AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯ ಹವಾ ಮಲ್ಲಿನಾಥ ಮುತ್ಯಾಗೆ ನ್ಯಾಯಾಂಗ ಬಂಧನ

ಕಲಬುರಗಿಯ ಹವಾ ಮಲ್ಲಿನಾಥ ಮುತ್ಯಾಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕಲಬುರಗಿ 2 ನೇ ಜಿಲ್ಲಾ ಸತ್ರ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ಜೈ ಭಾರತ್ ಮಾತಾ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ, ಕರ್ನಾಟಕ-ಮಹಾರಾಷ್ಟ್ರದಲ್ಲಿ ಭಾರಿ ಪ್ರಭಾವ ಹೊಂದಿದ್ದಾರೆ. ಅಟ್ರಾಸಿಟಿ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಕುಮ್ಮಕ್ಕು ಆರೋಪ ಹಿನ್ನೆಲೆ ಪ್ರಕರಣ ದಾಖಲಾಗಿತ್ತು.

ಕಲಬುರಗಿಯ ಹವಾ ಮಲ್ಲಿನಾಥ ಮುತ್ಯಾಗೆ ನ್ಯಾಯಾಂಗ ಬಂಧನ
ಹವಾ ಮಲ್ಲಿನಾಥ ಮುತ್ಯಾ
ದತ್ತಾತ್ರೇಯ ಪಾಟೀಲ್​
| Edited By: |

Updated on:Feb 19, 2024 | 5:40 PM

Share

ಕಲಬುರಗಿ, ಫೆಬ್ರವರಿ 19: ಕಲಬುರಗಿಯ ಹವಾ ಮಲ್ಲಿನಾಥ ಮುತ್ಯಾ (Mallinath Mutya) ಗೆ 14 ದಿನ ನ್ಯಾಯಾಂಗ ಬಂಧನಕ್ಕೆ  ಒಪ್ಪಿಸಿ ಕಲಬುರಗಿ 2 ನೇ ಜಿಲ್ಲಾ ಸತ್ರ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ಹವಾ ಮಲ್ಲಿನಾಥ ಮುತ್ಯಾ ಅವರ ಸಂಬಂಧಿ ಪ್ರಕಾಶ್ ಮೇಲೆ ಅಟ್ರಾಸಿಟಿ ಮತ್ತು ಅತ್ಯಾಚಾರ ಪ್ರಕರಣ, ಹವಾ ಮಲ್ಲಿನಾಥ ಮುತ್ಯಾ ವಿರುದ್ಧವೂ ಕುಮ್ಮಕ್ಕು ಆರೋಪ ಹಿನ್ನೆಲೆ 498/A, 506,109, 34 ಅಡಿ 2018 ರಲ್ಲಿ ಕಲಬುರಗಿಯ ಎಂ ಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳಿಂದ ಹವಾ ಮಲ್ಲಿನಾಥ್ ಮುತ್ಯಾ ನ್ಯಾಯಾಲಯಕ್ಕೆ ಹಾಜರಾಗಿಲ್ಲ.

ನ್ಯಾಯಾಲಯ ಬಾಡಿ ವಾರೆಂಟ್ ಮಾಡಿದ ಕಾರಣ ಇಂದು ನ್ಯಾಯಾಲಯದ ಮುಂದೆ ಹವಾ ಮಲ್ಲಿನಾಥ್ ಮುತ್ಯಾ ಶರಣಾಗಿದ್ದರು. ಹವಾ ಮಲ್ಲಿನಾಥ ಮುತ್ಯಾ ಜೈ ಭಾರತ್ ಮಾತಾ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ, ಕರ್ನಾಟಕ-ಮಹಾರಾಷ್ಟ್ರದಲ್ಲಿ ಭಾರಿ ಪ್ರಭಾವ ಹೊಂದಿದ್ದಾರೆ.

ರಾಮ ಮಂದಿರದ ಮೇಲೆ ಹಸಿರು ಬಾವುಟದ ಚಿತ್ರ: ಮುಸ್ಲಿಂ ಯುವಕ ಜೈಲಿಗೆ 

ಧಾರವಾಡ: ರಾಮ ಮಂದಿರದ ಮೇಲೆ ಹಸಿರು ಬಾವುಟದ ಚಿತ್ರವನ್ನು ಸ್ಟೇಟಸ್ ಇಟ್ಟುಕೊಂಡ ಮುಸ್ಲಿಂ ಯುವಕನನ್ನು ಜೈಲಿಗೆ ಕಳುಹಿಸಲಾಗಿತ್ತು. ಮೂರು ದಿನಗಳ ಹಿಂದೆ ಚಿತ್ರ ಹಾಕಿ ಸ್ಟೇಟಸ್ ಇಟ್ಟ ಯುವಕ ‘ಇಸ್ಲಾಮಿಕ್ ಪವರ್ ತೋರಿಸುತ್ತೇವೆ’ ಎಂದು ಬರೆಯಲಾಗಿತ್ತು. ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸದ್ದಾಂಹುಸೇನ ಇಸ್ಮಾಯಿಲ್ ಸಾಬ್ ನದಾಫ್ ಎನ್ನುವ ಯುವಕನೇ ಈ ಕೃತ್ಯವೆಸಗಿ ಜೈಲು ಪಾಲಾಗಿದ್ದಾರೆ. ಈ ಸ್ಟೇಟಸ್ ಗಮನಕ್ಕೆ ಬರುತ್ತಿದ್ದಂತೆಯೇ ಗರಗ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ಆತನನ್ನು ಬಂಧಿಸಿದ್ದರು.

ಇದನ್ನೂ ಓದಿ: ಅನುಮತಿ ಪಡೆಯದೆ ಕಬ್ಬು ಅರಿದಿರುವ ಆರೋಪ: ಶಾಸಕ ಯತ್ನಾಳ್‌ಗೆ ನೋಟಿಸ್ ಜಾರಿ

ಇದೇ ವೇಳೆ ಯುವಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಶ್ರೀರಾಮ ಸೇನೆ ಕಾರ್ಯಕರ್ತರು, ಯುವಕನ ಮನೆಗೆ ಹೋಗಿ ಅಯೋಧ್ಯೆಗೆ ತಮ್ಮೊಂದಿಗೆ ಬರುವಂತೆ ಆಮಂತ್ರಣ ನೀಡಲು ಮುಂದಾಗಿದ್ದರು.

ಇದನ್ನೂ ಓದಿ: ಸಂಕಷ್ಟದಲ್ಲಿ ಬಸನಗೌಡ ಯತ್ನಾಳ್, ಸಕ್ಕರೆ ಕಾರ್ಖಾನೆಗೆ ನೀಡಿರುವ ನೋಟೀಸ್​ಗೆ 24 ಗಂಟೆಗಳಲ್ಲಿ ಉತ್ತರಿಸಲು ಸೂಚನೆ

ಜ. 30ರಂದು ತಡಕೋಡ ಗ್ರಾಮಕ್ಕೆ ತೆರಳಲು ಶ್ರೀರಾಮ ಸೇನೆ ನಿರ್ಧರಿಸಿರೋ ಕಾರ್ಯಕರ್ತರು, ನಾವೇ ಖರ್ಚು ಕೊಟ್ಟು ಅಯೋಧ್ಯೆಗೆ ಕರೆದುಕೊಂಡು ಹೋಗುತ್ತೇವೆ. ಅಲ್ಲಿಗೆ ಬಂದು ಹಸಿರು ಧ್ವಜ ಹಾರಿಸು ಅನ್ನೋ ಚಾಲೆಂಜ್ ಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:14 pm, Mon, 19 February 24

Follow Us
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ