AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಹಣೆಗೆ ಕುಂಕುಮ ಇಡಲು ನಿರಾಕರಿಸಿದ ವಿಪಕ್ಷ ನಾಯಕ ಆರ್.ಅಶೋಕ

ವಿಪಕ್ಷ ನಾಯಕ ಆರ್.ಅಶೋಕ ಅವರು ತಮ್ಮ ಹಣೆಗೆ ಕುಂಕುಮ ಹಾಕಲು ನಿರಾಕರಿಸಿದ ಘಟನೆ ನಡೆದಿದೆ. ಸಿದ್ದರಾಮಯ್ಯ ಹಿಂದೂ ವಿರೋಧಿ, ಕುಂಕುಮ ಹಾಕಲ್ಲ ಎಂದೆಲ್ಲಾ ಟೀಕಿಸುವ ಬಿಜೆಪಿ ನಾಯಕರು ಇದೀಗ ಇದಕ್ಕೆ ಏನು ಹೇಳುತ್ತಾರೆ?

ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Mar 24, 2024 | 8:27 PM

Share

ಕಲಬುರಗಿ, ಮಾ.24: ವಿಪಕ್ಷ ನಾಯಕ ಆರ್.ಅಶೋಕ (R Ashoka) ಅವರು ತಮ್ಮ ಹಣೆಗೆ ಕುಂಕುಮ ಹಾಕಲು ನಿರಾಕರಿಸಿದ ಘಟನೆ ನಡೆದಿದೆ. ಕಲಬುರಗಿ (Kalaburagi) ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಹಿರಿಯ ಮುಖಂಡರೊಬ್ಬರು ಕುಂಕುಮ ಹಚ್ಚಲು ಮುಂದಾದಾಗ ನಿರಾಕರಿಸಿದ್ದಾರೆ. ಸಿದ್ದರಾಮಯ್ಯ (Siddaramaiah) ಹಿಂದೂ ವಿರೋಧಿ, ಕೇಸರಿ ಕಂಡರೆ ಆಗಲ್ಲ, ಕೇಸರಿ ಶಲ್ಯ ಧರಿಸಲ್ಲ, ಕುಂಕುಮ ಹಾಕಲ್ಲ ಎಂದೆಲ್ಲಾ ಟೀಕಿಸುವ ರಾಜ್ಯದ ಬಿಜೆಪಿ ನಾಯಕರು ತಮ್ಮ ನಾಯಕನ ಈ ನಡೆಗೆ ಏನು ಹೇಳುತ್ತಾರೆ?

ಈ ಹಿಂದೆ ಸದನದಲ್ಲಿ ತಮ್ಮನ್ನು ಹೊಗಳುವ ಭರದಲ್ಲಿ ಬಿಜೆಪಿಯನ್ನು ಬೆಂಬಲಿಸುವ ಬಜರಂಗದಳದ ಕಾರ್ಯಕರ್ತರ ವಿರುದ್ಧ “ನಾನು ಗೃಹಸಚಿವ ಆಗಿದ್ದಾಗ ಪಬ್‌ನಲ್ಲಿ ಗಲಾಟೆ ಆದಾಗ ಗೂಂಡಾ ಕಾಯ್ದೆ ಹಾಕಿದ್ದೆ” ಎಂದು ಹೇಳಿದ್ದರು. ಆ ಮೂಲಕ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತಿದ್ದ ಅವರು ಬಜರಂಗದಳ ಕಾರ್ಯಕರ್ತರ ಕ್ಷಮೆ ಕೇಳಿದ್ದರು. ಇದೀಗ ಕುಂಕುಮ ಹಣೆಗೆ ಇಡಲು ನಿರಾಕರಿಸಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಭುಗಿಲೆದ್ದ ಆಕ್ರೋಶ: ಕೊನೆಗೂ ಬಜರಂಗದಳ ಕಾರ್ಯಕರ್ತರಲ್ಲಿ‌ ಕ್ಷಮೆಯಾಚಿಸಿದ ಅಶೋಕ್​​!

ಕಚೇರಿಗೆ ಆಗಮಿಸಿದ ಅಶೋಕ್ ಅವರಿಗೆ ಬಿಜೆಪಿ ಮುಖಂಡರು ಹಾರ ಹಾಕಿ ಸ್ವಾಗತಿಸಲು ಮುಂದಾದರು. ಈ ವೇಳೆ ಎರಡು ಹಾರಗಳನ್ನು ತಾವು ಹಾಕಿಕೊಳ್ಳದೆ ಬಿಜೆಪಿ ಹಿರಿಯ ಮುಖಂಡ ಡಾ ವಿಶ್ವನಾಥ್ ಪವಾರ್ ಮತ್ತು ಇನ್ನೊಬ್ಬರಿಗೆ ಹಾಕಿ ಗೌರವಿಸಿದರು. ಈ ನಡುವೆ ಡಾ ವಿಶ್ವನಾಥ್ ಪವಾರ್ ಅವರು ಅಶೋಕ ಅವರ ಹಣೆಗೆ ಕುಂಕುಮ ಇಡಲು ಮುಂದಾಗಿದ್ದಾರೆ. ಆದರೆ ಅಶೋಕ ಅವರು ಕುಂಕುಮ ಹಚ್ಚದಂತೆ ತಡೆದಿದ್ದಾರೆ. ಬಳಿಕ ವಿಶ್ವನಾಥ್ ಶಾಲು ಹಾಕಿ ಸನ್ಮಾನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:23 pm, Sun, 24 March 24

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?