AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಕೆಟ್ಟು ನಿಂತಿದ್ದ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿ: ಮೂವರು ಸಾವು

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಇವಣಿ ಗ್ರಾಮದ ಬಳಿ ಕೆಟ್ಟು ನಿಂತಿದ್ದ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವಂತಹ ದುರ್ಘಟನೆ ನಡೆದಿದೆ. ಮಾಡಬೂಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾಡಲಗಿ ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ಹತ್ತನೆ ತರಗತಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಕಲಬುರಗಿ: ಕೆಟ್ಟು ನಿಂತಿದ್ದ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿ: ಮೂವರು ಸಾವು
ಟ್ಯಾಂಕರ್ ಡಿಕ್ಕಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 30, 2023 | 10:34 PM

Share

ಕಲಬುರಗಿ, ನವೆಂಬರ್​ 30: ಕೆಟ್ಟು ನಿಂತಿದ್ದ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿ (accident) ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಇವಣಿ ಗ್ರಾಮದ ಬಳಿ ನಡೆದಿದೆ. ಹೈದರಾಬಾದ್, ಬೀದರ್ ಮೂಲದ ಪ್ರಶಾಂತ್, ವಿಠ್ಠಲ್, ಮಂಗ್ಲಿ ಮೃತರು. ಕಲಬುರಗಿಯಿಂದ ಸೇಡಂ ಮಾರ್ಗವಾಗಿ ಹೈದರಾಬಾದ್​ಗೆ ತೆರಳುತ್ತಿದ್ದು, ಇವಣಿ ಗ್ರಾಮದ ಬಳಿ ವಾಹನ ಕೆಟ್ಟು ನಿಂತಿದ್ದರಿಂದ ರಸ್ತೆ ಬದಿ ನಿಲ್ಲಿಸಿ ದುರಸ್ತಿ ಮಾಡಲಾಗುತ್ತಿದ್ದು, ಈ ವೇಳೆ ಹಿಂದಿನಿಂದ ಬಂದ ಸಿಮೆಂಟ್ ಟ್ಯಾಂಕರ್ ಹರಿದು ಮೂವರು ಮೃತಪಟ್ಟಿದ್ದಾರೆ. ಮಾಡಬೂಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಯಲ್ಲಿ ಮುಳುಗಿ ಹತ್ತನೆ ತರಗತಿ ವಿದ್ಯಾರ್ಥಿ ಸಾವು

ಕಾರವಾರ: ಕೆರೆಯಲ್ಲಿ ಮುಳುಗಿ ಹತ್ತನೆ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾಡಲಗಿ ಗ್ರಾಮದಲ್ಲಿ ನಡೆದಿದೆ. ಬನವಾಸಿಯ ಸಮೀಪದ ಮಧುರವಳ್ಳಿ ಗ್ರಾಮದ ರಾಮ್ ಕುಮಾರ ಮೃತ ವಿದ್ಯಾರ್ಥಿ. ಸಂಜೆ 4 ಗಂಟೆಗೆ ನಾಲ್ಕು ಜನ ಸ್ನೇಹಿತರು ಕೆರೆಯಲ್ಲಿ ಆಡಲು ಹೋದಾಗ ಘಟನೆ ಸಂಭವಿಸಿದೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಲಾಯರ್ ಮೇಲೆ ಪೋಲಿಸರಿಂದ ಹಲ್ಲೆ ಆರೋಪ

ಚಿಕ್ಕಮಗಳೂರು: ಲಾಯರ್ ಮೇಲೆ ಪೋಲಿಸರಿಂದ ಹಲ್ಲೆ ಗಂಭೀರ ಆರೋಪ ಕೇಳಿಬಂದಿದೆ. ವಕೀಲ ಎನ್.ಟಿ.ಪ್ರೀತಮ್ ಮೇಲೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರಿಂದ ಹಲ್ಲೆ ಆರೋಪ ಮಾಡಿದ್ದಾರೆ. ಹೆಲ್ಮೆಟ್ ಧರಿಸದೆ ಬೈಕ್ ಓಡಿಸುತ್ತಿದ್ದ ವಕೀಲ ಪ್ರೀತಮ್​ಗೆ ದಂಡ ಪಾವತಿಸುವುದಾಗಿ ಹೇಳಿದರೂ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಬೈಕ್ ಕೀ ತೆಗೆದುಕೊಂಡ ಪೊಲೀಸರನ್ನು ಪ್ರಶ್ನಿಸಿದ್ದ ವಕೀಲ ಪ್ರೀತಮ್, ಠಾಣೆಗೆ ಕರೆತಂದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ತುಮಕೂರು: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು

ಬೆನ್ನು, ಕೈ, ಎದೆ ಭಾಗಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಬೂಟ್​ಗಾಲಿನಿಂದ ಒದ್ದು, ಹಾಕಿ ಸ್ಟಿಕ್​ನಿಂದ ಬೆನ್ನಿಗೆ ಥಳಿಸಿರುವುದಾಗಿ ಆರೋಪಿಸಿದ್ದಾರೆ. ಸದ್ಯ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಪ್ರೀತಮ್ ದಾಖಲು ಮಾಡಲಾಗಿದೆ.

ಬೈಕ್​​ ಮತ್ತು ಕಾರು ಮುಖಾಮುಖಿ ಡಿಕ್ಕಿ: ಸವಾರ ಸಾವು

ಬಾಗಲಕೋಟೆ: ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ಬಾಗಲಕೋಟೆ-ಬೆಳಗಾವಿ ರಸ್ತೆಯ ಸಂಶಿ‌ ಕ್ರಾಸ್ ಬಳಿ ನಡೆದಿದೆ. ಪಾಂಡು ಅನವಾಲ(31)ಮೃತ ವ್ಯಕ್ತಿ. ಸ್ಥಳಕ್ಕೆ ‌ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ