AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆದಷ್ಟು ಬಯಲಾಗ್ತಿದೆ KEA ಪರೀಕ್ಷೆ ಅಕ್ರಮ; ಇಬ್ಬರು ಉಪನ್ಯಾಸಕರು ಸಿಐಡಿ ವಶಕ್ಕೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದ FDA ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪನ್ಯಾಸಕರನ್ನು ಸಿಐಡಿ(CID) ವಶಕ್ಕೆ ಪಡೆದಿದ್ದಾರೆ. ಅಫಜಲಪುರ ಸರ್ಕಾರಿ ಪಿಯು ಕಾಲೇಜು ಪ್ರಭಾರ ಪ್ರಿನ್ಸಿಪಾಲ್ ಬಸಣ್ಣ ಹಾಗೂ ಕರಜಗಿ ಗ್ರಾಮದ ಪಿಯು ಕಾಲೇಜು ಪ್ರಿನ್ಸಿಪಾಲ್ ಚಂದ್ರಕಾಂತ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ಬಗೆದಷ್ಟು ಬಯಲಾಗ್ತಿದೆ KEA ಪರೀಕ್ಷೆ ಅಕ್ರಮ; ಇಬ್ಬರು ಉಪನ್ಯಾಸಕರು ಸಿಐಡಿ ವಶಕ್ಕೆ
ಕೆಇಎ ಪರೀಕ್ಷಾ ಅಕ್ರಮ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 15, 2023 | 9:29 PM

Share

ಕಲಬುರಗಿ, ನ.15: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದ FDA ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪನ್ಯಾಸಕರನ್ನು ಸಿಐಡಿ(CID) ವಶಕ್ಕೆ ಪಡೆದಿದ್ದಾರೆ. ಅಫಜಲಪುರ ಸರ್ಕಾರಿ ಪಿಯು ಕಾಲೇಜು ಪ್ರಭಾರ ಪ್ರಿನ್ಸಿಪಾಲ್ ಬಸಣ್ಣ ಹಾಗೂ ಕರಜಗಿ ಗ್ರಾಮದ ಪಿಯು ಕಾಲೇಜು ಪ್ರಿನ್ಸಿಪಾಲ್ ಚಂದ್ರಕಾಂತ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಹೌದು, ರಾಯಲ್ ಪಬ್ಲಿಕ್ ಶಾಲೆಯಲ್ಲಿ ಚಂದ್ರಕಾಂತ್ ಪರೀಕ್ಷಾ ಮುಖ್ಯಸ್ಥನಾಗಿದ್ದರೆ, ಪರೀಕ್ಷಾ ಕೇಂದ್ರದ ಪ್ರಶ್ನೆಪತ್ರಿಕೆ ಕಸ್ಟೋಡಿಯನ್ ಬಸಣ್ಣ ಪೂಜಾರಿ ಆಗಿದ್ದರು. ಈ ಹಿನ್ನಲೆ ಇಬ್ಬರನ್ನೂ ವಶಕ್ಕೆ ಪಡೆದ ಪೊಲೀಸರು  ಕಲಬುರಗಿ CID ಕಚೇರಿಗೆ ಕರೆತಂದಿದ್ದಾರೆ. ಜೊತೆಗೆ ಸಿಐಡಿ ಅಧಿಕಾರಿಗಳು ಇಬ್ಬರನ್ನೂ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಇಂದು ಸಿಐಡಿ ಡಿವೈಎಸ್ಪಿ ತನ್ವೀರ್ ಹಾಗೂ ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ ಟೀಂ ವಶಕ್ಕೆ ಪಡೆದಿತ್ತು. ಹೌದು, ಪ್ರಮುಖ ಆರೋಪಿ ಆರ್​ಡಿ ಪಾಟೀಲ್​ ಸೂಚನೆಯಂತೆ ಅಭ್ಯರ್ಥಿಗಳಿಗೆ ಬ್ಲೂಟೂತ್ ಸಪ್ಲೈ ಮಾಡಿರುವ ಆರೋಪದಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಇದಾದ ಬಳಿಕ ಇದೀಗ ಇಬ್ಬರು ಉಪನ್ಯಾಸಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಪರೀಕ್ಷೆ ಅಕ್ರಮ: ಕಿಂಗ್​ ಪಿನ್ ರುದ್ರಗೌಡನ ಟವರ್ ಲೋಕೆಷನ್ ಜಾಡು ಹಿಡಿದು ಹೊರಟಿದ್ದ ಪೊಲೀಸರಿಗೆ ಶಾಕ್

ಆರ್​ಡಿ ಪಾಟೀಲ್​ನನ್ನು ಎಂಟು ದಿನಗಳ ಕಾಲ ಸಿಐಡಿ ವಶಕ್ಕೆ

ಹೌದು, ಎಫ್​ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್ ಪಿನ್​ ಆರ್​ಡಿ ಪಾಟೀಲ್​ ಅವರನ್ನು ತಮ್ಮ ವಶಕ್ಕೆ ನೀಡುವಂತೆ ಸಿಐಡಿ, ಕಲಬುರಗಿ ಎರಡನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಆರೋಪಿ ಆರ್​ಡಿ ಪಾಟೀಲ್​ನನ್ನು ಎಂಟು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ. ಪರೀಕ್ಷೆಯಲ್ಲಿ ಅಕ್ರಮವೆಸಗಿದ ಪ್ರಕರಣವನ್ನು ಇದೀಗ ಸಿಐಡಿಗೆ  ಹಸ್ತಾಂತರವಾಗುತ್ತಿದ್ದಂತೆಯೇ ಬೇಟೆ ಶುರುವಾಗಿದ್ದು, ಇನ್ನೇಷ್ಟು ಆರೋಪಿಗಳನ್ನು ಹೊರ ಬರುತ್ತಾರೋ ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?