AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯ ಹವಾ ಮಲ್ಲಿನಾಥ ಮುತ್ಯಾಗೆ ನ್ಯಾಯಾಂಗ ಬಂಧನ

ಕಲಬುರಗಿಯ ಹವಾ ಮಲ್ಲಿನಾಥ ಮುತ್ಯಾಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕಲಬುರಗಿ 2 ನೇ ಜಿಲ್ಲಾ ಸತ್ರ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ಜೈ ಭಾರತ್ ಮಾತಾ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ, ಕರ್ನಾಟಕ-ಮಹಾರಾಷ್ಟ್ರದಲ್ಲಿ ಭಾರಿ ಪ್ರಭಾವ ಹೊಂದಿದ್ದಾರೆ. ಅಟ್ರಾಸಿಟಿ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಕುಮ್ಮಕ್ಕು ಆರೋಪ ಹಿನ್ನೆಲೆ ಪ್ರಕರಣ ದಾಖಲಾಗಿತ್ತು.

ಕಲಬುರಗಿಯ ಹವಾ ಮಲ್ಲಿನಾಥ ಮುತ್ಯಾಗೆ ನ್ಯಾಯಾಂಗ ಬಂಧನ
ಹವಾ ಮಲ್ಲಿನಾಥ ಮುತ್ಯಾ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Feb 19, 2024 | 5:40 PM

Share

ಕಲಬುರಗಿ, ಫೆಬ್ರವರಿ 19: ಕಲಬುರಗಿಯ ಹವಾ ಮಲ್ಲಿನಾಥ ಮುತ್ಯಾ (Mallinath Mutya) ಗೆ 14 ದಿನ ನ್ಯಾಯಾಂಗ ಬಂಧನಕ್ಕೆ  ಒಪ್ಪಿಸಿ ಕಲಬುರಗಿ 2 ನೇ ಜಿಲ್ಲಾ ಸತ್ರ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ಹವಾ ಮಲ್ಲಿನಾಥ ಮುತ್ಯಾ ಅವರ ಸಂಬಂಧಿ ಪ್ರಕಾಶ್ ಮೇಲೆ ಅಟ್ರಾಸಿಟಿ ಮತ್ತು ಅತ್ಯಾಚಾರ ಪ್ರಕರಣ, ಹವಾ ಮಲ್ಲಿನಾಥ ಮುತ್ಯಾ ವಿರುದ್ಧವೂ ಕುಮ್ಮಕ್ಕು ಆರೋಪ ಹಿನ್ನೆಲೆ 498/A, 506,109, 34 ಅಡಿ 2018 ರಲ್ಲಿ ಕಲಬುರಗಿಯ ಎಂ ಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳಿಂದ ಹವಾ ಮಲ್ಲಿನಾಥ್ ಮುತ್ಯಾ ನ್ಯಾಯಾಲಯಕ್ಕೆ ಹಾಜರಾಗಿಲ್ಲ.

ನ್ಯಾಯಾಲಯ ಬಾಡಿ ವಾರೆಂಟ್ ಮಾಡಿದ ಕಾರಣ ಇಂದು ನ್ಯಾಯಾಲಯದ ಮುಂದೆ ಹವಾ ಮಲ್ಲಿನಾಥ್ ಮುತ್ಯಾ ಶರಣಾಗಿದ್ದರು. ಹವಾ ಮಲ್ಲಿನಾಥ ಮುತ್ಯಾ ಜೈ ಭಾರತ್ ಮಾತಾ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ, ಕರ್ನಾಟಕ-ಮಹಾರಾಷ್ಟ್ರದಲ್ಲಿ ಭಾರಿ ಪ್ರಭಾವ ಹೊಂದಿದ್ದಾರೆ.

ರಾಮ ಮಂದಿರದ ಮೇಲೆ ಹಸಿರು ಬಾವುಟದ ಚಿತ್ರ: ಮುಸ್ಲಿಂ ಯುವಕ ಜೈಲಿಗೆ 

ಧಾರವಾಡ: ರಾಮ ಮಂದಿರದ ಮೇಲೆ ಹಸಿರು ಬಾವುಟದ ಚಿತ್ರವನ್ನು ಸ್ಟೇಟಸ್ ಇಟ್ಟುಕೊಂಡ ಮುಸ್ಲಿಂ ಯುವಕನನ್ನು ಜೈಲಿಗೆ ಕಳುಹಿಸಲಾಗಿತ್ತು. ಮೂರು ದಿನಗಳ ಹಿಂದೆ ಚಿತ್ರ ಹಾಕಿ ಸ್ಟೇಟಸ್ ಇಟ್ಟ ಯುವಕ ‘ಇಸ್ಲಾಮಿಕ್ ಪವರ್ ತೋರಿಸುತ್ತೇವೆ’ ಎಂದು ಬರೆಯಲಾಗಿತ್ತು. ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸದ್ದಾಂಹುಸೇನ ಇಸ್ಮಾಯಿಲ್ ಸಾಬ್ ನದಾಫ್ ಎನ್ನುವ ಯುವಕನೇ ಈ ಕೃತ್ಯವೆಸಗಿ ಜೈಲು ಪಾಲಾಗಿದ್ದಾರೆ. ಈ ಸ್ಟೇಟಸ್ ಗಮನಕ್ಕೆ ಬರುತ್ತಿದ್ದಂತೆಯೇ ಗರಗ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ಆತನನ್ನು ಬಂಧಿಸಿದ್ದರು.

ಇದನ್ನೂ ಓದಿ: ಅನುಮತಿ ಪಡೆಯದೆ ಕಬ್ಬು ಅರಿದಿರುವ ಆರೋಪ: ಶಾಸಕ ಯತ್ನಾಳ್‌ಗೆ ನೋಟಿಸ್ ಜಾರಿ

ಇದೇ ವೇಳೆ ಯುವಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಶ್ರೀರಾಮ ಸೇನೆ ಕಾರ್ಯಕರ್ತರು, ಯುವಕನ ಮನೆಗೆ ಹೋಗಿ ಅಯೋಧ್ಯೆಗೆ ತಮ್ಮೊಂದಿಗೆ ಬರುವಂತೆ ಆಮಂತ್ರಣ ನೀಡಲು ಮುಂದಾಗಿದ್ದರು.

ಇದನ್ನೂ ಓದಿ: ಸಂಕಷ್ಟದಲ್ಲಿ ಬಸನಗೌಡ ಯತ್ನಾಳ್, ಸಕ್ಕರೆ ಕಾರ್ಖಾನೆಗೆ ನೀಡಿರುವ ನೋಟೀಸ್​ಗೆ 24 ಗಂಟೆಗಳಲ್ಲಿ ಉತ್ತರಿಸಲು ಸೂಚನೆ

ಜ. 30ರಂದು ತಡಕೋಡ ಗ್ರಾಮಕ್ಕೆ ತೆರಳಲು ಶ್ರೀರಾಮ ಸೇನೆ ನಿರ್ಧರಿಸಿರೋ ಕಾರ್ಯಕರ್ತರು, ನಾವೇ ಖರ್ಚು ಕೊಟ್ಟು ಅಯೋಧ್ಯೆಗೆ ಕರೆದುಕೊಂಡು ಹೋಗುತ್ತೇವೆ. ಅಲ್ಲಿಗೆ ಬಂದು ಹಸಿರು ಧ್ವಜ ಹಾರಿಸು ಅನ್ನೋ ಚಾಲೆಂಜ್ ಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:14 pm, Mon, 19 February 24

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ