AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಜತೆ ಲಿವಿಂಗ್​​​​​​​ ರಿಲೇಶನ್ ಶಿಪ್​: ಪ್ರೇಯಸಿಗಾಗಿ ಕಳ್ಳನಾದ ಪ್ರಿಯಕರ ಈಗ ಜೈಲು ಪಾಲು

ಸಾಮಾನ್ಯವಾಗಿ ಮೋಜು ಮಸ್ತಿಗಾಗಿ ಅದಕ್ಕೂ ಮಿಗಿಲಾಗಿ ಮಾಡಿದ ಸಾಲವನ್ನ ತೀರಿಸಲು ಕಳ್ಳತನ, ಸುಲಿಗೆ ಮಾಡಿದ ಪ್ರಕರಣಗಳನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಗೆಳೆತಿಯೊಂದಿಗೆ ಲಿವಿಂಗ್ ಟೂಗೆದರ್‌ಗಾಗಿ ಹಣ ಹೊಂದಿಸಲು ಕೂಲಿ ಕೆಲಸಕ್ಕೆಂದು ಹೋಗ್ತಿದ್ದ ಮಹಿಳೆಯರನ್ನ ಸುಲಿಗೆ ಮಾಡಿ ಖಾಕಿ ಕೈಗೆ ತಗಲಾಕೊಂಡಿದ್ದಾನೆ. ಅಷ್ಟಕ್ಕೂ ಖದೀಮನ ಸುಲಿಗೆ ಕೆಲಸ ಹೇಗಿತ್ತು ಎನ್ನುವ ವಿವರ ಇಲ್ಲಿದೆ.

ಮಹಿಳೆ ಜತೆ ಲಿವಿಂಗ್​​​​​​​ ರಿಲೇಶನ್ ಶಿಪ್​: ಪ್ರೇಯಸಿಗಾಗಿ ಕಳ್ಳನಾದ ಪ್ರಿಯಕರ ಈಗ ಜೈಲು ಪಾಲು
Kalaburagi Robbers
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Dec 04, 2025 | 9:07 PM

Share

ಕಲಬುರಗಿ, (ಡಿಸೆಂಬರ್ 04): ತನ್ನ ಲಿವ್‌ ಇನ್‌  (Live in Relationship) ಗೆಳತಿ ಆಸೆ ಪೂರೈಸಲು, ಖರ್ಚು ನಿಭಾಯಿಸಲು ಕಳ್ಳತನಕ್ಕಿಳಿದಿದ್ದ ವ್ಯಕ್ತಿ ಹಾಗೂ ಸಹಾಯ ಮಾಡಿದ್ದವ ಸಿಕ್ಕಿಬಿದ್ದಿದ್ದಾರೆ. ಹೌದು.. ಕೂಲಿ ಕೆಲಸ ಮಾಡುತ್ತಿದ್ದ ಬಡಪಾಯಿ ಮಹಿಳೆಯನ್ನ ಕರೆದುಕೊಂಡು ಹೋಗಿ ಹಲ್ಲೆ ಮಾಡಿ ಚಿನ್ನಾಭರಣಗಳನ್ನ ಸುಲಿಗೆ ಮಾಡಿದ್ದ ಇಬ್ಬರು ಕುಖ್ಯಾತ ಸುಲಿಗೆಕೋರರನ್ನ ಕಲಬುರಗಿ ವಿಶ್ವವಿದ್ಯಾಲಯ ಠಾಣೆ ಪೊಲೀಸರು (Kalaburagi VV Police) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಲ್ಲಪ್ಪ ಅಲಿಯಾಸ್ ಸಂಜು ಸೋಮಣ್ಣ (24) ಬಂಧಿತ ಪ್ರಮುಖ ಆರೋಪಿಯಾಗಿದ್ದು, ಇನ್ನು ಕಲ್ಲಪ್ಪನಿಗೆ ಸಹಾಯ ಮಾಡ್ತಿದ್ದ ಸಂತೋಷ್‌ ಎಂಬಾತನನ್ನು ಸಹ ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 22 ರಂದು ಓಂ ನಗರ ಗೇಟ್ ಬಳಿ ಕೂಲಿ ಕೆಲಸಕ್ಕೆಂದು ದಾರುನಾಯಕ್ ತಾಂಡಾ ನಿವಾಸಿ ಸುನೀತಾ ರಾಠೋಡ್‌ ಎನ್ನುವ ಮಹಿಳೆಯನ್ನು ಕಲ್ಲಪ್ಪ ಅಲಿಯಾಸ್ ಸಂಜು ಮತ್ತು ಸಂತೋಷ್, ಕಟ್ಟಡ ನಿರ್ಮಾಣ ಕಾಮಗಾರಿ ಇದೆ ಎಂದು ವಾಜಪೇಯಿ ಬಡಾವಣೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ಮಾಡಿ ಬೆದರಿಸಿ ಕೊರಳಲ್ಲಿನ ಚಿನ್ನದ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದರು.

ಇದನ್ನೂ ಓದಿ: ಗಂಡನನ್ನು ಬಿಟ್ಟು ಪ್ರಿಯಕರನ ಜತೆ ಲಿವಿಂಗ್​​​​​​​ ರಿಲೇಶನ್ ಶಿಪ್​: ಪ್ರೇಯಸಿಗಾಗಿ ಕಳ್ಳನಾದ ಪ್ರಿಯಕರ

ಈ ಪ್ರಕರಣ ದಾಖಲಸಿಕೊಂಡಿದ್ದ ಕಲಬುರಗಿ ವಿವಿ ಪೊಲೀಸರು, ವಾಜಪೇಯಿ ಬಡಾವಣೆಯಲ್ಲಿನ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದ್ದು, ಈ ವೇಳೆ ಕೂಲಿ ಮಹಿಳೆ ಸುನೀತಾಳನ್ನ ಕರೆದುಕೊಂಡು ಹೋಗುತ್ತಿರುವ ದೃಶ್ಯ ಕಂಡುಬಂದಿದೆ. ಇದರ ಆಧಾರದ ಮೇಲೆ ಕಲ್ಲಪ್ಪ ಅಲಿಯಾಸ್ ಸಂಜು ಮತ್ತು ಸಂತೋಷ್ ಎಂಬಾತರನ್ನ ಬಂಧಿಸಿದ್ದಾರೆ. ಬಂಧಿತ ಸುಲಿಗೆಕೋರರಿಂದ 7.62 ಲಕ್ಷ ಮೌಲ್ಯದ 61 ಗ್ರಾಂ ಚಿನ್ನಾಭರಣ, 600 ಗ್ರಾಂ ಬೆಳ್ಳಿ ವಸ್ತುಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.

ಲಿವ್‌ ಇನ್‌ ಗೆಳತಿ ಆಸೆ ಪೂರೈಸಲು ಸುಲಿಗೆ

ಇನ್ನೂ ಕೂಲಿ ಕೆಲಸ ಮಾಡುತ್ತಿದ್ದ ಕಲ್ಲಪ್ಪ ಅಲಿಯಾಸ್ ಸಂಜು, ಮಹಿಳೆಯೊಬ್ಬಳ ಜೊತೆ ಲಿವಿಂಗ್ ಟುಗೆದರ್ ರಿಲೆಷನ್‌ಶಿಪ್‌ನಲ್ಲಿದ್ದ. ಹೀಗಾಗಿ ಆಕೆಯೊಂದಿಗೆ ಮೋಜು ಮಸ್ತಿ ಮಾಡಲು ಹಣ ಕಡಿಮೆ ಬಿದ್ದಾಗ ಪಿಕ್ ಪಾಕೇಟ್ ದಂಧೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅದರಂತೆ ಕೂಲಿ ಮಾಡುವ ಮಹಿಳೆಯರನ್ನ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಎನ್ನುವುದು ತನಿಖೆಯಲ್ಲಿ ತಿಳಿದುಬಂದಿದೆ.

ಮೈ ಮುರಿದು ದುಡಿದು ಬದುಕುವುದು ಬಿಟ್ಟು ಮಹಿಳೆಯೊಂದಿಗೆ ಮೋಜು ಮಸ್ತಿಗಾಗಿ ಸುಲಿಗೆ ಮಾಡಿ ಇದೀಗ ಜೈಲುಪಾಲಾಗಿದ್ದರೆ, ಲಿವಿಂಗ್ ಟುಗೆದರ್​​ನಲ್ಲಿ ಮಹಿಳೆ ಅರಾಮ್ ಆಗಿ ಮನೆಯಲ್ಲಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದತ್ತಾತ್ರೇಯ ಪಾಟೀಲ, ಕಲಬುರಗಿ
ದತ್ತಾತ್ರೇಯ ಪಾಟೀಲ, ಕಲಬುರಗಿ

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?