ಕಲಬುರಗಿಯ ದತ್ತಾತ್ರೇಯ ಸನ್ನಿಧಿಯಲ್ಲಿ ಗುರು ಪೂರ್ಣಿಮೆಯಂದು ನೂಕು ನುಗ್ಗಲು: ಕುಸಿದು ಬಿದ್ದು ಮಹಿಳೆ ಸಾವು

ಕಲಬುರಗಿ ಜಿಲ್ಲೆಯ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ಗುರುವಾರ (ಜುಲೈ 10) ಗುರುಪೂರ್ಣಿಮೆ ದಿನ ಜನಸಾಗರವೇ ನೆರೆದಿತ್ತು. ದರ್ಶನಕ್ಕಾಗಿ ನೂಕುನುಗ್ಗಲು ಉಂಟಾಗಿದ್ದು, ಈ ವೇಳೆ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಮೊದಲಿಗೆ ಕಾಲ್ತುಳಿತದಿಂದಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಬಳಿಕ ಕುಸಿದು ಬಿದ್ದು ಮೃತಪಟ್ಟಿರುವುದಾಗಿ ಎಸ್​ಪಿ ಸ್ಪಷ್ಟನೆ ನೀಡಿದ್ದಾರೆ.

ಕಲಬುರಗಿಯ ದತ್ತಾತ್ರೇಯ ಸನ್ನಿಧಿಯಲ್ಲಿ ಗುರು ಪೂರ್ಣಿಮೆಯಂದು ನೂಕು ನುಗ್ಗಲು: ಕುಸಿದು ಬಿದ್ದು ಮಹಿಳೆ ಸಾವು
ಮೃತ ಮಹಿಳೆ
Edited By:

Updated on: Jul 11, 2025 | 8:07 AM

ಕಲಬುರಗಿ, ಜುಲೈ 11: ಅವರೆಲ್ಲಾ ದೇವರ ದರ್ಶನಕ್ಕೆ ಬಂದಿದ್ದರು. ಗುರುಪೂರ್ಣಿಮೆ (Guru Purnima) ದಿನ ದತ್ತಾತ್ರೇಯನ ದರ್ಶನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗೆ ದರ್ಶನಕ್ಕೆ ಕಾಯುತ್ತಿರುವಾಗಲೇ ಘೋರ ಘಟನೆಯೊಂದು ನಡೆದಿದೆ. ನೂಕು ನುಗ್ಗಲು (Rush) ಸಂಭವಿಸಿ ಓರ್ವ ಮಹಿಳೆ ಸನ್ನಿಧಿಯಲ್ಲೇ ಸಾವಿನ ಮನೆ ಸೇರಿದ್ದಾರೆ. ಕಲಾವತಿ ಮೃತ ಮಹಿಳೆ. ಮೊದಲಿಗೆ ಕಾಲ್ತುಳಿತದಿಂದ ಮೃತಪಟ್ಟಿದ್ದಾರೆ ಅಂತಾ ಹೇಳಲಾಗಿತ್ತು. ಆದರೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಎಸ್‌ಪಿ ಅಡ್ಡೂರು ಶ್ರೀನಿವಾಸಲು ಸ್ಪಷ್ಟನೆ ನೀಡಿದ್ದಾರೆ.

ಸಾವಿರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತರು

ಗುರುವಾರದಂದು ಎಲ್ಲೆಡೆ ಗುರುಪೂರ್ಣಿಮೆ ಸಂಭ್ರಮ. ಗುರುವನ್ನ ಆರಾಧಿಸುವ ದಿನ. ಹಾಗಾಗಿ ಕಲಬುರಗಿ ಜಿಲ್ಲೆಯ ಗಾಣಗಾಪುರದ ದತ್ತಾತ್ರೇಯ ದೇಗುಲಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ರಾಜ್ಯ ಮಾತ್ರವಲ್ಲದೆ ನೆರೆಯ ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಿಂದಲೂ ಭಕ್ತರು ಆಗಮಿಸಿದ್ದರು. ಜನ ಹೆಚ್ಚಾಗುತ್ತಿದ್ದಂತೆ ಸಂಜೆಯ ದರ್ಶನಕ್ಕೆ ನೂಕುನುಗ್ಗಲು ಉಂಟಾಗಿದೆ.

ಎಸ್‌ಪಿ ಅಡ್ಡೂರು ಶ್ರೀನಿವಾಸಲು ಹೇಳಿದ್ದಿಷ್ಟು

ಈ ನೂಕುನುಗ್ಗಲು ನಡುವೆ ಸಂಜೆ 5.30 ವೇಳೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೋಕುಲ ಗ್ರಾಮದ ಕಲಾವತಿ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಅವರನ್ನು ರವಾನಿಸಲಾಗಿದೆ. ಆದರೆ ಕಲಾವತಿ ಅವರು ಬದುಕುಳಿಯಲೇ ಇಲ್ಲ. ಇನ್ನು ಕಾಲ್ತುಳಿತದಿಂದಾಗಿ ಮಹಿಳೆ ಮೃತಪಟ್ಟಿದ್ದಾರೆ ಅಂತಾ ಹೇಳಲಾಗಿತ್ತು. ಆದರೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಅಂತಾ ಎಸ್‌ಪಿ ಅಡ್ಡೂರು ಶ್ರೀನಿವಾಸಲು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ
ಬೆಂಗಳೂರು ಕಾಲ್ತುಳಿತ ಪ್ರಕರಣ: ಹೈಕೋರ್ಟ್ ಮಹತ್ವದ ಸೂಚನೆ
ಬೆಂಗಳೂರು ಕಾಲ್ತುಳಿತ: ಅಮೈಕಸ್ ಕ್ಯೂರಿ ನೇಮಿಸಿದ ಕೋರ್ಟ್, ಹೀಗಂದ್ರೇನು?
ತನಿಖೆಗಿಳಿದ ಸಿಐಡಿ: ಸ್ಟೇಡಿಯಂಗೆ ಭೇಟಿ, ಇಂಚಿಂಚೂ ಮಾಹಿತಿ ಸಂಗ್ರಹ
ಬೆಂಗಳೂರು ಕಾಲ್ತುಳಿತ ದುರಂತದ ವರದಿ ನೀಡುವಂತೆ ಕುನ್ಹಾ ಆಯೋಗಕ್ಕೆ ಸೂಚನೆ

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ಪ್ರಕರಣ: ಹೈಕೋರ್ಟ್ ಮಹತ್ವದ ಸೂಚನೆ, ಪದಾಧಿಕಾರಿಗಳಿಗೆ ಮಧ್ಯಂತರ ರಕ್ಷಣೆ

ಈ ನೂಕು ನುಗ್ಗಲು ವೇಳೆ ಹಲವರು ಸಂಕಷ್ಟ ಅನುಭವಿಸಿದ್ದಾರೆ. ಸದ್ಯ ಮಹಿಳೆ ಸಾವು ಸಂಬಂಧ ಗಾಣಗಾಪುರ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಳಿಕವೇ ಇದು ಕಾಲ್ತುಳಿತದಿಂದ ಉಂಟಾದ ಸಾವಾ ಅಥವಾ ಕುಸಿದು ಬಿದ್ದು ಮೃತಪಟ್ಟಿರುವುದಾ ಎಂಬುದು ಗೊತ್ತಾಗಲಿದೆ.

ಆರ್​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ: 11 ಜನರು ಸಾವು

ಇನ್ನು 18 ವರ್ಷಗಳ ಬಳಿಕ ಐಪಿಎಲ್​ನಲ್ಲಿ ಆರ್​ಸಿಬಿ ಕಪ್ ಗೆದ್ದ ಹಿನ್ನೆಲೆಯಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ವಿಜಯೋತ್ಸವ ಆಚರಣೆ ಕೈಗೊಳ್ಳಲಾಗಿತ್ತು. ಈ ವಿಜಯೋತ್ಸವಕ್ಕೆ ಲಕ್ಷಾಂತರ ಜನರು ಆಗಮಿಸಿದ್ದರು. ಈ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದರು. 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆ ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:00 am, Fri, 11 July 25

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us