AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದು ಕೊಲೆ: ಕಲಬುರಗಿ ಮೂಲದ ಮಹಿಳೆ ಮಹಾರಾಷ್ಟ್ರದಲ್ಲಿ ಸಾವು

ಇಷ್ಟು ಮುಂದುವರೆದ ಯುಗದಲ್ಲಿಯೂ ಮೂಢನಂಬಿಕೆ, ಆಚರಣೆಗಳಿಗೆ ಕಲಬುರಗಿಯ ಮಹಿಳೆಯೊಬ್ಬರು ಬಲಿಯಾಗಿರುವುದು ಮಹಾರಾಷ್ಟ್ರದಲ್ಲಿ ನಡೆದಿದೆ. ದೆವ್ವ ಹಿಡಿದಿದೆ ಎಂಬ ಅಸಂಬದ್ಧ ನಂಬಿಕೆಯಿಂದ ಮುಕ್ತಬಾಯಿ ಎಂಬುವರನ್ನು ಬೇವಿನ ಕಟ್ಟಿಗೆಯಿಂದ ಹೊಡೆದು ಸೋಲಾಪುರದಲ್ಲಿ ಕೊಲೆ ಮಾಡಲಾಗಿದೆ. ಈ ಘಟನೆ ಮೂಢನಂಬಿಕೆಗಳ ವಿರುದ್ಧ ಸಮಾಜ ಎಚ್ಚೆತ್ತುಕೊಳ್ಳಬೇಕೆಂಬ ಗಂಭೀರ ಎಚ್ಚರಿಕೆಯಾಗಿದೆ. ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದು ಕೊಲೆ: ಕಲಬುರಗಿ ಮೂಲದ ಮಹಿಳೆ ಮಹಾರಾಷ್ಟ್ರದಲ್ಲಿ ಸಾವು
ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದ ಪಾಪಿಗಳು!
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Dec 27, 2025 | 2:50 PM

Share

ಕಲಬುರಗಿ, ಡಿಸೆಂಬರ್ 27: ತಂತ್ರಜ್ಞಾನ ಯುಗದಲ್ಲಿಯೂ ಮೂಢನಂಬಿಕೆಗಳ ಅಂಧಕಾರ ಇನ್ನೂ ಜೀವಂತವಾಗಿರುವುದಕ್ಕೆ ಕಲಬುರಗಿಯ (Kalaburagi) ಮಹಿಳೆಯೊಬ್ಬರ ದಾರುಣ ಸಾವು ಸಾಕ್ಷಿಯಾಗಿದೆ. ದೆವ್ವ ಹಿಡಿದಿದೆ ಎಂಬ ಅಸಂಬದ್ಧ ನಂಬಿಕೆಯ ಹೆಸರಿನಲ್ಲಿ ಮಹಿಳೆಯನ್ನು ಬೇವಿನ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮುರುಮ್ ಗ್ರಾಮದಲ್ಲಿ ನಡೆದಿದೆ.

ಬೇವಿನ ಕಟ್ಟಿಗೆಯಿಂದ ಹಲ್ಲೆ

ಕೊಲೆಯಾದ ಮಹಿಳೆಯನ್ನು ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ವೆಂಕಟೇಶ್ವರ ನಗರ ನಿವಾಸಿ ಮುಕ್ತಬಾಯಿ ಎಂದು ಗುರುತಿಸಲಾಗಿದೆ. ಸುಮಾರು ಆರು ವರ್ಷಗಳ ಹಿಂದೆ ಮುಕ್ತಬಾಯಿಗೆ ಮುರುಮ್ ಗ್ರಾಮದ ಗಿಡ್ಡೆಪ್ಪ ಎಂಬುವನೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಐದು ವರ್ಷದ ಗಂಡು ಮಗನೂ ಇದ್ದನು. ಇತ್ತೀಚಿನ ದಿನಗಳಲ್ಲಿ ಮುಕ್ತಬಾಯಿಗೆ ದೆವ್ವ ಹಿಡಿದಿದೆ ಎಂದು ಆರೋಪಿಸಿದ ಗಂಡನ ಮನೆಯವರು, ಆಕೆಯ ಮೇಲೆ ಪದೇಪದೇ ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ.

ಹೆಚ್ಚಿನ ಮಾಹಿತಿಗೆ ವೀಡಿಯೋ ನೋಡಿ

ಐದು ವರ್ಷದ ಮಗನ ಎದುರಲ್ಲೇ ಥಳಿತ

ಈ ಬಗ್ಗೆ ಮಾತನಾಡಿದ ಮೃತಳ ತಾಯಿ ತಿಪ್ಪವ್ವ, ಮಗಳಿಗೆ ಯಾವುದೇ ದೆವ್ವ ಹಿಡಿದಿಲ್ಲ. ಅವಳನ್ನು ಹಿಂಸಿಸಬೇಡಿ ಎಂದು ಮನವಿ ಮಾಡಿದರೂ ಆಕೆಯ ಮಾತು ಕೇಳಲಿಲ್ಲ. ನಿನ್ನೆ ಗಂಡ ಮನೆಯಲ್ಲಿ ಇಲ್ಲದ ವೇಳೆ, ಐದು ವರ್ಷದ ಮಗನ ಎದುರಲ್ಲೇ ಮುಕ್ತಬಾಯಿಯ ಮೇಲೆ ಭೀಕರವಾಗಿ ಹಲ್ಲೆ ಮಾಡಲಾಗಿದೆ ಎಂದಿದ್ದಾರೆ. ಹಲ್ಲೆಗೊಳಗಾದ ಮಹಿಳೆಯನ್ನು ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಪೂಜೆ, ನದಿ ಸ್ನಾನ ಮಾಡಿಸಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಚಿಕಿತ್ಸೆ ಫಲಿಸದೇ ಮುಕ್ತಬಾಯಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ ಶಕ್ತಿ ಯೋಜನೆಯೇ ಬಂಡವಾಳ, ಮಹಿಳೆಯರೇ ಟಾರ್ಗೆಟ್​​: ಕಳ್ಳಿಯರ ಗ್ಯಾಂಗ್​​ ಭೇದಿಸಿದ ಖಾಕಿ

ಮೃತಳ ಸಹೋದರಿ ಶ್ರೀದೇವಿ, ಇದು ಮೂಢನಂಬಿಕೆಯ ಹೆಸರಿನ ನೇರ ಕೊಲೆ ಎಂದು ಆರೋಪಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆಳಂದ ಪೊಲೀಸ್ ಠಾಣೆಯಲ್ಲಿ ಝೀರೋ ಎಫ್‌ಐಆರ್ ದಾಖಲಿಸಿ, ತನಿಖೆಯನ್ನು ಮಹಾರಾಷ್ಟ್ರದ ಮುರುಮ್ ಠಾಣೆ ಪೊಲೀಸರಿಗೆ ವರ್ಗಾಯಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು