AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯ ದತ್ತಾತ್ರೇಯ ಸನ್ನಿಧಿಯಲ್ಲಿ ಗುರು ಪೂರ್ಣಿಮೆಯಂದು ನೂಕು ನುಗ್ಗಲು: ಕುಸಿದು ಬಿದ್ದು ಮಹಿಳೆ ಸಾವು

ಕಲಬುರಗಿ ಜಿಲ್ಲೆಯ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ಗುರುವಾರ (ಜುಲೈ 10) ಗುರುಪೂರ್ಣಿಮೆ ದಿನ ಜನಸಾಗರವೇ ನೆರೆದಿತ್ತು. ದರ್ಶನಕ್ಕಾಗಿ ನೂಕುನುಗ್ಗಲು ಉಂಟಾಗಿದ್ದು, ಈ ವೇಳೆ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಮೊದಲಿಗೆ ಕಾಲ್ತುಳಿತದಿಂದಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಬಳಿಕ ಕುಸಿದು ಬಿದ್ದು ಮೃತಪಟ್ಟಿರುವುದಾಗಿ ಎಸ್​ಪಿ ಸ್ಪಷ್ಟನೆ ನೀಡಿದ್ದಾರೆ.

ಕಲಬುರಗಿಯ ದತ್ತಾತ್ರೇಯ ಸನ್ನಿಧಿಯಲ್ಲಿ ಗುರು ಪೂರ್ಣಿಮೆಯಂದು ನೂಕು ನುಗ್ಗಲು: ಕುಸಿದು ಬಿದ್ದು ಮಹಿಳೆ ಸಾವು
ಮೃತ ಮಹಿಳೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Jul 11, 2025 | 8:07 AM

Share

ಕಲಬುರಗಿ, ಜುಲೈ 11: ಅವರೆಲ್ಲಾ ದೇವರ ದರ್ಶನಕ್ಕೆ ಬಂದಿದ್ದರು. ಗುರುಪೂರ್ಣಿಮೆ (Guru Purnima) ದಿನ ದತ್ತಾತ್ರೇಯನ ದರ್ಶನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗೆ ದರ್ಶನಕ್ಕೆ ಕಾಯುತ್ತಿರುವಾಗಲೇ ಘೋರ ಘಟನೆಯೊಂದು ನಡೆದಿದೆ. ನೂಕು ನುಗ್ಗಲು (Rush) ಸಂಭವಿಸಿ ಓರ್ವ ಮಹಿಳೆ ಸನ್ನಿಧಿಯಲ್ಲೇ ಸಾವಿನ ಮನೆ ಸೇರಿದ್ದಾರೆ. ಕಲಾವತಿ ಮೃತ ಮಹಿಳೆ. ಮೊದಲಿಗೆ ಕಾಲ್ತುಳಿತದಿಂದ ಮೃತಪಟ್ಟಿದ್ದಾರೆ ಅಂತಾ ಹೇಳಲಾಗಿತ್ತು. ಆದರೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಎಸ್‌ಪಿ ಅಡ್ಡೂರು ಶ್ರೀನಿವಾಸಲು ಸ್ಪಷ್ಟನೆ ನೀಡಿದ್ದಾರೆ.

ಸಾವಿರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತರು

ಗುರುವಾರದಂದು ಎಲ್ಲೆಡೆ ಗುರುಪೂರ್ಣಿಮೆ ಸಂಭ್ರಮ. ಗುರುವನ್ನ ಆರಾಧಿಸುವ ದಿನ. ಹಾಗಾಗಿ ಕಲಬುರಗಿ ಜಿಲ್ಲೆಯ ಗಾಣಗಾಪುರದ ದತ್ತಾತ್ರೇಯ ದೇಗುಲಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ರಾಜ್ಯ ಮಾತ್ರವಲ್ಲದೆ ನೆರೆಯ ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಿಂದಲೂ ಭಕ್ತರು ಆಗಮಿಸಿದ್ದರು. ಜನ ಹೆಚ್ಚಾಗುತ್ತಿದ್ದಂತೆ ಸಂಜೆಯ ದರ್ಶನಕ್ಕೆ ನೂಕುನುಗ್ಗಲು ಉಂಟಾಗಿದೆ.

ಎಸ್‌ಪಿ ಅಡ್ಡೂರು ಶ್ರೀನಿವಾಸಲು ಹೇಳಿದ್ದಿಷ್ಟು

ಈ ನೂಕುನುಗ್ಗಲು ನಡುವೆ ಸಂಜೆ 5.30 ವೇಳೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೋಕುಲ ಗ್ರಾಮದ ಕಲಾವತಿ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಅವರನ್ನು ರವಾನಿಸಲಾಗಿದೆ. ಆದರೆ ಕಲಾವತಿ ಅವರು ಬದುಕುಳಿಯಲೇ ಇಲ್ಲ. ಇನ್ನು ಕಾಲ್ತುಳಿತದಿಂದಾಗಿ ಮಹಿಳೆ ಮೃತಪಟ್ಟಿದ್ದಾರೆ ಅಂತಾ ಹೇಳಲಾಗಿತ್ತು. ಆದರೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಅಂತಾ ಎಸ್‌ಪಿ ಅಡ್ಡೂರು ಶ್ರೀನಿವಾಸಲು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರು ಕಾಲ್ತುಳಿತ ಪ್ರಕರಣ: ಹೈಕೋರ್ಟ್ ಮಹತ್ವದ ಸೂಚನೆ
Image
ಬೆಂಗಳೂರು ಕಾಲ್ತುಳಿತ: ಅಮೈಕಸ್ ಕ್ಯೂರಿ ನೇಮಿಸಿದ ಕೋರ್ಟ್, ಹೀಗಂದ್ರೇನು?
Image
ತನಿಖೆಗಿಳಿದ ಸಿಐಡಿ: ಸ್ಟೇಡಿಯಂಗೆ ಭೇಟಿ, ಇಂಚಿಂಚೂ ಮಾಹಿತಿ ಸಂಗ್ರಹ
Image
ಬೆಂಗಳೂರು ಕಾಲ್ತುಳಿತ ದುರಂತದ ವರದಿ ನೀಡುವಂತೆ ಕುನ್ಹಾ ಆಯೋಗಕ್ಕೆ ಸೂಚನೆ

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ಪ್ರಕರಣ: ಹೈಕೋರ್ಟ್ ಮಹತ್ವದ ಸೂಚನೆ, ಪದಾಧಿಕಾರಿಗಳಿಗೆ ಮಧ್ಯಂತರ ರಕ್ಷಣೆ

ಈ ನೂಕು ನುಗ್ಗಲು ವೇಳೆ ಹಲವರು ಸಂಕಷ್ಟ ಅನುಭವಿಸಿದ್ದಾರೆ. ಸದ್ಯ ಮಹಿಳೆ ಸಾವು ಸಂಬಂಧ ಗಾಣಗಾಪುರ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಳಿಕವೇ ಇದು ಕಾಲ್ತುಳಿತದಿಂದ ಉಂಟಾದ ಸಾವಾ ಅಥವಾ ಕುಸಿದು ಬಿದ್ದು ಮೃತಪಟ್ಟಿರುವುದಾ ಎಂಬುದು ಗೊತ್ತಾಗಲಿದೆ.

ಆರ್​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ: 11 ಜನರು ಸಾವು

ಇನ್ನು 18 ವರ್ಷಗಳ ಬಳಿಕ ಐಪಿಎಲ್​ನಲ್ಲಿ ಆರ್​ಸಿಬಿ ಕಪ್ ಗೆದ್ದ ಹಿನ್ನೆಲೆಯಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ವಿಜಯೋತ್ಸವ ಆಚರಣೆ ಕೈಗೊಳ್ಳಲಾಗಿತ್ತು. ಈ ವಿಜಯೋತ್ಸವಕ್ಕೆ ಲಕ್ಷಾಂತರ ಜನರು ಆಗಮಿಸಿದ್ದರು. ಈ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದರು. 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆ ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:00 am, Fri, 11 July 25

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ