AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಪಾಲಿಕೆ ಸದಸ್ಯೆಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸದಂತೆ, ಮೇಯರ್ ಚುನಾವಣೆಯಲ್ಲಿ ಭಾಗವಹಿಸದಂತೆ ಸದಸ್ಯೆಗೆ ತಡೆಯಾಜ್ಞೆ

ವಾರ್ಡ್ ನಂಬರ್ 24ರ ಬಿಜೆಪಿ ಸದಸ್ಯೆಯಾಗಿರುವ ಪ್ರಿಯಾಂಕಾ, ಸುಳ್ಳು ಮಾಹಿತಿ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದಾರೆಂದು ಆರೋಪ ವ್ಯಕ್ತವಾಗಿತ್ತು. ಈ ಬಗ್ಗೆ, ಡಿಸೆಂಬರ್ 15ಕ್ಕೆ ಮತ್ತೆ ಸೆಷನ್ಸ್​ ಕೋರ್ಟ್​ ವಿಚಾರಣೆ ನಿಗದಿಪಡಿಸಿದೆ.

ಕಲಬುರಗಿ: ಪಾಲಿಕೆ ಸದಸ್ಯೆಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸದಂತೆ, ಮೇಯರ್ ಚುನಾವಣೆಯಲ್ಲಿ ಭಾಗವಹಿಸದಂತೆ ಸದಸ್ಯೆಗೆ ತಡೆಯಾಜ್ಞೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 08, 2021 | 5:23 PM

Share

ಕಲಬುರಗಿ: ಪಾಲಿಕೆ ಸದಸ್ಯೆಯಾಗಿ ಪ್ರತಿಜ್ಞಾವಿಧಿ ಸ್ವೀಕಾರ, ಮತದಾನಕ್ಕೆ ಕಲಬುರಗಿ ಪಾಲಿಕೆ ವಾರ್ಡ್ 24ರ ಸದಸ್ಯೆ ಪ್ರಿಯಾಂಕಾಗೆ ತಡೆಯಾಜ್ಞೆ ನೀಡಲಾಗಿದೆ. ಮಹಾನಗರ ಪಾಲಿಕೆ ಸದಸ್ಯೆಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸದಂತೆ ಹಾಗೂ ಮೇಯರ್​ ಚುನಾವಣೆಯಲ್ಲಿ ಭಾಗಿಯಾಗದಂತೆ ತಡೆಯಾಜ್ಞೆ ಹೊರಡಿಸಲಾಗಿದೆ. ಕಲಬುರಗಿಯ 3ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ನಿಂದ ಈ ಬಗ್ಗೆ ಆದೇಶ ನೀಡಲಾಗಿದೆ. ಡಿಸೆಂಬರ್ 4 ರಂದು ನ್ಯಾಯಾಲಯ ಈ ಬಗ್ಗೆ ಆದೇಶ ಹೊರಡಿಸಿದೆ.

21 ವರ್ಷವಾಗದಿದ್ದರೂ ಪಾಲಿಕೆ ಚುನಾವಣೆಗೆ ಸ್ಪರ್ಧೆ ಆರೋಪ ಕೇಳಿಬಂದಿತ್ತು. ಪ್ರಿಯಾಂಕಾ ಸ್ಪರ್ಧೆಯನ್ನು ಸೈಯದ್ ನೂರ್ ಫಾತಿಮಾ ಪ್ರಶ್ನಿಸಿದ್ದರು. ವಾರ್ಡ್ ನಂಬರ್ 24ರ ಬಿಜೆಪಿ ಸದಸ್ಯೆಯಾಗಿರುವ ಪ್ರಿಯಾಂಕಾ, ಸುಳ್ಳು ಮಾಹಿತಿ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದಾರೆಂದು ಆರೋಪ ವ್ಯಕ್ತವಾಗಿತ್ತು. ಈ ಬಗ್ಗೆ, ಡಿಸೆಂಬರ್ 15ಕ್ಕೆ ಮತ್ತೆ ಸೆಷನ್ಸ್​ ಕೋರ್ಟ್​ ವಿಚಾರಣೆ ನಿಗದಿಪಡಿಸಿದೆ. ಸೆಷನ್ಸ್​ ಕೋರ್ಟ್​ ಆದೇಶ ಪ್ರಶ್ನಿಸಿ ಬಿಜೆಪಿ ಸದಸ್ಯೆ ಪ್ರಿಯಾಂಕಾ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಎಪಿಪಿ ನೇಮಕದಲ್ಲಿ ಅಕ್ರಮ ಆರೋಪ ಹಿನ್ನೆಲೆ; ಅಭಿಯೋಜಕರಾಗಿ ಆರೋಪಿತರ ಮುಂದುವರಿಸದಂತೆ ಆದೇಶ ಎಪಿಪಿ ನೇಮಕದಲ್ಲಿ ಅಕ್ರಮ ಆರೋಪ ಹಿನ್ನೆಲೆ ಅಭಿಯೋಜಕರಾಗಿ ಆರೋಪಿತರ ಮುಂದುವರಿಸದಂತೆ ಆದೇಶ ನೀಡಲಾಗಿದೆ. ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. 61 ಎಪಿಪಿಗಳ ವಿರುದ್ಧ ಆರೋಪಪಟ್ಟಿ ದಾಖಲಾಗಿರುವ ಹಿನ್ನೆಲೆ, 4 ತಿಂಗಳಲ್ಲಿ ಇಲಾಖಾ ವಿಚಾರಣೆ ಪೂರ್ಣಗೊಳಿಸಲು ಆದೇಶ ಹೊರಡಿಸಲಾಗಿದೆ. ಲೋಕಾಯುಕ್ತ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಕ್ರಿಮಿನಲ್ ಪ್ರಕರಣದ ವಿಚಾರಣೆ ತ್ವರಿತಗೊಳಿಸಲು ಆದೇಶ ನೀಡಲಾಗಿದೆ. ಸಮಾಜ ಪರಿವರ್ತನಾ ಸಮುದಾಯ ಈ ಬಗ್ಗೆ ಪಿಐಎಲ್ ಸಲ್ಲಿಸಿತ್ತು. 2014ರಲ್ಲಿ ಎಎಪಿಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆಗಿತ್ತು ಎಂದು ಲೋಕಾಯುಕ್ತ ಪೊಲೀಸರು ಚಾರ್ಜ್​​ಶೀಟ್ ದಾಖಲಿಸಿದ್ದರು.

ಇದನ್ನೂ ಓದಿ: ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ವಂಚನೆ ಆರೋಪ; ಸಾಮಾಜಿಕ ಜಾಲತಾಣದ ಮೂಲಕ ಯುವತಿಯಿಂದ ಸಿಎಂಗೆ ದೂರು

ಇದನ್ನೂ ಓದಿ: ಕಲಬುರಗಿ ಪಿಡಬ್ಲೂಡಿ ಜೆಇ ಶಾಂತಗೌಡ ಬಿರಾದರ್ ಮನೆಯ ಪೈಪ್​ನಲ್ಲಿ ಎಸಿಬಿ ಅಧಿಕಾರಿಗಳಿಗೆ ಕಂತೆ ಕಂತೆ ಹಣ ಸಿಕ್ಕಿದ್ದು ಹೀಗೆ

Published On - 5:21 pm, Wed, 8 December 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ