AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಕಲಬುರಗಿ ರೈಲ್ವೇ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಕ್ಕೆ ಬಿದ್ದ ಮಹಿಳೆ

ಚಲಿಸುತ್ತಿದ್ದ ರೈಲಿಗೆ ಹತ್ತಲು ಮುಂದಾದ ಯುವತಿಯನ್ನು ತಡೆಯುತ್ತಿದ್ದಾಗಲೇ ಮಹಿಳೆಯೊಬ್ಬರು ರೈಲು ಹತ್ತಲು ಹೋಗಿ ಕೆಳಗೆ ಬಿದ್ದ ಘಟನೆಯೊಂದು ಕಲಬುರಗಿಯಲ್ಲಿ ನಡೆದಿದೆ.

Kalaburagi News: ಕಲಬುರಗಿ ರೈಲ್ವೇ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಕ್ಕೆ ಬಿದ್ದ ಮಹಿಳೆ
ಕಲಬುರಗಿ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದ ಮಹಿಳೆ
TV9 Web
| Edited By: Rakesh Nayak Manchi|

Updated on:Jan 02, 2023 | 11:02 AM

Share

ಕಲಬುರಗಿ: ಚಲಿಸುತ್ತಿದ್ದ ರೈಲಿಗೆ ಹತ್ತಲು ಮುಂದಾದ ಯುವತಿಯನ್ನು ತಡೆಯುತ್ತಿದ್ದಾಗಲೇ ಮಹಿಳೆಯೊಬ್ಬರು ರೈಲು ಹತ್ತಲು ಹೋಗಿ ಕೆಳಗೆ ಬಿದ್ದ (Women Falls Down From Train) ಘಟನೆಯೊಂದು ಕಲಬುರಗಿಯಲ್ಲಿ ನಡೆದಿದೆ. ಚಲಿಸುತ್ತಿದ್ದ ರೈಲು ಹತ್ತಲು ಹೋದ ಮಹಿಳೆಯೊಬ್ಬರು ಕಾಲು ಜಾರಿ ಕೆಳಗೆ ಬಿದ್ದಿದ್ದು, ಹಳಿಗೆ ಬೀಳುವುದರಲ್ಲಿ ಕೂದಲೆಳೆಯಲ್ಲಿ ಬಚಾವ್ ಆಗಿದ್ದಾರೆ. ಈ ಘಟನೆ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಸಂಜೆ 6.30ಕ್ಕೆ ನಡೆದಿದೆ. ಇದರ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿಡಿಯೋದಲ್ಲಿ ಕಾಣುವಂತೆ, ಯುವತಿಯೊಬ್ಬಳು ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸುತ್ತಿದ್ದಳು. ಈ ವೇಳೆ ಸಾಧ್ಯವಾಗದಿದ್ದಾಗ ಭದ್ರತಾ ಸಿಬ್ಬಂದಿ ಆಕೆಯನ್ನು ರೈಲಿಗೆ ಹತ್ತುವುದನ್ನು ತಡೆದು ಪಕ್ಕಕ್ಕೆ ಕೊಂಡೊಯ್ದರು. ಇದೇ ಹೊತ್ತಿಗೆ ಹಿಂಬದಿಯಲ್ಲಿ ಸುಮಾರು 50 ವರ್ಷದ ಮಹಿಳೆಯೊಬ್ಬರು ಅದೇ ರೈಲಿಗೆ ಹತ್ತಲು ಮುಂದಾಗಿ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರು ಮಹಿಳೆ ಹಳಿಗೆ ಬೀಳದಂತೆ ಎಳೆದು ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ: Rajasthan Train: ರಾಜಸ್ಥಾನದ ಪಾಲಿ ಬಳಿ ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ ರೈಲು

ಸಿನಿಮೀಯ ಶೈಲಿಯಲ್ಲಿ ಆರ್‌ಪಿಎಫ್ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರು ಮಹಿಳೆಯನ್ನು ರಕ್ಷಣೆ ಮಾಡುವ ಸಾಹಸದ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರ್‌ಪಿಎಫ್ ಪೇದೆ ಆರ್‌.ಡಿ ಶೇರಖಾನೆ ಮಹಿಳೆಯನ್ನು ರಕ್ಷಣೆ ಮಾಡಿದ ಸಿಬ್ಬಂದಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:23 am, Mon, 2 January 23

Follow Us
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!