AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ, ಮುಖ್ಯ ಶಿಕ್ಷಕಿ ವಿರುದ್ಧ ಎಫ್​ಐಆರ್

ಪೋಷಕರು ನೀಡಿದ ದೂರಿನ ಆಧಾರದಲ್ಲಿ ಕಲಬುರಗಿಯ ಮಾಲಗತ್ತಿ ರಸ್ತೆಯಲ್ಲಿರುವ ಮೌಲಾನ ಆಜಾದ್ ಮಾಡೆಲ್ ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕಿ ಜೋಹರ್ ಜಬೀನ ವಿರುದ್ಧ ಪೊಲೀಸರು ಎಫ್​​ಐಆರ್ ದಾಖಲಿಸಿಕೊಂಡಿದ್ದಾರೆ.

ಕಲಬುರಗಿ: ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ, ಮುಖ್ಯ ಶಿಕ್ಷಕಿ ವಿರುದ್ಧ ಎಫ್​ಐಆರ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 15, 2024 | 1:13 PM

Share

ಕಲಬುರಗಿ, ಜನವರಿ 13: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ್ದೂ ಅಲ್ಲದೆ ತಮ್ಮ ಮನೆಯ ಗಾರ್ಡನ್​ನ ಕೆಲಸ ಮಾಡಿಸಿಕೊಂಡ ಮುಖ್ಯ ಶಿಕ್ಷಕಿ ವಿರುದ್ಧ ಕಲಬುರಗಿಯ (Kalaburagi) ರೋಜಾ ಠಾಣೆಯಲ್ಲಿ ಸೋಮವಾರ ಎಫ್​​ಐಆರ್ (FIR) ದಾಖಲಾಗಿದೆ. ಪೋಷಕರು ನೀಡಿದ ದೂರಿನ ಆಧಾರದಲ್ಲಿ ಮುಖ್ಯ ಶಿಕ್ಷಕಿ ಜೋಹರ್ ಜಬೀನ್ ವಿರುದ್ಧ ಪೊಲೀಸರು ಎಫ್​​ಐಆರ್ ದಾಖಲಿಸಿಕೊಂಡಿದ್ದಾರೆ. ಕಲಬುರಗಿಯ ಮಾಲಗತ್ತಿ ರಸ್ತೆಯಲ್ಲಿರುವ ಮೌಲಾನ ಆಜಾದ್ ಮಾಡೆಲ್ ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕಿ ಜೋಹರ್ ಜಬೀನ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿದ್ದಾರೆ. ಅವರ ಮನೆಯ ಕೆಲಸಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದರು. ಜತೆಗೆ ಪೊಲೀಸರಿಗೆ ದೂರನ್ನೂ ನೀಡಿದ್ದರು.

ಕಳೆದ ಹಲವು ತಿಂಗಳುಗಳಿಂದ ಜೋಹರ ಜಬೀನ ಕೆಲವು ವಿದ್ಯಾರ್ಥಿಗಳನ್ನು ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಬಳಸಿದ್ದರೆ, ಇನ್ನು ಕೆಲವರನ್ನು ಅವರ ನಿವಾಸದಲ್ಲಿರುವ ಉದ್ಯಾನವನ್ನು ಸ್ವಚ್ಛಗೊಳಿಸಲು ಸಹ ಕರೆದೊಯ್ಯುತ್ತಿದ್ದರು. ಈ ಬಗ್ಗೆ ತಮ್ಮ ಪುತ್ರ ಮತ್ತು ಇತರ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದರು ಎಂದು ಪೋಷಕರೊಬ್ಬರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಕಳೆದ ವಾರ ಶಾಲೆಗೆ ಹೋಗಿ, ಶಾಲಾ ವಿದ್ಯಾರ್ಥಿಗಳನ್ನು ಇಂತಹ ಕೆಲಸಗಳಿಗೆ ಬಳಸದಂತೆ ಪ್ರಾಂಶುಪಾಲರಿಗೆ ಎಚ್ಚರಿಕೆ ನೀಡಿದ್ದೆ. ವಿದ್ಯಾರ್ಥಿಗಳನ್ನು ಈ ರೀತಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ದೂರುದಾರರು ಉಲ್ಲೇಖಿಸಿದ್ದರು.

ಇದನ್ನೂ ಓದಿ: ಕಲಬುರಗಿ: ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ, ಪ್ರಾಂಶುಪಾಲರ ಮನೆಗೆಲಸ ಮಾಡಿಸಿದ ಆರೋಪ

ಎಚ್ಚರಿಕೆಯ ಹೊರತಾಗಿಯೂ, ಜೋಹರ ಜಬೀನ ಅವರು ಶನಿವಾರ ಅವರ ಮನೆಯ ತೋಟವನ್ನು ಸ್ವಚ್ಛಗೊಳಿಸಲು ಮಗನಿಗೆ ಸೂಚಿಸಿದ್ದರು ಎಂದು ದೂರುದಾರರು ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು