ಹೆಸರುವಾಸಿಯಾಗಿದ್ದರು. ಶರಣಬಸವೇಶ್ವರ ಸಂಸ್ಥಾನ ಕಲ್ಯಾಣ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ ದಾಸೋಹ ವ್ಯವಸ್ಥೆಗೆ ಹೆಸರುವಾಸಿಯಾಗಿದೆ. ಡಾ. ಶ್ರೀ ಶರಣಬಸಪ್ಪ ಅವರು 1988ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

ಮಠದ ಆವರಣದಲ್ಲಿ ಅಂತ್ಯಕ್ರಿಯೆ

ಇಂದು ರಾತ್ರಿ 9.20ರ ಸುಮಾರಿಗೆ ಶರಣಬಸವಪ್ಪ ಅಪ್ಪ ಅವರು ಲಿಂಗೈಕರಾಗಿದ್ದಾರೆ. ದೇವಸ್ಥಾನದ ಮುಂಭಾಗದಲ್ಲಿಯೇ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.  ಸಾವಿರಾರು ಸಂಖ್ಯೆಯಲ್ಲಿ ಭಕ್ತರ ಆಗಮನ ಹಿನ್ನೆಲೆಯಲ್ಲಿ ಬಂದೋಬಸ್ತ ಮಾಡಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಅಂತಿಮ ದರ್ಶನ ವ್ಯವಸ್ಥೆ ಮಾಡಲು ಕುಟುಂಬಸ್ಥರ ಜೊತೆ ಸಮಾಲೋಚನೆ‌ ನಡೆಸಿ ತಿಳಿಸಲಾಗುವುದು ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:10 pm, Thu, 14 August 25

ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್