ಕಲಬುರಗಿ ಮಾಜಿ ಮೇಯರ್ ಕಾರಿನಲ್ಲಿ ಪತ್ತೆಯಾಯ್ತು 2 ಕೋಟಿ ರೂ. ಹಣ

ಲೋಕಸಭಾ ಚುನಾವಣೆ ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಅಧಿಕಾರಿಗಳು ಹದ್ದಿನ ಕಣ್ಣೀಟ್ಟಿದ್ದಾರೆ. ಈ ಮಧ್ಯೆ ಕಲಬುರಗಿ ರೈಲು ನಿಲ್ದಾಣದ ಬಳಿ ಮಾಜಿ ಮೇಯರ್​ ಕಾರಿನಲ್ಲಿ ಬರೊಬ್ಬರಿ 2 ಕೋಟಿ ರೂ. ಹಣ ಪತ್ತೆಯಾಗಿದೆ. ಇನ್ನು ಹಣವನ್ನು ಯಾತಕ್ಕಾಗಿ ಸಾಗಾಟ ಮಾಡಲಾಗುತ್ತಿದ್ದು ಎನ್ನುವ ಬಗ್ಗೆ ವಿಚಾರಣೆ ನಡೆಯುತ್ತಿದೆ.

ಕಲಬುರಗಿ ಮಾಜಿ ಮೇಯರ್ ಕಾರಿನಲ್ಲಿ ಪತ್ತೆಯಾಯ್ತು 2 ಕೋಟಿ ರೂ. ಹಣ
ಕಲಬುರಗಿ ಮಾಜಿ ಮೇಯರ್ ಕಾರಿನಲ್ಲಿ ಹಣ ಪತ್ತೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Apr 27, 2024 | 5:49 PM

ಕಲಬುರಗಿ, ಏ.27: ಕಲಬುರಗಿ ಮಾಜಿ ಮೇಯರ್ ಕಾರಿನಲ್ಲಿ 2 ಕೋಟಿ ಹಣ ಪತ್ತೆಯಾದ ಘಟನೆ ನಗರದ ರೈಲು ನಿಲ್ದಾಣದ ಬಳಿ ನಡೆದಿದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ರೈಲಿನಿಂದ ಇಳಿದು ವಾಹನ ಹತ್ತುವಾಗ ದಾಳಿ ಮಾಡಿ ಹಣವನ್ನ ಜಪ್ತಿ ಮಾಡಲಾಗಿದೆ. ಇದು ಕಲಬುರಗಿ ಮಾಜಿ ಮೇಯರ್ ಅವರಿಗೆ ಸೇರಿದ ಕಾರು ಆಗಿದ್ದು, ವಶಕ್ಕೆ ಪಡೆಯಲಾಗಿದೆ. ಇನ್ನು ಹಣವನ್ನು ಯಾತಕ್ಕಾಗಿ ಸಾಗಾಟ ಮಾಡಲಾಗುತ್ತಿದ್ದು ಎನ್ನುವ ಬಗ್ಗೆ ವಿಚಾರಣೆ ನಡೆಯುತ್ತಿದೆ.

ಕಾವೇರಿ ನದಿಯಲ್ಲಿ‌ ಮುಳುಗಿ ಯುವಕ ಸಾವು

ಕೊಡಗು: ಜಿಲ್ಲೆಯ ಕುಶಾಲನಗರ ತಾಲೂಕಿನ ವಾಲ್ನೂರು ಗ್ರಾಮದ ಬಳಿ ಕಾವೇರಿ ನದಿಯಲ್ಲಿ‌ ಮುಳುಗಿ ನಿಶಾಂತ್ (24)ಎಂಬುವವರು ಸಾವನ್ನಪ್ಪಿದ್ದಾರೆ. ಸ್ನೇಹಿತರೊಂದಿಗೆ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ವೇಳೆ ಈಜು ಬಾರದೆ‌ ನದಿಯಲ್ಲಿ‌ಮುಳುಗಿ ಕೊನೆಯುಸಿರೆಳೆದಿದ್ದಾರೆ. ಇದೀಗ ದುಬಾರೆ ರಾಫ್ಟಿಂಗ್ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ಮೃತದೇಹಕ್ಕಾಗಿ ಶೋಧಕಾರ್ಯ ನಡೆದಿದೆ. ಈ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಸುಧಾಕರ್ ಆಪ್ತನ ಮನೆ ಮೇಲೆ ಐಟಿ ದಾಳಿ, ಕೋಟ್ಯಾಂತರ ರೂ. ಹಣ ಪತ್ತೆ

ಲಾರಿ, ಬೈಕ್ ನಡುವೆ ರಸ್ತೆ ಅಪಘಾತ; ಪತಿ ಸಾವು, ಪತ್ನಿಗೆ ಗಾಯ

ಕಲಬುರಗಿ: ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಪತಿ ಸಾವನ್ನಪ್ಪಿದ್ದು, ಪತ್ನಿಗೆ ಗಂಭೀರ ಗಾಯವಾದ ಘಟನೆ ಆಳಂದ ತಾಲೂಕಿನ ಢೋಗಿ ನಾಲಾ ಬಳಿ‌ ನಡೆದಿದೆ. ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ನಿವಾಸಿ ಅರ್ಜುನ್ ಮೃತರು. ಮಹಾರಾಷ್ಟ್ರದ ಪುಣೆಯಿಂದ ಯಾದಗಿರಿ ಕಡೆಗೆ ಬೈಕ್ ಮೇಲೆ ಹೊರಟಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ನರೋಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:37 pm, Sat, 27 April 24

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us