AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಟ್ರೆಷರಿ ಹಣಕ್ಕೆ ಕನ್ನ; ಕೋಟ್ಯಂತರ ರೂ. ವಂಚನೆ ನಡೆದರೂ ದೂರು ನೀಡದ ಆಡಳಿತ ಮಂಡಳಿ

ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಲಕ್ಷಾಂತರ ರೂಪಾಯಿಗಳ ಆರ್ಥಿಕ ವಂಚನೆ ನಡೆದಿದೆ. ಅಕೌಂಟೆಂಟ್ ಶರಣು ಸಿಬ್ಬಂದಿಗೆ ಸಂಬಳ ನೀಡುವ ನೆಪದಲ್ಲಿ ತನ್ನ ವೈಯಕ್ತಿಕ ಖಾತೆಗೆ ಹಣ ವರ್ಗಾಯಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ಹಗರಣವು ಲೆಕ್ಕಪತ್ರ ಪರಿಶೋಧನೆಯಲ್ಲಿ ಬೆಳಕಿಗೆ ಬಂದರೂ, ಆರಂಭದಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಕುಲಪತಿಗಳ ಹೇಳಿಕೆಗಳು ಬದಲಾಗುತ್ತಿರುವುದು ಮತ್ತು ತನಿಖೆಯಲ್ಲಿನ ಅನುಮಾನಗಳು ಪ್ರಕರಣದ ಸುತ್ತ ಮತ್ತಷ್ಟು ಗೊಂದಲ ಮೂಡಿಸಿವೆ.

ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಟ್ರೆಷರಿ ಹಣಕ್ಕೆ ಕನ್ನ; ಕೋಟ್ಯಂತರ ರೂ. ವಂಚನೆ ನಡೆದರೂ ದೂರು ನೀಡದ ಆಡಳಿತ ಮಂಡಳಿ
ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಟ್ರೆಷರಿ ಹಣಕ್ಕೆ ಕನ್ನ; ಕೋಟ್ಯಂತರ ರೂ. ವಂಚನೆ ನಡೆದರೂ ದೂರು ನೀಡದ ಆಡಳಿತ ಮಂಡಳಿ
ದತ್ತಾತ್ರೇಯ ಪಾಟೀಲ್​
| Edited By: |

Updated on: Mar 23, 2026 | 2:37 PM

Share

ಕಲಬುರ್ಗಿ, ಮಾರ್ಚ್​ 23: ಜಿಲ್ಲೆಯ ವಿಶ್ವವಿದ್ಯಾಲಯದ ಖಜಾನೆಗೆ ಕನ್ನ ಬಿದ್ದಿದ್ದು, ಸಿಬ್ಬಂದಿಗೆ ಸಂಬಳ ನೀಡುವ ಜವಾಬ್ದಾರಿ ಹೊತ್ತ ಅಕೌಂಟಂಟ್​ನಿಂದಲೇ ಈ ವಂಚನೆ (Fraud) ನಡೆದಿದೆ. ಆತ ತನ್ನ ವೈಯಕ್ತಿಕ ಖಾತೆಗೆ ಲಕ್ಷಾಂತರ ಹಣ ವರ್ಗಾಯಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಯಾವುದೇ ದೂರು ದಾಖಲಾಗದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಅನುಮಾನಕ್ಕೆ ಎಡೆಮಾಡಿಕೊಟ್ಟ ಕುಲಪತಿಗಳ ಹೇಳಿಕೆ!

ಕಲಬುರ್ಗಿ ವಿವಿಯ ಎಲ್ಲಾ ಸಿಬ್ಬಂದಿಗೆ ಸಂಬಳ ಕೊಡಬೇಕಾದ ಅಕೌಂಟೆಂಟ್ ಶರಣು, ತನ್ನ ವೈಯಕ್ತಿಕ ಖಾತೆಗೆ ಲಕ್ಷಾಂತರ ರೂಪಾಯಿ ವರ್ಗಾವಣೆ ಮಾಡಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಅದಕ್ಕೂ ಹೆಚ್ಚಾಗಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಈ ಬಗ್ಗೆ ದೂರು ದಾಖಲಿಸದೆ ಕುಳಿತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟಿಹಾಕಿದೆ.

ಅಕೌಂಟಂಟ್ ಶರಣು ತನಗೆ ಬೇಕಾದ ವ್ಯಕ್ತಿಗಳಿಗೆ ಹೆಚ್ಚುವರಿ ಟಿಎ,ಡಿಎ ಹಾಕಿದ್ದೇನೆ ಎಂದು ವಿವಿಯ ಖಾತೆಯಿಂದ ಲಕ್ಷ ಲಕ್ಷ ಹಣ ಸಂದಾಯ ಮಾಡಿದ್ದ. ಬಳಿಕ ಅವರಿಗೆ ಪೋನ್ ಮಾಡಿ ಆ ಹಣವನ್ನು ವಾಪಸ್ ತನ್ನ ವಯುಕ್ತಿಕ ಖಾತೆಗೆ ಹಾಕಿಕೊಂಡು ಮೋಸ ಮಾಡಿದ್ದ. ಆ ಮೋಸದ ಹಣವೇ ಅಂದಾಜು ಬರೋಬ್ಬರಿ ಒಂದು ಕೋಟಿವರೆಗೂ ಆಗಬಹುದು ಎಂದು ಈ ಮೊದಲು ವಿವಿ ಕುಲಪತಿಗಳೇ ಹೇಳಿದ್ದರು. ವಿವಿಯ ಲೆಕ್ಕ ಪತ್ರ ಸಮೀತಿ ಅಡಿಟ್ ವೇಳೆ ಈ ಅಕ್ರಮ ಹಣದ ವರ್ಗಾವಣೆ ಬಹಿರಂಗರ ಗೊಂಡಿತ್ತು. ಹೀಗಿದ್ದರೂ ಈ ಬಗ್ಗೆ ಯಾವುದೇ ದೂರು ದಾಖಲಾಗದೇ ಇರುವುದು ಅನುಮಾನಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ ಕೋರ್ಟ್​ ಉದ್ಯೋಗ ಕೊಡಿಸುವುದಾಗಿ 25 ಲಕ್ಷ ರೂ. ಪಡೆದು ವಂಚಿಸಿದ ಖತರ್ನಾಕ್ ದಂಪತಿ ಅಂದರ್!

ಘಟನೆ ನಡೆದಾಗ ಕೋಟ್ಯಂತರ ರೂಪಾಯಿ ವಹಿವಾಟು ನಡೆದಿದೆ ಎಂದಿದ್ದ ಕುಲಪತಿಗಳು ಈಗ ತನಿಖೆಯಲ್ಲಿ ಕೇವಲ 24 ಲಕ್ಷ ರೂಪಾಯಿ ಅಕ್ರಮ ವರ್ಗಾವಣೆ ನಡೆದಿದೆ ಎಂದು ಹೇಳಿದ್ದಾರೆ ಎಂಬುದು ತಿಳಿದು ಬಂದಿದೆ. ಅಕೌಂಟಂಟ್ ಶರಣು ಈಗಾಗಲೇ ಕೆಲಸಿದಿಂದ ವಜಾಗೊಂಡಿದ್ದಾನೆ.ಆದರೆ ತನಿಖೆಯಲ್ಲಿ ಕುಲಸಚಿವರ ಹೇಳಿಕೆಗಳಿಂದ ಅನುಮಾನ ಹುಟ್ಟಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸ್ಕ್ಯಾಮ್ ಹಣದಲ್ಲಿ ಪ್ರಿಯತಮೆಗೆ ಚಿನ್ನ ಗಿಫ್ಟ್ ನೀಡಿದ್ದ ಜ್ಞಾನೇಂದ್ರ
ಸ್ಕ್ಯಾಮ್ ಹಣದಲ್ಲಿ ಪ್ರಿಯತಮೆಗೆ ಚಿನ್ನ ಗಿಫ್ಟ್ ನೀಡಿದ್ದ ಜ್ಞಾನೇಂದ್ರ
ಭಿಕ್ಷಾಟನೆ ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ
ಭಿಕ್ಷಾಟನೆ ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!