AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ದರ್ಗಾದಲ್ಲಿ ಶಿವಲಿಂಗ ಪೂಜೆ, ಎಡಿಜಿಪಿ ಅಲೋಕ್​ ಕುಮಾರ್​ರಿಂದ ಭದ್ರತೆ ಪರಿಶೀಲನೆ

ಕಳೆದ ವರ್ಷ ಶಿವರಾತ್ರಿಯಂದು ಪೂಜೆ ಸಮಯದಲ್ಲಿ ದೊಡ್ಡ ಮಟ್ಟದ ಘರ್ಷಣೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಳ್ಳುತ್ತಿದ್ದಾರೆ. ಖುದ್ದು ಎಡಿಜಿಪಿ ಅಲೋಕ್ ಕುಮಾರ್ ಅವರೇ ಭದ್ರತೆ ಪರಿಶೀಲಿಸಲಿದ್ದಾರೆ.

ಕಲಬುರಗಿ: ದರ್ಗಾದಲ್ಲಿ ಶಿವಲಿಂಗ ಪೂಜೆ, ಎಡಿಜಿಪಿ ಅಲೋಕ್​ ಕುಮಾರ್​ರಿಂದ ಭದ್ರತೆ ಪರಿಶೀಲನೆ
ಅಳಂದದಲ್ಲಿ ಪೊಲೀಸರಿಂದ ಪಥಸಂಚಲನ
Follow us
TV9 Web
| Updated By: Ganapathi Sharma

Updated on:Feb 16, 2023 | 9:57 AM

ಕಲಬುರಗಿ: ಆಳಂದ (Aland) ಪಟ್ಟಣದಲ್ಲಿರುವ ಸುಪ್ರಸಿದ್ದ ಲಾಡ್ಲೇ ಮಶಾಕ್ ದರ್ಗಾದಲ್ಲಿ (Hazrath Ladle Mashaikh) ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇಂದು (ಫೆ. 16)ಪಟ್ಟಣಕ್ಕೆ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಭೇಟಿ ನೀಡಿದ್ದು, ಭದ್ರತೆ ಪರಿಶೀಲಿಸಲಿದ್ದಾರೆ. ಜತೆಗೆ, ಪೊಲೀಸರು ಪಥ ಸಂಚಲನವನ್ನೂ ನಡೆಸಲಿದ್ದಾರೆ. ದರ್ಗಾದಲ್ಲಿರೋ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ಹಬ್ಬದ ದಿನ ಪೂಜೆ ಸಲ್ಲಿಸಲಾಗುತ್ತದೆ. ಅದೇ ದಿನ ದರ್ಗಾದಲ್ಲಿ ಉರೂಸ್ ಕೂಡ ಇರುವುದು ಕುತೂಹಲಕ್ಕೆ ಕಾರಣವಾಗಿದೆ.

ಕಳೆದ ವರ್ಷ ಶಿವರಾತ್ರಿಯಂದು ಪೂಜೆ ಸಮಯದಲ್ಲಿ ದೊಡ್ಡ ಮಟ್ಟದ ಘರ್ಷಣೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಳ್ಳುತ್ತಿದ್ದಾರೆ. ಖುದ್ದು ಎಡಿಜಿಪಿ ಅಲೋಕ್ ಕುಮಾರ್ ಅವರೇ ಭದ್ರತೆ ಪರಿಶೀಲಿಸಲಿದ್ದಾರೆ.

ಶಿವತರಾತ್ರಿಯಂದು ಪೂಜೆಗೆ ಅನುಮತಿ ದೊರೆತ ಕಾರಣ ಹಿಂದೂ ಸಂಘಟನೆಗಳ ಮುಖಂಡರು ಈಗಾಗಲೇ ಶಿವಮಾಲೆ ಅಭಿಯಾನವನ್ನು ಆರಂಭಿಸಿದ್ದಾರೆ. ಕಲಬುರಗಿ ನಗರದ ರಾಮಮಂದಿರದಲ್ಲಿ ಹೋಮ, ಹವನ ಮತ್ತು ಶಿವಮಾಲೆಯನ್ನು ಧರಿಸುವ ಪ್ರಕ್ರಿಯೆ ಚುರುಕುಗೊಂಡಿದೆ.

ಇದನ್ನೂ ಓದಿ: ಶಿವಲಿಂಗ ಪೂಜೆಗೆ ಹಸಿರು ನಿಶಾನೆ ತೋರಿದ ಕೋರ್ಟ್​: ಶನಿವಾರ ಶಿವರಾತ್ರಿಯಂದು ಪೂಜೆ ವಿಚಾರವಾಗಿ ಮತ್ತೊಮ್ಮೆ ಭುಗಿಲೇಳುತ್ತಾ ಧರ್ಮ ದಂಗಲ್?

ಕಳೆದ ವರ್ಷ ನಡೆದಿತ್ತು ಭಾರೀ ಗಲಭೆ

ಶಿವಲಿಂಗವನ್ನು ಶುದ್ಧೀಕರೀಸುತ್ತೇವೆ ಅಂತ ಹಿಂದೂ ಸಂಘಟನೆಗಳು 2022 ರ ಶಿವರಾತ್ರಿ ದಿನ ಪೂಜೆಗೆ ಮುಂದಾಗಿದ್ದರು. ಆದರೆ, ದರ್ಗಾದೊಳಗೆ ಪೂಜೆಗೆ ಮುಸ್ಲಿಂ ಸಮಾಜದವರು ವಿರೋಧಿಸಿದ್ದರು. ಕೊನೆಗೆ ಜಿಲ್ಲಾಡಳಿತ ಸಂಧಾನ ನಡೆಸಿ, ಕೆಲವೇ ಕೆಲವು ಜನರಿಗೆ ಪೂಜೆಗೆ ಅವಕಾಶ ನೀಡಿತ್ತು. ಆದರೆ ಪೂಜೆಗೆ ಹೋಗಿದ್ದ ಕೇಂದ್ರ ಸಚಿವ ಭಗವಂತ ಖೂಬಾ ಸೇರಿದಂತೆ ಸ್ವಾಮೀಜಿಗಳು, ಜನಪ್ರತಿನಿಧಿಗಳು ಇದ್ದ ಕಾರುಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ದರ್ಗಾದ ಹೊರ ವಾತಾವರಣದಲ್ಲಿ ದೊಡ್ಡ ಮಟ್ಟದ ಘರ್ಷಣೆ ಉಂಟಾಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:46 am, Thu, 16 February 23

‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ