AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Flood Alert: ಭೀಮಾ ನದಿಪಾತ್ರದ ಜನರೇ ಎಚ್ಚರ: ಉಂಟಾಗಿದೆ ಪ್ರವಾಹ ಭೀತಿ

ಸೊನ್ನ ಬ್ಯಾರೇಜ್ ಗೆ 29 ಸಾವಿರ ಕ್ಯೂಸೆಕ್ಸ್ ನೀರಿನ ಒಳಹರಿವು ಇದ್ದು, 6 ಗೇಟುಗಳ ಮಾಡುವ ಮೂಲಕ ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.

Flood Alert: ಭೀಮಾ ನದಿಪಾತ್ರದ ಜನರೇ ಎಚ್ಚರ: ಉಂಟಾಗಿದೆ ಪ್ರವಾಹ ಭೀತಿ
ಸೊನ್ನ ಬ್ಯಾರೇಜ್, ಕಲಬುರಗಿ
TV9 Web
| Edited By: |

Updated on:Sep 06, 2021 | 9:46 PM

Share

ಕಲಬುರಗಿ: ಭೀಮಾ ನದಿ ಪಾತ್ರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಪ್ರವಾಹದ ಭೀತಿ ಎದುರಾಗಿದೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೆಜ್​ನಿಂದ 29 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಸಾಮರ್ಥ್ಯದ ಶೇ 70 ರಷ್ಟು ಅಂದರೆ 2.3 ಟಿಎಂಸಿ ನೀರು ಸಂಗ್ರಹವಾಗಿದೆ. ಸೊನ್ನ ಬ್ಯಾರೇಜ್​ ಸಂಗ್ರಹ ಸಾಮರ್ಥ್ಯ 3.16 ಟಿಎಂಸಿಯಷ್ಟಿದೆ. ಸದ್ಯ ಸೊನ್ನ ಬ್ಯಾರೇಜ್ ಗೆ 29 ಸಾವಿರ ಕ್ಯೂಸೆಕ್ಸ್ ನೀರಿನ ಒಳಹರಿವು ಇದ್ದು, 6 ಗೇಟುಗಳ ಮಾಡುವ ಮೂಲಕ ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.

ಪರಿಹಾರ ನೀಡದ ಕಾರಣ ಕಚೇರಿ ಸಾಮಾಗ್ರಿ ಜಪ್ತಿ ಬಾಗಲಕೋಟೆ: ಸಂತ್ರಸ್ತರಿಗೆ ಪರಿಹಾರ ನೀಡದ ಕಾರಣ ನ್ಯಾಯಾಲಯದ ಆದೇಶದಂತೆ ಬಾಗಲಕೋಟೆಯಲ್ಲಿರುವ ಘಟಪ್ರಭಾ, ಮಲಪ್ರಭಾ ಯೋಜನೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಜಪ್ತಿ ಮಾಡಲಾಗಿದೆ. ಕಂಪ್ಯೂಟರ್, ತಿಜೋರಿ, ಮೇಜು, ಕುರ್ಚಿ ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿಗೊಳಿಸಲಾಗಿದೆ. ಮುಳುಗಡೆಯಾದ ಜಮೀನಿನ ದ್ರಾಕ್ಷಿ ಬೆಳೆ ಪರಿಹಾರ ನೀಡಿದ ಹಿನ್ನೆಲೆಯಲ್ಲಿ ಕಲಾದಗಿ ಗ್ರಾಮದ ರೈತ ಮಲ್ಲಿನಾಥ ಶೆಟ್ಟರ್ ಎಂಬುವವರಿಗೆ ಪರಿಹಾರ ನೀಡಿರಲಿಲ್ಲ. 2020ರಲ್ಲಿ 40.87 ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಆದರೂ ಸರ್ಕಾರ ಈವರೆಗೆ ಪರಿಹಾರ ನೀಡಿರಲಿಲ್ಲ. ಹೀಗಾಗಿ ಕೋರ್ಟ್ ಆದೇಶದಂತೆ ಕಚೇರಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: 

ಕಲಬುರಗಿ ಪಾಲಿಕೆ ಚುನಾವಣೆ: ಸ್ಪಷ್ಟ ಬಹುಮತ ನೀಡದ ಮತದಾರ; ಟಿಕೆಟ್ ಹಂಚಿಕೆ, ಕಾರ್ಯಕರ್ತರ ಅಸಮಾಧಾನ ಕಾರಣ 

ಕಲಬುರಗಿ ಪಾಲಿಕೆ ಚುನಾವಣೆ: ಯಾರಿಗೂ ಸ್ಪಷ್ಟ ಬಹುಮತ ಇಲ್ಲ; ಜೆಡಿಎಸ್ ಕಿಂಗ್ ಮೇಕರ್- ಗೆದ್ದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

(Kalburgi Bhima River flood alert heavy rain)

Published On - 9:31 pm, Mon, 6 September 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ