AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರ್ಗಿ-ಕೊಲ್ಹಾಪುರ ನೇರ ರೈಲು ಸಂಚಾರ ಆರಂಭ: ಈಡೇರಿತು ಬಹುದಿನಗಳ ಬೇಡಿಕೆ

ಕಲಬುರ್ಗಿಯಿಂದ ಪ್ರತಿದಿನ ಬೆಳಿಗ್ಗೆ 6.40ಕ್ಕೆ ಹೊರಡಲಿರುವ ರೈಲು ಮಧ್ಯಾಹ್ನ 2.15ಕ್ಕೆ ಕೊಲ್ಹಾಪುರ ತಲುಪಲಿದೆ.

ಕಲಬುರ್ಗಿ-ಕೊಲ್ಹಾಪುರ ನೇರ ರೈಲು ಸಂಚಾರ ಆರಂಭ: ಈಡೇರಿತು ಬಹುದಿನಗಳ ಬೇಡಿಕೆ
ಕಲಬುರ್ಗಿ-ಕೊಲ್ಹಾಪುರ ರೈಲು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 16, 2022 | 3:20 PM

Share

ಕಲಬುರ್ಗಿ: ನಗರದಿಂದ ಕೊಲ್ಹಾಪುರಕ್ಕೆ ನೇರ ರೈಲು ಸಂಪರ್ಕ ಬೇಕು ಎನ್ನುವ ಜಿಲ್ಲೆಯ ನಿವಾಸಿಗಳ ಬಹುದಿನಗಳ ಬೇಡಿಕೆ ಇದೀಗ ಈಡೇರಿದೆ. ನಗರದ ರೈಲು ನಿಲ್ದಾಣದಲ್ಲಿ ಸಂಸದ ಉಮೇಶ್ ಜಾಧವ್ ರೈಲಿಗೆ ಹಸಿರು ನಿಶಾನೆ ತೋರಿದರು. ನಗರದಿಂದ ಪ್ರತಿದಿನ ಮುಂಜಾನೆ 6.40ಕ್ಕೆ ಹೊರಡಲಿರುವ ರೈಲು ಮಧ್ಯಾಹ್ನ 2.15ಕ್ಕೆ ಕೊಲ್ಹಾಪುರ ತಲುಪಲಿದೆ. ಕೊಲ್ಹಾಪುರದಿಂದ ಮತ್ತೆ ಮಧ್ಯಾಹ್ನ 3ಕ್ಕೆ ಹೊರಟು ರಾತ್ರಿ 10.45ಕ್ಕೆ ಕಲಬುರಗಿ ತಲುಪಲಿದೆ.

ಪ್ರಸಿದ್ಧ ಯಾತ್ರಾಸ್ಥಳಗಳಾದ ಗಾಣಗಾಪುರದ ದತ್ತಾತ್ರೇಯ, ಪಂಢರಾಪುರದ ವಿಠ್ಠಲ, ಕೊಲ್ಹಾಪುರದ ಮಹಾಲಕ್ಷ್ಮಿ ಮಂದಿರಗಳನ್ನು ಸಂದರ್ಶಿಸುವ ಯಾತ್ರಿಗಳ ಆಸೆಯನ್ನು ಈ ರೈಲು ಸುಲಭವಾಗಿ ಈಡೇರಿಸುತ್ತದೆ. ಧಾರ್ಮಿಕ ನಗರಗಳ ನಡುವೆ ನೇರ ರೈಲು ಸಂಪರ್ಕ ಕಲ್ಪಿಸಲು ಜಿಲ್ಲೆಯ ಜನರು ಹಲವು ದಿನಗಳಿಂದ ಕೋರುತ್ತಿದ್ದರು. ಇಷ್ಟು ದಿನ ಸೊಲ್ಲಾಪುರ-ಮೀರಜ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ರೈಲನ್ನೇ ಇದೀಗ ಕಲಬುರಗಿ ಹಾಗೂ ಕೊಲ್ಹಾಪುರದವರೆಗೆ ಎರಡೂ ಮಾರ್ಗಗಳಲ್ಲಿ ವಿಸ್ತರಿಸಲಾಗಿದೆ.

ಕಲಬುರಗಿಯಿಂದ ಬೆಳಗ್ಗೆ 6.40ಕ್ಕೆ ಹೊರಡಲಿರುವ ರೈಲು 7.05ಕ್ಕೆ ಗಾಣಗಾಪುರ, 7.46ಕ್ಕೆ ಅಕ್ಕಲಕೋಟ, 8.25ಕ್ಕೆ ಸೋಲಾಪುರ, 9.30ಕ್ಕೆ ಕುರುಡ್ವಾಡಿ, 10.20ಕ್ಕೆ ಪಂಡರಾಪುರ, 12.45 ಮಿರಜ್, 1.10ಕ್ಕೆ ಜೈಸಿಂಗ್‌ಪುರ, 1.25ಕ್ಕೆ ಹತ್ಕಣಂಗಲೆ, 2.15ಕ್ಕೆ ಕೊಲ್ಹಾಪುರ ತಲುಪಲಿದೆ.

ಮಧ್ಯಾಹ್ನ 3 ಗಂಟೆಗೆ ಕೊಲ್ಹಾಪುರದಿಂದ ಹೊರಡುವ ರೈಲು 3.25ಕ್ಕೆ ಹತ್ಕಣಂಗಲೆ, 3.40ಕ್ಕೆ ಜೈಸಿಂಗ್‌ಪುರ, 4.35ಕ್ಕೆ ಮೀರಜ್, 6.45ಕ್ಕೆ ಪಂಡರಪುರ, 7.40ಕ್ಕೆ ಕುರುಡ್ವಾಡಿ, 8.55ಕ್ಕೆ ಸೋಲಾಪುರ, 9.32ಕ್ಕೆ ಅಕ್ಕಲಕೋಟ, 10.10ಕ್ಕೆ ಗಾಣಗಾಪುರ, ರಾತ್ರಿ 10.45ಕ್ಕೆ ಕಲಬುರಗಿಗೆ ಬರಲಿದೆ.

Published On - 3:20 pm, Fri, 16 September 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?