AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಗಂಡ ಬದುಕಿದ್ದಾಗಲೇ ವಿಧವಾ ವೇತನ ಪಡೆದ ಮಹಿಳೆ! ಸ್ವತಃ ಪತಿಯಿಂದಲೇ ದೂರು

1980 ರುಕ್ಮಣ್ಣ ಮತ್ತು ಶಕುಂತಲಾ ಅವರ ಮದುವೆಯಾಗಿದ್ದು ಮೂವರು ಪುತ್ರರಿದ್ದಾರೆ. ಶಕುಂತಲಾ ಅವರು 1991ರಲ್ಲಿ ಪತಿಯನ್ನು ರಂಜೋಳ ಗ್ರಾಮದ ತವರು ಮನೆಗೆ ಹೋದರು. ಅದಾದಮೇಲೆ ರುಕ್ಮಣ್ಣ ತನ್ನ ಪತ್ನಿಯ ಜೊತೆ ಯಾವುದೇ ಸಂಪರ್ಕ ಇರಿಸಿಕೊಂಡಿರಲಿಲ್ಲವಂತೆ

Kalaburagi News: ಗಂಡ ಬದುಕಿದ್ದಾಗಲೇ ವಿಧವಾ ವೇತನ ಪಡೆದ ಮಹಿಳೆ! ಸ್ವತಃ ಪತಿಯಿಂದಲೇ ದೂರು
ಗಂಡ ಬದುಕಿದ್ದಾಗಲೇ ವಿಧವಾ ವೇತನ ಪಡೆದ ಮಹಿಳೆ!
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಸಾಧು ಶ್ರೀನಾಥ್​|

Updated on:Feb 29, 2024 | 2:41 PM

Share

ಕಲಬುರಗಿ, ಫೆಬ್ರವರಿ 29: ಜೀವಂತ ಇರುವ ಪತಿ ಮೃತಪಟ್ಟಿರುವುದಾಗಿ ಸುಳ್ಳು ಮರಣ ಪ್ರಮಾಣ ಪತ್ರ ಸಲ್ಲಿಸಿ 2019ರ ಜುಲೈನಿಂದ 2022ರ ಜನವರಿ ವರೆಗೆ ಪಿಂಚಣಿ (widow pension) ಪಡೆದಿದ್ದಾಳೆ ಎಂದು ಆರೋಪಿಸಿ ಪತ್ನಿಯ ವಿರುದ್ಧ ಸ್ವತಃ ಪತಿಯೇ (husband) ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ (Kalaburagi) ದೂರು ದಾಖಲಿಸಿದ್ದಾರೆ. ನಂದಿ ಕಾಲೊನಿಯ ನಿವಾಸಿ, ನಿವೃತ್ತ ನೌಕರ ರುಕ್ಮಣ್ಣ ಮಡಿವಾಳ ಅವರು ತಮ್ಮ ಪತ್ನಿ ಬೀದರ್ ಜಿಲ್ಲೆಯ ಖೇಣಿ ರಂಜೋಳ ಗ್ರಾಮದಲ್ಲಿದ್ದ ಶಕುಂತಲಾ ವಿರುದ್ಧ ಈ ದೂರು ನೀಡಿದ್ದಾರೆ.

1980 ರುಕ್ಮಣ್ಣ ಮತ್ತು ಶಕುಂತಲಾ ಅವರ ಮದುವೆಯಾಗಿದ್ದು ಮೂವರು ಪುತ್ರರಿದ್ದಾರೆ. ಶಕುಂತಲಾ ಅವರು 1991ರಲ್ಲಿ ಪತಿಯನ್ನು ರಂಜೋಳ ಗ್ರಾಮದ ತವರು ಮನೆಗೆ ಹೋದರು. ಅದಾದಮೇಲೆ ರುಕ್ಮಣ್ಣ ತನ್ನ ಪತ್ನಿಯ ಜೊತೆ ಯಾವುದೇ ಸಂಪರ್ಕ ಇರಿಸಿಕೊಂಡಿರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Also Read: ಶಿವಮೊಗ್ಗಕ್ಕೆ ಎಂಟ್ರಿ ಕೊಟ್ಟ ಜಾಂಬವಂತ! ಬೆಚ್ಚಿಬಿದ್ದ ಜನ, ಓರ್ವನ ಮೇಲೆ ದಾಳಿ, ಕೊನೆಗೂ ಬಲೆಗೆ ಬಿದ್ದ ಕಿಲಾಡಿ ಕರಡಿ

ಆದರೆ 2022ರಲ್ಲಿ ಜೀವನಾಂಶ ಭತ್ಯೆ ನೀಡುವಂತೆ ಶಕುಂತಲಾ ಅವರು ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ವಿಚಾರಣೆಗೆ ಹಾಜರಾದಾಗ ಪತಿ ಮೃತಪಟ್ಟಿದ್ದಾರೆ ಎಂದು ಬೀದರ್ ತಾಲ್ಲೂಕು ದಂಡಾಧಿಕಾರಿಗಳ ಕಚೇರಿಯಿಂದ ಸುಳ್ಳು ಮರಣ ಪ್ರಮಾಣ ಪತ್ರ ಪಡೆದಿದ್ದರು. 2019ರಿಂದ 2022ರವರೆಗೆ ವಿಧವಾ ವೇತನ ಪಡೆದಿದ್ದು, 2022ರಲ್ಲಿ ಅದನ್ನು ವಯೋವೃದ್ಧರ ಪಿಂಚಣಿ ಎಂದು ಬದಲಾಯಿಸಿಕೊಂಡಿದ್ದಾಳೆ ಎಂದು ಆರೋಪಿಸಿ ರುಕ್ಮಣ್ಣ ಅವರು ಜೆಂಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:39 pm, Thu, 29 February 24

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?