AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ದರ್ಗಾದಲ್ಲಿ ಶಿವಲಿಂಗ ಪೂಜೆ, ಎಡಿಜಿಪಿ ಅಲೋಕ್​ ಕುಮಾರ್​ರಿಂದ ಭದ್ರತೆ ಪರಿಶೀಲನೆ

ಕಳೆದ ವರ್ಷ ಶಿವರಾತ್ರಿಯಂದು ಪೂಜೆ ಸಮಯದಲ್ಲಿ ದೊಡ್ಡ ಮಟ್ಟದ ಘರ್ಷಣೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಳ್ಳುತ್ತಿದ್ದಾರೆ. ಖುದ್ದು ಎಡಿಜಿಪಿ ಅಲೋಕ್ ಕುಮಾರ್ ಅವರೇ ಭದ್ರತೆ ಪರಿಶೀಲಿಸಲಿದ್ದಾರೆ.

ಕಲಬುರಗಿ: ದರ್ಗಾದಲ್ಲಿ ಶಿವಲಿಂಗ ಪೂಜೆ, ಎಡಿಜಿಪಿ ಅಲೋಕ್​ ಕುಮಾರ್​ರಿಂದ ಭದ್ರತೆ ಪರಿಶೀಲನೆ
ಅಳಂದದಲ್ಲಿ ಪೊಲೀಸರಿಂದ ಪಥಸಂಚಲನ
TV9 Web
| Edited By: |

Updated on:Feb 16, 2023 | 9:57 AM

Share

ಕಲಬುರಗಿ: ಆಳಂದ (Aland) ಪಟ್ಟಣದಲ್ಲಿರುವ ಸುಪ್ರಸಿದ್ದ ಲಾಡ್ಲೇ ಮಶಾಕ್ ದರ್ಗಾದಲ್ಲಿ (Hazrath Ladle Mashaikh) ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇಂದು (ಫೆ. 16)ಪಟ್ಟಣಕ್ಕೆ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಭೇಟಿ ನೀಡಿದ್ದು, ಭದ್ರತೆ ಪರಿಶೀಲಿಸಲಿದ್ದಾರೆ. ಜತೆಗೆ, ಪೊಲೀಸರು ಪಥ ಸಂಚಲನವನ್ನೂ ನಡೆಸಲಿದ್ದಾರೆ. ದರ್ಗಾದಲ್ಲಿರೋ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ಹಬ್ಬದ ದಿನ ಪೂಜೆ ಸಲ್ಲಿಸಲಾಗುತ್ತದೆ. ಅದೇ ದಿನ ದರ್ಗಾದಲ್ಲಿ ಉರೂಸ್ ಕೂಡ ಇರುವುದು ಕುತೂಹಲಕ್ಕೆ ಕಾರಣವಾಗಿದೆ.

ಕಳೆದ ವರ್ಷ ಶಿವರಾತ್ರಿಯಂದು ಪೂಜೆ ಸಮಯದಲ್ಲಿ ದೊಡ್ಡ ಮಟ್ಟದ ಘರ್ಷಣೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಳ್ಳುತ್ತಿದ್ದಾರೆ. ಖುದ್ದು ಎಡಿಜಿಪಿ ಅಲೋಕ್ ಕುಮಾರ್ ಅವರೇ ಭದ್ರತೆ ಪರಿಶೀಲಿಸಲಿದ್ದಾರೆ.

ಶಿವತರಾತ್ರಿಯಂದು ಪೂಜೆಗೆ ಅನುಮತಿ ದೊರೆತ ಕಾರಣ ಹಿಂದೂ ಸಂಘಟನೆಗಳ ಮುಖಂಡರು ಈಗಾಗಲೇ ಶಿವಮಾಲೆ ಅಭಿಯಾನವನ್ನು ಆರಂಭಿಸಿದ್ದಾರೆ. ಕಲಬುರಗಿ ನಗರದ ರಾಮಮಂದಿರದಲ್ಲಿ ಹೋಮ, ಹವನ ಮತ್ತು ಶಿವಮಾಲೆಯನ್ನು ಧರಿಸುವ ಪ್ರಕ್ರಿಯೆ ಚುರುಕುಗೊಂಡಿದೆ.

ಇದನ್ನೂ ಓದಿ: ಶಿವಲಿಂಗ ಪೂಜೆಗೆ ಹಸಿರು ನಿಶಾನೆ ತೋರಿದ ಕೋರ್ಟ್​: ಶನಿವಾರ ಶಿವರಾತ್ರಿಯಂದು ಪೂಜೆ ವಿಚಾರವಾಗಿ ಮತ್ತೊಮ್ಮೆ ಭುಗಿಲೇಳುತ್ತಾ ಧರ್ಮ ದಂಗಲ್?

ಕಳೆದ ವರ್ಷ ನಡೆದಿತ್ತು ಭಾರೀ ಗಲಭೆ

ಶಿವಲಿಂಗವನ್ನು ಶುದ್ಧೀಕರೀಸುತ್ತೇವೆ ಅಂತ ಹಿಂದೂ ಸಂಘಟನೆಗಳು 2022 ರ ಶಿವರಾತ್ರಿ ದಿನ ಪೂಜೆಗೆ ಮುಂದಾಗಿದ್ದರು. ಆದರೆ, ದರ್ಗಾದೊಳಗೆ ಪೂಜೆಗೆ ಮುಸ್ಲಿಂ ಸಮಾಜದವರು ವಿರೋಧಿಸಿದ್ದರು. ಕೊನೆಗೆ ಜಿಲ್ಲಾಡಳಿತ ಸಂಧಾನ ನಡೆಸಿ, ಕೆಲವೇ ಕೆಲವು ಜನರಿಗೆ ಪೂಜೆಗೆ ಅವಕಾಶ ನೀಡಿತ್ತು. ಆದರೆ ಪೂಜೆಗೆ ಹೋಗಿದ್ದ ಕೇಂದ್ರ ಸಚಿವ ಭಗವಂತ ಖೂಬಾ ಸೇರಿದಂತೆ ಸ್ವಾಮೀಜಿಗಳು, ಜನಪ್ರತಿನಿಧಿಗಳು ಇದ್ದ ಕಾರುಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ದರ್ಗಾದ ಹೊರ ವಾತಾವರಣದಲ್ಲಿ ದೊಡ್ಡ ಮಟ್ಟದ ಘರ್ಷಣೆ ಉಂಟಾಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:46 am, Thu, 16 February 23

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!