AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಧನ ಅಂತ್ಯಕ್ರಿಯೆ ವೇಳೆ ಜಿಲ್ಲಾಧಿಕಾರಿ, ಎಸ್​ಪಿ ಕಣ್ಣಲ್ಲಿ ನೀರು; ಮಾತೃ ಹೃದಯಿ ಅಧಿಕಾರಿಗಳ ಕಂಡು ಭಾವೋದ್ವೇಗಗೊಂಡ ಜನರು

ತಾಯಿ ಹೃದಯದ ಇಬ್ಬರು ಅಧಿಕಾರಿಗಳನ್ನು ನೋಡಿ ನೆರೆದಿದ್ದವರ ಕಣ್ಣಾಲೆಗಳು ಕೂಡಾ ತೇವಗೊಂಡಿದ್ದವು.

ಯೋಧನ ಅಂತ್ಯಕ್ರಿಯೆ ವೇಳೆ ಜಿಲ್ಲಾಧಿಕಾರಿ, ಎಸ್​ಪಿ ಕಣ್ಣಲ್ಲಿ ನೀರು; ಮಾತೃ ಹೃದಯಿ ಅಧಿಕಾರಿಗಳ ಕಂಡು ಭಾವೋದ್ವೇಗಗೊಂಡ ಜನರು
ಯೋಧನ ಕುಟುಂಬದ ಕಣ್ಣೀರು ಒರೆಸುತ್ತಿರುವ ಜಿಲ್ಲಾಧಿಕಾರಿ ವಿ ವಿ ಜೋತ್ಸ್ನಾ
Follow us
TV9 Web
| Updated By: guruganesh bhat

Updated on: Aug 05, 2021 | 7:53 PM

ಕಲಬುರಗಿ: ಜಿಲ್ಲೆಯಲ್ಲಿ ಎರಡು ಮುಖ್ಯ ಸ್ಥಾನಗಳಲ್ಲಿ ಮಹಿಳೆಯರೇ ಇದ್ದಾರೆ. ಕಲಬುರಗಿ ಜಿಲ್ಲಾಧಿಕಾರಿಯಾಗಿ ಕಳೆದ ಕೆಲ ತಿಂಗಳಿಂದ ವಿ ವಿ ಜೋತ್ನ್ನಾ ಮತ್ತು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಡಾ. ಸಿಮಿ ಮರಿಯಮ್ ಜಾರ್ಜ್ ಜವಾಬ್ಧಾರಿ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ಎರಡು ಸ್ಥಾನಗಳನ್ನು ಮಹಿಳೆಯರೇ ಅಲಂಕರಿಸಿದ್ದು ವಿಶೇಷ. ಇಬ್ಬರು ಅಧಿಕಾರಿಗಳು ಕೂಡಾ ತಮ್ಮ ಉತ್ತಮ ಕೆಲಸದಿಂದ ಜಿಲ್ಲೆಯಲ್ಲಿ ಸುದ್ದಿಯಲ್ಲಿರುತ್ತಾರೆ. ಇಂದು ಈ ಇಬ್ಬರು ಅಧಿಕಾರಿಗಳು ಕೂಡಾ ವಿಭಿನ್ನವಾಗಿ ಕಂಡರು. ಇಬ್ಬರು ಭಾವೋದ್ವೇಗಕ್ಕೊಳಗಾಗಿದ್ದರು. ಇಬ್ಬರ ಕಣ್ಣಾಲಿಗಳು ಕೂಡಾ ತೇವಗೊಂಡಿದ್ದವು. ಇಂತಹದೊಂದು ಘಟನೆ ನಡೆದಿದ್ದು, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ನಡೆದ ಹುತಾತ್ಮ ಯೋಧ ರಾಜಕುಮಾರ್ ಮಾಮನಿ ಅವರ ಅಂತ್ಯಕ್ರಿಯೆ ಸಂದರ್ಭದಲ್ಲಿ.

ಭಾರತ -ಬಾಂಗ್ಲಾ ಗಡಿಯಲ್ಲಿ ಗಸ್ತಿನಲ್ಲಿದ್ದ ಯೋಧ ರಾಜಕುಮಾರ್ ಮಾಮನಿ, ಉಗ್ರರ ಗುಂಡಿಗೆ ಬಲಿಯಾಗಿದ್ದರು. ಇಂದು ರಾಜಕುಮಾರ್ ಮಾಮನಿ ಅವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಚಿಂಚನಸೂರು ಗ್ರಾಮದಲ್ಲಿ ನಡೆಯಿತು. ಹುತಾತ್ಮ ಯೋಧನ ಅಂತ್ಯಕ್ರಿಯೆಗೆ ಸಕಲ ವ್ಯವಸ್ಥೆ ಮಾಡಿದ್ದ ಕಲಬುರಗಿ ಜಿಲ್ಲಾಧಿಕಾರಿ ವಿ ವಿ ಜೋತ್ಸ್ನಾ ಮತ್ತು ಎಸ್ಪಿ ಡಾ. ಸಿಮಿ ಮರಿಯಮ್ ಜಾರ್ಜ್, ಸ್ವತ ತಾವೇ ಗ್ರಾಮಕ್ಕೆ ಆಗಮಿಸಿ, ಹುತಾತ್ಮ ಯೋಧನ ಪ್ರಾರ್ಥಿವ ಶರೀರದ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕುಟುಂಬದವರು ಮತ್ತು ಹುತಾತ್ಮ ಯೋಧ ರಾಜಕುಮಾರ್ ಮಾಮನಿಯ ಪುಟ್ಟ ಮಕ್ಕಳು ಹಾಗೂ ಪತ್ನಿಯ ಕಣ್ಣೀರಿಗೆ, ಎಸ್ಪಿ ಮತ್ತು ಡಿಸಿ ಮನ ಕರಗಿತ್ತು. ಗೌರವ ಸಲ್ಲಿಸುವಾಗ ಇಬ್ಬರು ಕೂಡಾ ಭಾವೋದ್ವೇಗಕ್ಕೆ ಒಳಗಾದರು.

Kalaburagi SP Soldier

ಎಸ್​ಪಿ ಡಾ. ಸಿಮಿ ಮರಿಯಮ್ ಜಾರ್ಜ್ ಯೋಧನ ಕುಟುಂಬಕ್ಕೆ ಸಾಂತ್ವನ ಹೇಳುತ್ತಿರುವುದು

ಎಸ್ಪಿ ಡಾ. ಸಿಮಿ ಮರಿಯಮ್ ಜಾರ್ಜ್ ಅವರ ಕಣ್ಣಲ್ಲಿ ನೀರು ಜಿನುಗಿತು. ಹೀಗಾಗಿ ತಕ್ಷಣವೇ ಹೊರಬಂದು ಕಣ್ಣೀರು ಒರೆಸಿಕೊಂಡು ತಮ್ಮನ್ನು ತಾವೇ ಸಮಾಧಾನ ಮಾಡಿಕೊಂಡು ಕರ್ತವ್ಯ ನಿರ್ವಹಿಸಿದರು. ಮತ್ತೊಂದೆಡೆ ಜಿಲ್ಲಾಧಿಕಾರಿ ವಿ ವಿ ಜೋತ್ನ್ಸಾ ರ ಕಣ್ಣಾಲಿಗಳು ಕೂಡಾ ತೇವಗೊಂಡಿದ್ದವು. ಇಬ್ಬರು ಅಧಿಕಾರಿಗಳು ಸಹ ಹುತಾತ್ಮ ಯೋಧನ ತಾಯಿಯನ್ನು ತಬ್ಬಿಕೊಂಡು ಸಾಂತ್ವನ ಹೇಳಿದರು. ಮಕ್ಕಳಿಗೆ ಮತ್ತು ಪತ್ನಿಗೂ ಧೈರ್ಯ ತುಂಬಿದರು. ಅಂತ್ಯಕ್ರಿಯೆ ಮುಗಿಯುವವರೆಗೂ ಕೂಡಾ ಸ್ಥಳದಲ್ಲಿಯೇ ಬೀಡುಬಿಟ್ಟು, ಯಾವುದೇ ಕುಂದುಕೊರತೆ ಆಗದಂತೆ ನೋಡಿಕೊಂಡರು. ತಾಯಿ ಹೃದಯದ ಇಬ್ಬರು ಅಧಿಕಾರಿಗಳನ್ನು ನೋಡಿ ನೆರೆದಿದ್ದವರ ಕಣ್ಣಾಲೆಗಳು ಕೂಡಾ ತೇವಗೊಂಡಿದ್ದವು.

ವಿಶೇಷ ವರದಿ: ಸಂಜಯ್ ಕಲಬುರಗಿ

ಇದನ್ನೂ ಓದಿ: 

ತ್ರಿಪುರಾ ಗಡಿ ಭಾಗದಲ್ಲಿ ಉಗ್ರರ ಗುಂಡಿನ ದಾಳಿಗೆ ಕಲಬುರಗಿ ಯೋಧ ಹುತಾತ್ಮ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಕ್ರಿಯೆ

Arvind Bellad: ನಾಳೆ ಧಾರವಾಡ ಬಂದ್ ಇಲ್ಲ; ಶಾಸಕ ಅರವಿಂದ ಬೆಲ್ಲದಗೆ ಸಚಿವ ಸ್ಥಾನ ದೊರೆಯದ್ದಕ್ಕೆ ಬಂದ್ ಎಂದು ವೈರಲ್ ಆದದ್ದು ಸುಳ್ಳುಸುದ್ದಿ

(Kalaburagi soldier cremation DC and SP cried people appreciate Mother Heart officials)

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ