Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಪಿಎಸ್​ಐ ನೇಮಕಾತಿ ಹಗರಣ; ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Karnataka PSI Recruitment Scam: ಪಿಎಸ್​ಐ ನೇಮಕಾತಿ ಹಗರಣದಲ್ಲಿ ಕಳೆದ 18 ದಿನಗಳಿಂದ ನಾಪತ್ತೆಯಾಗಿದ್ದ ಗ್ಯಾಂಗ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಲಾಗಿದೆ.

PSI Recruitment Scam: ಪಿಎಸ್​ಐ ನೇಮಕಾತಿ ಹಗರಣ; ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಪಿಎಸ್​ಐ ನೇಮಕಾತಿ ಹಗರಣದ ಆರೋಪಿ ದಿವ್ಯಾ ಹಾಗರಗಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 27, 2022 | 4:46 PM

ಕಲಬುರ್ಗಿ: 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು (Anticipatory Bail) ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಈ ಪ್ರಕರಣದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಏ. 29ಕ್ಕೆ ಮುಂದೂಡಿದೆ. ನಿರೀಕ್ಷಣಾ ಜಾಮೀನು ಕೋರಿ ಕಲಬುರಗಿ ಜಿಲ್ಲಾ 1ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಐವರು ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಪಿ.ಎಸ್.ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ (Karnataka PSI Recruitment  Scam) ಆರೋಪಿಯಾಗಿರುವ ದಿವ್ಯಾ ಹಾಗರಗಿ ಮತ್ತು ತಂಡದವರ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಐಡಿ ತಕರಾರು ಅರ್ಜಿ ಸಲ್ಲಿಸಿದ್ದರು. ದಿವ್ಯಾ ಹಾಗರಗಿ, ಕಾಶಿನಾಥ್, ಮಂಜುನಾಥ ಮೇಳಕುಂದಿ, ಅರ್ಚನಾ ಹೊನಗೇರಿ, ಸುನಂದಾ ಅವರ ಜಾಮೀನಿಗೆ ಸಿಐಡಿ ತಕರಾರು ಮಾಡಿತ್ತು. ಇದು ಸಂಘಟಿತ ಅಪರಾಧವಾಗಿದ್ದು, ಜಾಮೀನು ಕೊಟ್ಟರೆ ಸಾಕ್ಷಿ ನಾಶ ಪಡಿಸುವ ಸಾಧ್ಯತೆ ಇದೆ. ಹೀಗಾಗಿ ಈ ಐವರಿಗೆ ನಿರೀಕ್ಷಣಾ ಜಾಮೀನು ನೀಡಬೇಡಿ ಎಂದು ಕಲಬುರಗಿಯ ಜಿಲ್ಲಾ ಒಂದನೇ ಹೆಚ್ಚುವರಿ ನ್ಯಾಯಾಲಯಕ್ಕೆ ಸಿಐಡಿ ತಕರಾರು ಅರ್ಜಿ ಸಲ್ಲಿಸಿತ್ತು.

ಕಳೆದ 18 ದಿನಗಳಿಂದ ನಾಪತ್ತೆಯಾಗಿರೋ ಗ್ಯಾಂಗ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಲಾಗಿದೆ. ಕಲಬುರಗಿ ಜಿಲ್ಲಾ ಬಿಜೆಪಿ ನಾಯಕಿಯಾಗಿರುವ ದಿವ್ಯಾ ಹಾಗರಗಿ ಪಿಎಸ್​ಐ ಪರೀಕ್ಷಾ ಅಕ್ರಮ ನಡೆದಿದ್ದ ಜ್ಞಾನಜ್ಯೋತಿ ಇಂಗ್ಲಿಷ್ ಶಾಲೆಯ ಒಡತಿಯಾಗಿದ್ದಾರೆ. ಕೋರ್ಟ್​ನಿಂದ ಅರೆಸ್ಟ್ ವಾರಂಟ್ ಜಾರಿ ಹಿನ್ನೆಲೆಯಲ್ಲಿ ಸಂಕಷ್ಟ ಎದುರಿಸಿದ್ದ ಅವರು 18 ದಿನಗಳಿಂದ ತಲೆಮರೆಸಿಕೊಂಡಿದ್ದಾರೆ. ದಿವ್ಯಾ ಹಾಗರಗಿ ಸೇರಿದಂತೆ 6 ಆರೋಪಿಗಳಿಗೆ ವಾರಂಟ್​ ಜಾರಿ ಮಾಡಲಾಗಿದೆ. ಇದೀಗ ತಾವೇ ಪೊಲೀಸರಿಗೆ ಶರಣಾಗಬೇಕಾದ ಅನಿವಾರ್ಯತೆ ಎದುರಾಗಿದೆ. ಒಂದು ವಾರದೊಳಗೆ ಸಿಐಡಿ ಮುಂದೆ ಹಾಜರಾಗುವಂತೆ ಆರೋಪಿಗಳಿಗೆ ಕಲಬುರಗಿಯ 3ನೇ JMFC ಕೋರ್ಟ್​ ಸೂಚನೆ ನೀಡಿದೆ.

545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ವಿಚಾರವಾಗಿ ಒಬ್ಬೊಬ್ಬರಿಗೆ‌ ಒಂದೊಂದು ರೀತಿಯ ರೇಟ್ ಫಿಕ್ಸ್​ ಮಾಡಿದ್ದರು ಎಂಬುದು ತನಿಖೆ ವೇಳೆ ಬಯಲಾಗಿದೆ. ಈ ಪ್ರಕರಣದ ಕಿಂಗ್​ಪಿನ್ ರುದ್ರಗೌಡ ಪಾಟೀಲ್​ನಿಂದ ರೇಟ್ ಕಾರ್ಡ್ ಫಿಕ್ಸ್ ಮಾಡಿದ್ದರು. ತಮಗೆ ಬೇಕಾದವರು, ತಮ್ಮ ಜಾತಿಯವರಿಗೆ ಕಡಿಮೆ ಹಣ ಫಿಕ್ಸ್ ಮಾಡಿದ್ದರು. ಗನ್​ಮ್ಯಾನ್ ಹಯ್ಯಾಳಿ ದೇಸಾಯಿರಿಂದ ಕೇವಲ 30 ಲಕ್ಷ ಪಡೆದಿದ್ದರು. ಶಾಸಕರ ಬಳಿ ಕೆಲಸ ಮಾಡುತ್ತಿದ್ದರಿಂದ ಕಡಿಮೆ ಹಣ ಫಿಕ್ಸ್ ಮಾಡಲಾಗಿತ್ತು. ತಮ್ಮದೇ ಜಾತಿಯ ಕೆಲ ಅಭ್ಯರ್ಥಿಗಳಿಗೆ ಕೂಡಾ ಕಡಿಮೆ ಹಣ ಪಡೆದಿದ್ದರು. ಗರಿಷ್ಠ 60 ಲಕ್ಷವರೆಗೆ ಡೀಲ್ ಮಾಡಿಕೊಂಡಿರುವ ಆರೋಪಿಗಳು ಅಭ್ಯರ್ಥಿಗಳಿಂದ ನೇರವಾಗಿ ಹಣ ಪಡೆದಿದ್ದರು. ಈ ಅಕ್ರಮದಲ್ಲಿ ಸಿಲುಕಬಾರದು ಎಂದು ಬ್ಯಾಂಕ್ ವಹಿವಾಟಿನ ಬದಲಾಗಿ ನೇರವಾಗಿ ಹಣ ಪಡೆದಿದ್ದರು.

545 ಪಿಎಸ್​​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣದಲ್ಲಿ ಈವರೆಗೆ 7 ಅಭ್ಯರ್ಥಿಗಳು ಸೇರಿದಂತೆ 16 ಆರೋಪಿಗಳನ್ನು ಬಂಧಿಸಲಾಗಿದೆ. ಪರೀಕ್ಷೆಯಲ್ಲಿ ಉತ್ತರ ಹೇಳಿದ ಆರೋಪಿಗಳಿಗಾಗಿ ಸಿಐಡಿ ಶೋಧ ನಡೆಸಿದೆ. ಲಾಡ್ಜ್​ಗಳಲ್ಲಿ ಕುಳಿತು ಉತ್ತರ ಹೇಳುತ್ತಿದ್ದ ವಿಷಯ ತಜ್ಞರು ಅಕ್ರಮದಲ್ಲಿ ಕೋಚಿಂಗ್ ಕೇಂದ್ರ ನಡೆಸುವವರು ಇರುವ ಶಂಕೆ ವ್ಯಕ್ತವಾಗಿದೆ. ಬಂಧಿತ ಕಿಂಗ್​ಪಿನ್​ಗಳಿಂದ ಸಿಐಡಿ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಮತ್ತೊಂದು ದಿವ್ಯ ಕೊಡುಗೆ! ’6 ವರ್ಷ ಹಿಂದೆಯೇ ದಿವ್ಯಾ ಹಾಗರಗಿ ಮೂಲಕ 16 ಪಿಎಸ್​ಐಗಳು ಆಯ್ಕೆಯಾಗಿದ್ದಾರೆ ಮಹಾಸ್ವಾಮಿ!’

PSI Recruitment Scam: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ -ಬಿತ್ತು ಮೊದಲ ವಿಕೆಟ್, ಹಿರಿಯ ಐಪಿಎಸ್ ಅಧಿಕಾರಿ ಎತ್ತಂಗಡಿ

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು