AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಹಂಚಿಕೆಗೆ ಹಣ: ಆಡಿಯೋ ರಿಲೀಸ್ ಮಾಡಿದ್ದ ಬಿಆರ್ ಪಾಟೀಲ್ ಕ್ಷೇತ್ರದ ವಿಡಿಯೋ ವೈರಲ್

ರಾಜೀವ್ ಗಾಂಧಿ ವಸತಿ ಯೋಜನೆಯಡಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಶಾಸಕ ಬಿ.ಆರ್.ಪಾಟೀಲ್​ ಗಂಭೀರ ಆರೋಪ ಮಾಡಿದ್ದರು. ಸದ್ಯ ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಂಗಾಪುರ ಗ್ರಾಮದಲ್ಲಿ ಮನೆ ಹಂಚಿಕೆ ಸಂಬಂಧ ನಡೆದ ಹಣಕಾಸಿನ ವ್ಯವಹಾರದ ವಿಡಿಯೋವೊಂದು ವೈರಲ್ ಆಗಿದೆ.

ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Jun 22, 2025 | 2:19 PM

Share

ಕಲಬುರಗಿ, ಜೂನ್ 22: ಬಡವರಿಗೆ ಮನೆ ಬೇಕು ಅಂದರೆ ವಸತಿ ಇಲಾಖೆ ಅಧಿಕಾರಿಗಳಿಗೆ ಹಣ ಕೊಡಲೇಬೇಕು ಎಂದು ಕಾಂಗ್ರೆಸ್​ ಶಾಸಕ ಬಿ.ಆರ್.ಪಾಟೀಲ್ (BR Patil)​ ಬಾಂಬ್ ಸಿಡಿಸಿದ್ದರು. ಇದರ ಬೆನ್ನಲ್ಲೇ ಟಿವಿ9 ರಿಯಾಲಿಟಿ ಚೆಕ್ ಮಾಡಿದಾಗ ಅಫಜಲಪುರ ಕ್ಷೇತ್ರದಲ್ಲಿ ಹಣ ಕೊಡದಿದಕ್ಕೆ ಮನೆಗಳ ಸ್ಥಳಾಂತರ ಮಾಡಿರುವುದು ಬೆಳಕಿಗೆ ಬಂದಿತ್ತು. ಇದೀಗ ಇದೇ ರೀತಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರ (Aland Assembly constituency) ವ್ಯಾಪ್ತಿಯ ಗ್ರಾಮದಲ್ಲಿ ಕೂಡ ರಿಯಾಲಿಟಿ ಚೆಕ್ ಮಾಡಿದ್ದು, ಮತ್ತೊಂದು ಸಾಕ್ಷಿ ಲಭ್ಯವಾಗಿದೆ.

ಹಣ ಕೊಟ್ಟರಷ್ಟೇ ಮನೆ ಅಂತಾ ಆರೋಪಿಸಿದ್ದ ಬಿ.ಆರ್.ಪಾಟೀಲ್​​,​ ಕೆಲ ಗ್ರಾಮ ಪಂಚಾಯಿತಿ ಹೆಸರು ಉಲ್ಲೇಖ ಮಾಡಿದ್ದರು. ಅದರಲ್ಲಿ ಆಳಂದ ವಿಧಾನಸಭಾ ಕ್ಷೇತ್ರ ಕೂಡ ಒಂದು. ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ದಂಗಾಪುರ ಗ್ರಾಮ ಪಂಚಾಯಿತಿನಲ್ಲಿ 200 ಮನೆ ಹಂಚಿಕೆ ಸಂಬಂಧ ನಡೆದ ಹಣಕಾಸಿನ ವ್ಯವಹಾರದ ವಿಡಿಯೋ ಸಾಕ್ಷಿ ಲಭ್ಯವಾಗಿದೆ.

ಇದನ್ನೂ ಓದಿ: ಲಂಚದ ಆರೋಪ ಸಮರ್ಥಿಸಿದ ಬಿಆರ್ ಪಾಟೀಲ್: ‘ಟಿವಿ9’ ರಿಯಾಲಿಟಿ ಚೆಕ್​ನಲ್ಲಿ ಬಯಲಾಯ್ತು ಅಕ್ರಮದ ರಹಸ್ಯ

ಇದನ್ನೂ ಓದಿ
Image
ನೀರಿನಲ್ಲೇ ಗಂಟೆಗಟ್ಟಲೆ ಯೋಗ ಮಾಡುವ ಹಾನಗಲ್ ಯೋಗಿ!
Image
ನಂದಿನಿಗೆ ಪರಿಸರಸ್ನೇಹಿ ಪ್ಯಾಕ್: ಮೆಕ್ಕೆಜೋಳದಲ್ಲಿ ತಯಾರಾಗಲಿದೆ ಪ್ಯಾಕೆಟ್!
Image
ಬಮೂಲ್​ ನೂತನ ಅಧ್ಯಕ್ಷರಾಗಿ ಡಿಕೆ ಸುರೇಶ್​ ಆಯ್ಕೆ
Image
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್

ಇನ್ನು ಭಟ್ಟರಕಿ ಗ್ರಾಮದ ಯುವಕ 10 ಸಾವಿರ ರೂ ಹಣ ಕೊಟ್ಟಿದ್ದಾಗಿ ಹೇಳಿಕೆ ನೀಡಿದ್ದು, ಹೆಸರಿಗೆ ಗ್ರಾಮ ಸಭೆ ಮಾಡಿ ದುಡ್ಡು ಕೊಟ್ಟವರಿಗೆ ಮನೆ ಕೊಡುತ್ತಿದ್ದಾರೆ. ಹಣ ಪಡೆದು ಲಿಸ್ಟ್ ರೆಡಿ ಮಾಡಿದ್ದಾರೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಮೂಲಕ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ದುಡ್ಡು ಕೊಟ್ಟವರಿಗೆ ಮಾತ್ರ ಮನೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

ಅಫಜಲಪುರ ಕ್ಷೇತ್ರದಲ್ಲಿಯೂ ಸಹ ವಸತಿ ಇಲಾಖೆಯಡಿ ಗೋಲ್ ಮಾಲ್

ಆಳಂದ ಕ್ಷೇತ್ರದ ಜೊತೆಗೆ ಅಫಜಲಪುರ ಕ್ಷೇತ್ರದಲ್ಲಿಯೂ ಸಹ ವಸತಿ ಇಲಾಖೆಯಡಿ ಗೋಲ್ ಮಾಲ್ ನಡೆದಿರುವ ಬಗ್ಗೆ ಶಾಸಕ ಬಿ.ಆರ್.ಪಾಟೀಲ್ ಆರೋಪ ಮಾಡಿದ್ದರು, ಹೀಗಾಗಿ ಅಫಜಲಪುರ ಕ್ಷೇತ್ರದಲ್ಲಿ ನಿನ್ನೆ ಟಿವಿ9 ರಿಯಾಲಿಟಿ ಚೆಕ್ ಮಾಡಿದ್ದು, ಈ ವೇಳೆ ಫರಹತಬಾದ್ ಗ್ರಾಮ ಪಂಚಾಯತಿಯಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಅಕ್ರಮ ನಡೆದಿರುವದು ಬಟಾಬಯಲಾಗಿತ್ತು.

ಇದನ್ನೂ ಓದಿ: ಮನೆಗಳ ಹಂಚಿಕೆಗೆ ಲಂಚ ಪಡೆದ ಆರೋಪ: ಕೋಲಾಹಲ ಸೃಷ್ಟಿಸಿದ ಕಾಂಗ್ರೆಸ್ ಶಾಸಕ ಬಿಆರ್​ ಪಾಟೀಲ್ ವೈರಲ್ ಆಡಿಯೋ

ಈ ಗ್ರಾಮದಲ್ಲಿ ಅರ್ಹ ಫಲಾನುಭವಿಗಳನ್ನ ಗುರುತಿಸಿ ರಾಜೀವ್ ಗಾಂಧಿ ಯೋಜನೆಡಿ 200 ವಸತಿ ಮನೆಗಳನ್ನು ಮಂಜೂರು ಮಾಡಲಾಗಿತ್ತು. ಇನ್ನೂ ಮನೆ ಬೇಕು ಅಂದರೆ ಬಡ ಅರ್ಹ ಕುಟುಂಬದವರಿಂದ ಪ್ರತಿ ಮನೆಗೆ ಇಲ್ಲಿನ ಪಂಚಾಯತಿ ಕೆಲ ಸದಸ್ಯರು 20 ರಿಂದ 25 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು. ಆದರೆ ಯಾವ ಫಲಾನುಭವಿಗಳು ಸಹ ಹಣ ಕೊಡದೆ ಇದ್ದಾಗ ಈ ಗ್ರಾಮಕ್ಕೆ ಮಂಜೂರಾದ ಮನೆಗಳನ್ನು ಶಾಸಕ ಎಂ.ವೈ.ಪಾಟೀಲ್ ಅವರ ಲೇಟರ್ ಹೆಡ್ ಬಳಸಿ ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಹೀಗಾಗಿ ಇಲ್ಲಿನ ಬಡ ಫಲಾನುಭವಿಗಳು ಹಣ ನೀಡುತ್ತಿಲ್ಲ ಎನ್ನೋ ಕಾರಣಕ್ಕೆ ನಮ್ಮೂರಿಗೆ ಮಂಜೂರಾಗಿದ್ದ ಮನೆಗಳನ್ನೇ ಶಿಫ್ಟ್ ಮಾಡಿದ್ದಾರೆ ಅಂತ ಅಳಲು ತೊಡಿಕೊಳ್ಳುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು