AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಮಗಳದ್ದು ಆತ್ಮಹತ್ಯೆಯಲ್ಲ, ಕೊಲೆ ಅಂತಿರೋ ಕುಟುಂಬ

ಆ ಮಹಿಳೆಗೆ ಮದುವೆಯಾಗಿ ಕೇವಲ ಮುೂರು ವರ್ಷವಾಗಿತ್ತು. ಹೆತ್ತವರು ಮಗಳು ಚೆನ್ನಾಗಿರಲಿ ಅಂತ ಸಾಲ ಮಾಡಿ ಮಗಳ ಮದುವೆಯನ್ನು ಮಾಡಿದ್ದರು. ಆದ್ರೆ, ಬಾಳಿ ಬದುಕಬೇಕಿದ್ದ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಹೆತ್ತವರು ವರದಕ್ಷಿಣೆ ಕಿರುಕುಳಕ್ಕೆ ಮಗಳು ಬಲಿಯಾಗಿದ್ದಾಳೆ ಎಂದು ಆರೋಪಿಸಿದ್ದಾರೆ.

ಕಲಬುರಗಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಮಗಳದ್ದು ಆತ್ಮಹತ್ಯೆಯಲ್ಲ, ಕೊಲೆ ಅಂತಿರೋ ಕುಟುಂಬ
ಮೃತ ಮಹಿಳೆ ಕುಟುಂಬದವರ ಗೋಳಾಟ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 12, 2023 | 10:37 PM

ಕಲಬುರಗಿ, ಸೆ.12: ತಾಲೂಕಿನ ಸೀತನೂರು ಗ್ರಾಮದಲ್ಲಿ ಇಂದು(ಸೆ.12) ಮುಂಜಾನೆ ಇಪ್ಪತ್ತಾರು ವರ್ಷದ ಶಾಹೀದಾ ಬೇಗಂ ಎನ್ನುವ ಮಹಿಳೆ ಶವ ಪತ್ತೆಯಾಗಿದ್ದು, ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ. ಕುಟುಂಬದವರು ತಮ್ಮ ಮಗಳದ್ದು ಸಹಜ ಸಾವಲ್ಲ, ಬದಲಾಗಿ ಕೊಲೆ ಎಂದು ಆರೋಪಿಸುತ್ತಿದ್ದಾರೆ. ಇನ್ನು ಜೇವರ್ಗಿ (Jevargi) ತಾಲೂಕಿನ ಗಂವ್ಹಾರ್ ಗ್ರಾಮದ ನಿವಾಸಿಯಾಗಿದ್ದ ಶಾಹೀದಾ ಬೇಗಂ ಅವರು ಕಲಬುರಗಿ (Kalaburagi) ತಾಲೂಕಿನ ಸೀತನೂರು ಗ್ರಾಮದ ಖಾಜಾ ಹುಸೇನ್ ಜೊತೆ ಮೂರು ವರ್ಷದ ಹಿಂದೆ ಮದುವೆ ಮಾಡಲಾಗಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ ಶಾಹೀದಾ ಬೇಗಂ ಹೆತ್ತವರು, ತಮ್ಮ ಬಳಿಯಿದ್ದ ಅಲ್ಪಸ್ವಲ್ಪ ಜಾಗವನ್ನು ಮಾರಿ, ಮಗಳ ಮದುವೆ ಮಾಡಿದ್ದರು.

ಮದುವೆ ಸಮಯದಲ್ಲಿ ನಲವತ್ತು ಗ್ರಾಂ ಬಂಗಾರ, ಐವತ್ತು ಸಾವಿರ ವರದಕ್ಷಿಣೆ ನೀಡಿ ಮದುವೆ ಮಾಡಿಕೊಟ್ಟಿದ್ದರು. ಮಗಳು ಚೆನ್ನಾಗಿರಲಿ ಅಂತ ಹೆತ್ತವರು ಕನಸು ಕಂಡಿದ್ದರು. ಆದ್ರೆ, ಮದುವೆಯಾದ ಮೇಲೆ ಮಗಳ ಬದಕು ಹೂವಿನ ಹಾಸಿಗೆ ಆಗಿರದೆ, ಮುಳ್ಳಿನ ದಾರಿಯಂತಾಗಿತ್ತಂತೆ. ಕೃಷಿ ಕೆಲಸ ಮಾಡಿಕೊಂಡದಿದ್ದ ಪತಿ ಖಾಜಾ ಹುಸೇನ್, ಪ್ರತಿನಿತ್ಯ ಕುಡಿದು ಬಂದು ಶಾಹೀದಾ ಬೇಗಂ ಗೆ ಕಿರುಕುಳ ನೀಡುವುದು, ಹೊಡೆಯುವುದನ್ನು ಮಾಡುತ್ತಿದ್ದನಂತೆ.

ಇದನ್ನೂ ಓದಿ:ಚಾಮರಾಜನಗರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು; ಯುವಕ ಸಾವು, ಯುವತಿ ಸ್ಥಿತಿ ಚಿಂತಾಜನಕ

ಹೌದು, ಖಾಜಾ ಹುಸೇನ್, ಪ್ರತಿ ದಿನ ಶಾಹೀದಾ ಬೇಗಂ,ತವರು ಮನೆಗೆ ಹೋಗಿ ಬಂಗಾರ ತರುವಂತೆ ಪ್ರತಿದಿನ ಪೀಡಿಸುತ್ತಿದ್ದನಂತೆ. ಈ ಬಗ್ಗೆ ಅನೇಕ ಬಾರಿ ರಾಜಿ ಪಂಚಾಯತಿಗಳು ಕೂಡ ಆಗಿದ್ದಾವಂತೆ. ಹಣ ಇದ್ದಾಗ ಇನ್ನಷ್ಟು ಬಂಗಾರ ಕೊಡಿಸೋದಾಗಿ ಹೆತ್ತವರು ಕೂಡ ಹೇಳಿದ್ದರಂತೆ. ಆದ್ರೆ, ಖಾಜಾ ಹುಸೇನ್ ಮಾತ್ರ ಕಿರುಕುಳವನ್ನು ನಿಲ್ಲಿಸಿರಲಿಲ್ಲವಂತೆ. ಇನ್ನು ತನ್ನ ಹೆತ್ತವರು ಕೂಲಿ ಕೆಲಸ ಮಾಡಲು ಹೈದ್ರಾಬಾದ್​ಗೆ ಹೋಗಿದ್ದಾರೆ. ಇರುವ ಹಣವನ್ನೆಲ್ಲ ಖರ್ಚು ಮಾಡಿ ತನ್ನ ಮದುವೆ ಮಾಡಿದ್ದಾರೆ. ಮತ್ತೆ ತಾನು ತವರು ಮನೆಗೆ ಹೋಗಿ ಬಂಗಾರ ಕೇಳಿದ್ರೆ, ಹೆತ್ತವರು ಎಲ್ಲಿಂದ ತರ್ತಾರೆ ಎಂದು ತಿಳದಿದ್ದ ಶಾಹೀದಾ ಬೇಗಂ, ತಂದೆ ತಾಯಿಗೆ ತನ್ನ ನೋವನ್ನು ಹೆಚ್ಚಾಗಿ ಹೇಳಿರಲಿಲ್ಲವಂತೆ. ತನ್ನ ಸಹೋದರಿಯರ ಮುಂದೆ ನೋವನ್ನು ಹೇಳಿಕೊಂಡಿದ್ದಳಂತೆ.

ಆದ್ರೆ, ಇಂದು ಮುಂಜಾನೆ ಶಾಗೀದಾ ಬೇಗಂ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿದ್ದಾಳೆ ಎನ್ನುವ ಸುದ್ದಿ ಹೆತ್ತವರಿಗೆ ಪರಿಚಿತರಿಂದ ಗೊತ್ತಾಗಿತ್ತು. ಹೀಗಾಗಿ ಮಗಳ ಸಾವಿನ ಸುದ್ದಿ ಕೇಳಿ ಬಂದ ಹೆತ್ತವರು ಶಾಕ್ ಆಗಿದ್ದರು. ಕೈ ಸೇರಿದಂತೆ ಅನೇಕ ಕಡೆ ಗಾಯಗಳು ಇದ್ದಿದ್ದರಿಂದ, ತಮ್ಮ ಮಗಳನ್ನು ಆಕೆಯ ಪತಿ ಮತ್ತು ಕುಟುಂಬದವರು ಹೊಡೆದು ಕೊಲೆ ಮಾಡಿ, ನಂತರ ನೇಣು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗ: ಮಲೆನಾಡಿನಲ್ಲಿ ಕೈಕೊಟ್ಟ ಮಳೆ; 20 ರೈತರ ಆತ್ಮಹತ್ಯೆ, ಬರ ಪೀಡಿತ ಜಿಲ್ಲೆ ಘೋಷಣೆಗೆ ಬಿಜೆಪಿ ಡಿಮ್ಯಾಂಡ್

ಸದ್ಯ ಶಾಹೀದಾ ಬೇಗಂ ಸಾವಿನ ಬಗ್ಗೆ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ. ಈ ಬಗ್ಗೆ ಶಾಹೀದಾ ಪತಿ ಖಾಜಾ ಹುಸೇನ್​ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶಾಹೀದಾ ಪತಿ ಖಾಜಾ ಹುಸೇನ್, ಶಾಹೀದಾಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳುತ್ತಿದ್ದಾನಂತೆ. ಆದ್ರೆ, ಪೊಲೀಸರ ವಿಚಾರಣೆ ಮತ್ತು ಮರಣೋತ್ತರ ವರದಿ ನಂತರ, ಶಾಹೀದಾ ಬೇಗಂಳದ್ದು ಆತ್ಮಹತ್ಯೆಯಾ ಅಥವಾ ಕೊಲೆಯಾ ಅನ್ನೋದು ಗೊತ್ತಾಗಲಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ