AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಪಾಲಿಕೆ ಸದಸ್ಯೆಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸದಂತೆ, ಮೇಯರ್ ಚುನಾವಣೆಯಲ್ಲಿ ಭಾಗವಹಿಸದಂತೆ ಸದಸ್ಯೆಗೆ ತಡೆಯಾಜ್ಞೆ

ವಾರ್ಡ್ ನಂಬರ್ 24ರ ಬಿಜೆಪಿ ಸದಸ್ಯೆಯಾಗಿರುವ ಪ್ರಿಯಾಂಕಾ, ಸುಳ್ಳು ಮಾಹಿತಿ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದಾರೆಂದು ಆರೋಪ ವ್ಯಕ್ತವಾಗಿತ್ತು. ಈ ಬಗ್ಗೆ, ಡಿಸೆಂಬರ್ 15ಕ್ಕೆ ಮತ್ತೆ ಸೆಷನ್ಸ್​ ಕೋರ್ಟ್​ ವಿಚಾರಣೆ ನಿಗದಿಪಡಿಸಿದೆ.

ಕಲಬುರಗಿ: ಪಾಲಿಕೆ ಸದಸ್ಯೆಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸದಂತೆ, ಮೇಯರ್ ಚುನಾವಣೆಯಲ್ಲಿ ಭಾಗವಹಿಸದಂತೆ ಸದಸ್ಯೆಗೆ ತಡೆಯಾಜ್ಞೆ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Dec 08, 2021 | 5:23 PM

Share

ಕಲಬುರಗಿ: ಪಾಲಿಕೆ ಸದಸ್ಯೆಯಾಗಿ ಪ್ರತಿಜ್ಞಾವಿಧಿ ಸ್ವೀಕಾರ, ಮತದಾನಕ್ಕೆ ಕಲಬುರಗಿ ಪಾಲಿಕೆ ವಾರ್ಡ್ 24ರ ಸದಸ್ಯೆ ಪ್ರಿಯಾಂಕಾಗೆ ತಡೆಯಾಜ್ಞೆ ನೀಡಲಾಗಿದೆ. ಮಹಾನಗರ ಪಾಲಿಕೆ ಸದಸ್ಯೆಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸದಂತೆ ಹಾಗೂ ಮೇಯರ್​ ಚುನಾವಣೆಯಲ್ಲಿ ಭಾಗಿಯಾಗದಂತೆ ತಡೆಯಾಜ್ಞೆ ಹೊರಡಿಸಲಾಗಿದೆ. ಕಲಬುರಗಿಯ 3ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ನಿಂದ ಈ ಬಗ್ಗೆ ಆದೇಶ ನೀಡಲಾಗಿದೆ. ಡಿಸೆಂಬರ್ 4 ರಂದು ನ್ಯಾಯಾಲಯ ಈ ಬಗ್ಗೆ ಆದೇಶ ಹೊರಡಿಸಿದೆ.

21 ವರ್ಷವಾಗದಿದ್ದರೂ ಪಾಲಿಕೆ ಚುನಾವಣೆಗೆ ಸ್ಪರ್ಧೆ ಆರೋಪ ಕೇಳಿಬಂದಿತ್ತು. ಪ್ರಿಯಾಂಕಾ ಸ್ಪರ್ಧೆಯನ್ನು ಸೈಯದ್ ನೂರ್ ಫಾತಿಮಾ ಪ್ರಶ್ನಿಸಿದ್ದರು. ವಾರ್ಡ್ ನಂಬರ್ 24ರ ಬಿಜೆಪಿ ಸದಸ್ಯೆಯಾಗಿರುವ ಪ್ರಿಯಾಂಕಾ, ಸುಳ್ಳು ಮಾಹಿತಿ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದಾರೆಂದು ಆರೋಪ ವ್ಯಕ್ತವಾಗಿತ್ತು. ಈ ಬಗ್ಗೆ, ಡಿಸೆಂಬರ್ 15ಕ್ಕೆ ಮತ್ತೆ ಸೆಷನ್ಸ್​ ಕೋರ್ಟ್​ ವಿಚಾರಣೆ ನಿಗದಿಪಡಿಸಿದೆ. ಸೆಷನ್ಸ್​ ಕೋರ್ಟ್​ ಆದೇಶ ಪ್ರಶ್ನಿಸಿ ಬಿಜೆಪಿ ಸದಸ್ಯೆ ಪ್ರಿಯಾಂಕಾ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಎಪಿಪಿ ನೇಮಕದಲ್ಲಿ ಅಕ್ರಮ ಆರೋಪ ಹಿನ್ನೆಲೆ; ಅಭಿಯೋಜಕರಾಗಿ ಆರೋಪಿತರ ಮುಂದುವರಿಸದಂತೆ ಆದೇಶ ಎಪಿಪಿ ನೇಮಕದಲ್ಲಿ ಅಕ್ರಮ ಆರೋಪ ಹಿನ್ನೆಲೆ ಅಭಿಯೋಜಕರಾಗಿ ಆರೋಪಿತರ ಮುಂದುವರಿಸದಂತೆ ಆದೇಶ ನೀಡಲಾಗಿದೆ. ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. 61 ಎಪಿಪಿಗಳ ವಿರುದ್ಧ ಆರೋಪಪಟ್ಟಿ ದಾಖಲಾಗಿರುವ ಹಿನ್ನೆಲೆ, 4 ತಿಂಗಳಲ್ಲಿ ಇಲಾಖಾ ವಿಚಾರಣೆ ಪೂರ್ಣಗೊಳಿಸಲು ಆದೇಶ ಹೊರಡಿಸಲಾಗಿದೆ. ಲೋಕಾಯುಕ್ತ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಕ್ರಿಮಿನಲ್ ಪ್ರಕರಣದ ವಿಚಾರಣೆ ತ್ವರಿತಗೊಳಿಸಲು ಆದೇಶ ನೀಡಲಾಗಿದೆ. ಸಮಾಜ ಪರಿವರ್ತನಾ ಸಮುದಾಯ ಈ ಬಗ್ಗೆ ಪಿಐಎಲ್ ಸಲ್ಲಿಸಿತ್ತು. 2014ರಲ್ಲಿ ಎಎಪಿಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆಗಿತ್ತು ಎಂದು ಲೋಕಾಯುಕ್ತ ಪೊಲೀಸರು ಚಾರ್ಜ್​​ಶೀಟ್ ದಾಖಲಿಸಿದ್ದರು.

ಇದನ್ನೂ ಓದಿ: ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ವಂಚನೆ ಆರೋಪ; ಸಾಮಾಜಿಕ ಜಾಲತಾಣದ ಮೂಲಕ ಯುವತಿಯಿಂದ ಸಿಎಂಗೆ ದೂರು

ಇದನ್ನೂ ಓದಿ: ಕಲಬುರಗಿ ಪಿಡಬ್ಲೂಡಿ ಜೆಇ ಶಾಂತಗೌಡ ಬಿರಾದರ್ ಮನೆಯ ಪೈಪ್​ನಲ್ಲಿ ಎಸಿಬಿ ಅಧಿಕಾರಿಗಳಿಗೆ ಕಂತೆ ಕಂತೆ ಹಣ ಸಿಕ್ಕಿದ್ದು ಹೀಗೆ

Published On - 5:21 pm, Wed, 8 December 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ