AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯ ಹವಾ ಮಲ್ಲಿನಾಥ ಮುತ್ಯಾಗೆ ನ್ಯಾಯಾಂಗ ಬಂಧನ

ಕಲಬುರಗಿಯ ಹವಾ ಮಲ್ಲಿನಾಥ ಮುತ್ಯಾಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕಲಬುರಗಿ 2 ನೇ ಜಿಲ್ಲಾ ಸತ್ರ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ಜೈ ಭಾರತ್ ಮಾತಾ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ, ಕರ್ನಾಟಕ-ಮಹಾರಾಷ್ಟ್ರದಲ್ಲಿ ಭಾರಿ ಪ್ರಭಾವ ಹೊಂದಿದ್ದಾರೆ. ಅಟ್ರಾಸಿಟಿ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಕುಮ್ಮಕ್ಕು ಆರೋಪ ಹಿನ್ನೆಲೆ ಪ್ರಕರಣ ದಾಖಲಾಗಿತ್ತು.

ಕಲಬುರಗಿಯ ಹವಾ ಮಲ್ಲಿನಾಥ ಮುತ್ಯಾಗೆ ನ್ಯಾಯಾಂಗ ಬಂಧನ
ಹವಾ ಮಲ್ಲಿನಾಥ ಮುತ್ಯಾ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 19, 2024 | 5:40 PM

Share

ಕಲಬುರಗಿ, ಫೆಬ್ರವರಿ 19: ಕಲಬುರಗಿಯ ಹವಾ ಮಲ್ಲಿನಾಥ ಮುತ್ಯಾ (Mallinath Mutya) ಗೆ 14 ದಿನ ನ್ಯಾಯಾಂಗ ಬಂಧನಕ್ಕೆ  ಒಪ್ಪಿಸಿ ಕಲಬುರಗಿ 2 ನೇ ಜಿಲ್ಲಾ ಸತ್ರ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ಹವಾ ಮಲ್ಲಿನಾಥ ಮುತ್ಯಾ ಅವರ ಸಂಬಂಧಿ ಪ್ರಕಾಶ್ ಮೇಲೆ ಅಟ್ರಾಸಿಟಿ ಮತ್ತು ಅತ್ಯಾಚಾರ ಪ್ರಕರಣ, ಹವಾ ಮಲ್ಲಿನಾಥ ಮುತ್ಯಾ ವಿರುದ್ಧವೂ ಕುಮ್ಮಕ್ಕು ಆರೋಪ ಹಿನ್ನೆಲೆ 498/A, 506,109, 34 ಅಡಿ 2018 ರಲ್ಲಿ ಕಲಬುರಗಿಯ ಎಂ ಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳಿಂದ ಹವಾ ಮಲ್ಲಿನಾಥ್ ಮುತ್ಯಾ ನ್ಯಾಯಾಲಯಕ್ಕೆ ಹಾಜರಾಗಿಲ್ಲ.

ನ್ಯಾಯಾಲಯ ಬಾಡಿ ವಾರೆಂಟ್ ಮಾಡಿದ ಕಾರಣ ಇಂದು ನ್ಯಾಯಾಲಯದ ಮುಂದೆ ಹವಾ ಮಲ್ಲಿನಾಥ್ ಮುತ್ಯಾ ಶರಣಾಗಿದ್ದರು. ಹವಾ ಮಲ್ಲಿನಾಥ ಮುತ್ಯಾ ಜೈ ಭಾರತ್ ಮಾತಾ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ, ಕರ್ನಾಟಕ-ಮಹಾರಾಷ್ಟ್ರದಲ್ಲಿ ಭಾರಿ ಪ್ರಭಾವ ಹೊಂದಿದ್ದಾರೆ.

ರಾಮ ಮಂದಿರದ ಮೇಲೆ ಹಸಿರು ಬಾವುಟದ ಚಿತ್ರ: ಮುಸ್ಲಿಂ ಯುವಕ ಜೈಲಿಗೆ 

ಧಾರವಾಡ: ರಾಮ ಮಂದಿರದ ಮೇಲೆ ಹಸಿರು ಬಾವುಟದ ಚಿತ್ರವನ್ನು ಸ್ಟೇಟಸ್ ಇಟ್ಟುಕೊಂಡ ಮುಸ್ಲಿಂ ಯುವಕನನ್ನು ಜೈಲಿಗೆ ಕಳುಹಿಸಲಾಗಿತ್ತು. ಮೂರು ದಿನಗಳ ಹಿಂದೆ ಚಿತ್ರ ಹಾಕಿ ಸ್ಟೇಟಸ್ ಇಟ್ಟ ಯುವಕ ‘ಇಸ್ಲಾಮಿಕ್ ಪವರ್ ತೋರಿಸುತ್ತೇವೆ’ ಎಂದು ಬರೆಯಲಾಗಿತ್ತು. ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸದ್ದಾಂಹುಸೇನ ಇಸ್ಮಾಯಿಲ್ ಸಾಬ್ ನದಾಫ್ ಎನ್ನುವ ಯುವಕನೇ ಈ ಕೃತ್ಯವೆಸಗಿ ಜೈಲು ಪಾಲಾಗಿದ್ದಾರೆ. ಈ ಸ್ಟೇಟಸ್ ಗಮನಕ್ಕೆ ಬರುತ್ತಿದ್ದಂತೆಯೇ ಗರಗ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ಆತನನ್ನು ಬಂಧಿಸಿದ್ದರು.

ಇದನ್ನೂ ಓದಿ: ಅನುಮತಿ ಪಡೆಯದೆ ಕಬ್ಬು ಅರಿದಿರುವ ಆರೋಪ: ಶಾಸಕ ಯತ್ನಾಳ್‌ಗೆ ನೋಟಿಸ್ ಜಾರಿ

ಇದೇ ವೇಳೆ ಯುವಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಶ್ರೀರಾಮ ಸೇನೆ ಕಾರ್ಯಕರ್ತರು, ಯುವಕನ ಮನೆಗೆ ಹೋಗಿ ಅಯೋಧ್ಯೆಗೆ ತಮ್ಮೊಂದಿಗೆ ಬರುವಂತೆ ಆಮಂತ್ರಣ ನೀಡಲು ಮುಂದಾಗಿದ್ದರು.

ಇದನ್ನೂ ಓದಿ: ಸಂಕಷ್ಟದಲ್ಲಿ ಬಸನಗೌಡ ಯತ್ನಾಳ್, ಸಕ್ಕರೆ ಕಾರ್ಖಾನೆಗೆ ನೀಡಿರುವ ನೋಟೀಸ್​ಗೆ 24 ಗಂಟೆಗಳಲ್ಲಿ ಉತ್ತರಿಸಲು ಸೂಚನೆ

ಜ. 30ರಂದು ತಡಕೋಡ ಗ್ರಾಮಕ್ಕೆ ತೆರಳಲು ಶ್ರೀರಾಮ ಸೇನೆ ನಿರ್ಧರಿಸಿರೋ ಕಾರ್ಯಕರ್ತರು, ನಾವೇ ಖರ್ಚು ಕೊಟ್ಟು ಅಯೋಧ್ಯೆಗೆ ಕರೆದುಕೊಂಡು ಹೋಗುತ್ತೇವೆ. ಅಲ್ಲಿಗೆ ಬಂದು ಹಸಿರು ಧ್ವಜ ಹಾರಿಸು ಅನ್ನೋ ಚಾಲೆಂಜ್ ಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:14 pm, Mon, 19 February 24

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ