AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಪಥಸಂಚನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರಿಗೆ ಬಿಗ್ ರಿಲೀಫ್: ಸರ್ಕಾರಕ್ಕೆ ಹಿನ್ನಡೆ

ಆರ್​​ಎಸ್​​​ ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ ಅಮಾನತುಗೊಂಡಿದ್ದ ಯಾದಗಿರಿಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಶಿಕ್ಷಕರರಾದ ಗುರುರಾಜ್ ಜೋಷಿ ಹಾಗೂ ಅಣ್ಣಾ ಸಾಹೇಬ್ ದೇಶಮುಖ ಅವರ ಅಮಾನತು ರಾಜಕೀಯ ಸ್ವರೂಪ ಪಡೆದುಕೊಂಡು ಕೊನೆಗೆ ಕಾನೂನು ಹೋರಾಟ ನಡೆದಿದ್ದು, ಇದರಲ್ಲಿ ಅಂತಿಮವಾಗಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.

RSS ಪಥಸಂಚನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರಿಗೆ ಬಿಗ್ ರಿಲೀಫ್: ಸರ್ಕಾರಕ್ಕೆ ಹಿನ್ನಡೆ
ಅಮಾನತುಗೊಂಡಿದ್ದ ಶಿಕ್ಷಕರು
ದತ್ತಾತ್ರೇಯ ಪಾಟೀಲ್​
| Edited By: |

Updated on: Sep 03, 2026 | 5:39 PM

Share

ಕಲಬುರಗಿ, (ಸೆಪ್ಟೆಂಬರ್ 03): ಆರ್​​​ಎಸ್​​ಎಸ್​ ಪಥಸಂಚಲನದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಇಬ್ಬರು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಅಮಾನತುಗೊಳಿಸಿದ್ದ ಆದೇಶಕ್ಕೆ ಕಲಬುರಗಿ ಕೆಎಟಿ (ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ) ತಡೆ ನೀಡಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಶಿಕ್ಷಕರರಾದ ಗುರುರಾಜ್ ಜೋಷಿ ಹಾಗೂ ಅಣ್ಣಾ ಸಾಹೇಬ್ ದೇಶಮುಖ ಅವರ ಅಮಾನತು ಆದೇಶಕ್ಕೆ ಇಂದು (ಸೆಪ್ಟೆಂಬರ್ 03) ಕೆಎಟಿ ತಡೆಯಾಜ್ಞೆ ನೀಡಿದೆ.

ಕಳೆದ 2025ರ ಅಕ್ಟೋಬರ್ 10ರಂದಯ ಜರುಗಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥ ಸಂಚಲನದಲ್ಲಿ ಜಿಲ್ಲೆಯ ಹುಣಸಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಗುರುರಾಜ ಜೋಶಿ ಹಾಗೂ ಕುಪ್ಪಿ ಶಾಲೆಯ ಶಿಕ್ಷಕ ಅಣ್ಣಾ ಸಾಹೇಬ ದೇಶಮುಖ ಗಣಾವೇಶ ಧರಿಸಿ ಪಾಲ್ಗೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ, ಶಿಕ್ಷಕರನ್ನು ಅಮಾನತು ಮಾಡುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಶಾಲಾ ಸಾಕ್ಷರತಾ ಇಲಾಖೆ ಡಿಡಿ ಚನ್ನಬಸ್ಸಪ್ಪ ಮಧೋಳ ಕಳೆದ ಆಗಸ್ಟ್ 20ರಂದು ಈ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶಿಸಿದ್ದರು. ಇದು ರಾಜಕೀಯ ಹಗ್ಗಜಗ್ಗಾಟಕ್ಕೂ ಕಾರಣವಾಗಿದ್ದು, ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.

ಇದನ್ನೂ ನೋಡಿ: RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರ ಸಸ್ಪೆಂಡ್: ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ

ಇನ್ನು ಈ ಅಮಾನತು ಆದೇಶ ಪ್ರಶ್ನಿಸಿ ಇಬ್ಬರು ಶಿಕ್ಷಕರು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದ ಕಲಬುರಗಿ ವಿಭಾಗದಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆ ನಡೆಸಿದ ಕೆಎಟಿ ಶಿಕ್ಷಕರ ಅಮಾನತು ಆದೇಶಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ. ಹೀಗಾಗಿ ಇಬ್ಬರು ಶಿಕ್ಷಕರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಪ್ರಕರಣದ ಹಿನ್ನೆಲೆ

ಕಳೆದ ವರ್ಷ ಅ.12ರಂದು ವಿಜಯಪುರ ಜಿಲ್ಲೆ ತಾಳಿಕೋಟೆಯಲ್ಲಿ ಹಾಗೂ 2025 ಅ.10ರಂದು ಹುಣಸಗಿಯಲ್ಲಿ ನಡೆದಿದ್ದ ಪಥಸಂಚಲನದಲ್ಲಿ ಭಾಗಿಯಾಗಿದ್ದರು ಎಂಬ ಆರೋಪ ಇತ್ತು. ಇದನ್ನು ವರದಿಯಾಧರಿಸಿ, ಇಲಾಖೆ ಕಾರಣ ಕೇಳಿ ಶಿಕ್ಷಕರಿಬ್ಬರಿಗೆ ನೋಟಿಸ್‌ ನೀಡಿತ್ತು.ಸರ್ಕಾರಿ ನೌಕರರಾದ ಇವರು ಕರ್ತವ್ಯಲೋಪ ಎಸಗಿದ್ದಾರೆ ಎಂದು ಆರೋಪಿಸಿ, ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಜುಮ್ಮಣ್ಣ ಗುಡಿಮನಿ, ಆಗಿನ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಪ್ರಿಯಾಂಕ ಖರ್ಗೆ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ದೂರಿದ್ದರು. ಸರ್ಕಾರಿ ನೌಕರರು ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂತಹ ಯಾವುದೇ ಸಂಘ ಸಂಸ್ಥೆಗಳ ಸದಸ್ಯರಾಗಿರುವಂತಿಲ್ಲ, ಚಳವಳಿಯಲ್ಲಿ ಭಾಗವಹಿಸುವಂತಿಲ್ಲ ಎಂದು ಇಲಾಖೆ ನೋಟಿಸ್‌ ನೀಡಿತ್ತು. ಅಲ್ಲದೇ ಸಚಿವ ಮಧು ಬಂಗಾರಪ್ಪ ಸೂಚನೆ ಮೇರೆಗೆ, ಕಲಬುರಗಿ ಅಪರ ಆಯುಕ್ತರ ಕಚೇರಿ ಕ್ರಮಕ್ಕೆ ಸೂಚಿಸಿತ್ತು. ಕಾರಣ ಕೇಳಿ ನೋಟಿಸಿಗೆ ಉತ್ತರಿಸಿದ್ದ ಶಿಕ್ಷಕರಾದ ಗುರುರಾಜ ಜೋಶಿ ಹಾಗೂ ಅಣ್ಣಾಸಾಹೇಬ ದೇಶಮುಖ, ಆರ್‌ಎಸ್‌ಎಸ್‌ ಪಥಸಂಚಲನವು ಕೆಲಸದ ವೇಳೆಯಲ್ಲಿ ನಡೆದಿಲ್ಲ, ಅದು ರಾಜಕೀಯ ಕಾರ್ಯಕ್ರಮ ಆಗಿರಲಿಲ್ಲ, ಕಾರ್ಯಕ್ರಮ ರವಿವಾರ ನಡೆದಿದ್ದು, ಸಾಂಸ್ಕೃತಿಕ ಕಾರ್ಯಕ್ರಮವಾಗಿದ್ದರಿಂದ ಭಾಗವಹಿಸಿದ್ದೇವು ಎಂದು ತಿಳಿಸಿದ್ದರು.ಆದ್ರೆ, ಈ ಉತ್ತರ ಸಮಂಜಸವಲ್ಲ ಎಂಬ ಕಾರಣ ನೀಡಿ, ‘ಜವಾಬ್ದಾರಿಯುತ ಶಿಕ್ಷಕರ ಹುದ್ದೆಯಲ್ಲಿದ್ದು, ಸಮಾಜಕ್ಕೆ ಮತ್ತು ಶಿಕ್ಷಣ ಇಲಾಖೆಗೆ ಮಾದರಿ ಆಗಬೇಕಾದ ನೀವು, ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿ, ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳನ್ನು ಉಲ್ಲಂಘಿಸಿ, ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ, ಇಲಾಖಾ ವಿಚಾರಣಾ ಕಾಯ್ದಿರಿಸಿ ಅಮಾನತು ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us