ಬಗೆದಷ್ಟು ಬಯಲಾಗ್ತಿದೆ KEA ಪರೀಕ್ಷೆ ಅಕ್ರಮ; ಇಬ್ಬರು ಉಪನ್ಯಾಸಕರು ಸಿಐಡಿ ವಶಕ್ಕೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದ FDA ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪನ್ಯಾಸಕರನ್ನು ಸಿಐಡಿ(CID) ವಶಕ್ಕೆ ಪಡೆದಿದ್ದಾರೆ. ಅಫಜಲಪುರ ಸರ್ಕಾರಿ ಪಿಯು ಕಾಲೇಜು ಪ್ರಭಾರ ಪ್ರಿನ್ಸಿಪಾಲ್ ಬಸಣ್ಣ ಹಾಗೂ ಕರಜಗಿ ಗ್ರಾಮದ ಪಿಯು ಕಾಲೇಜು ಪ್ರಿನ್ಸಿಪಾಲ್ ಚಂದ್ರಕಾಂತ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ಬಗೆದಷ್ಟು ಬಯಲಾಗ್ತಿದೆ KEA ಪರೀಕ್ಷೆ ಅಕ್ರಮ; ಇಬ್ಬರು ಉಪನ್ಯಾಸಕರು ಸಿಐಡಿ ವಶಕ್ಕೆ
ಕೆಇಎ ಪರೀಕ್ಷಾ ಅಕ್ರಮ
Edited By: ಕಿರಣ್ ಹನುಮಂತ್​ ಮಾದಾರ್

Updated on: Nov 15, 2023 | 9:29 PM

ಕಲಬುರಗಿ, ನ.15: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದ FDA ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪನ್ಯಾಸಕರನ್ನು ಸಿಐಡಿ(CID) ವಶಕ್ಕೆ ಪಡೆದಿದ್ದಾರೆ. ಅಫಜಲಪುರ ಸರ್ಕಾರಿ ಪಿಯು ಕಾಲೇಜು ಪ್ರಭಾರ ಪ್ರಿನ್ಸಿಪಾಲ್ ಬಸಣ್ಣ ಹಾಗೂ ಕರಜಗಿ ಗ್ರಾಮದ ಪಿಯು ಕಾಲೇಜು ಪ್ರಿನ್ಸಿಪಾಲ್ ಚಂದ್ರಕಾಂತ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಹೌದು, ರಾಯಲ್ ಪಬ್ಲಿಕ್ ಶಾಲೆಯಲ್ಲಿ ಚಂದ್ರಕಾಂತ್ ಪರೀಕ್ಷಾ ಮುಖ್ಯಸ್ಥನಾಗಿದ್ದರೆ, ಪರೀಕ್ಷಾ ಕೇಂದ್ರದ ಪ್ರಶ್ನೆಪತ್ರಿಕೆ ಕಸ್ಟೋಡಿಯನ್ ಬಸಣ್ಣ ಪೂಜಾರಿ ಆಗಿದ್ದರು. ಈ ಹಿನ್ನಲೆ ಇಬ್ಬರನ್ನೂ ವಶಕ್ಕೆ ಪಡೆದ ಪೊಲೀಸರು  ಕಲಬುರಗಿ CID ಕಚೇರಿಗೆ ಕರೆತಂದಿದ್ದಾರೆ. ಜೊತೆಗೆ ಸಿಐಡಿ ಅಧಿಕಾರಿಗಳು ಇಬ್ಬರನ್ನೂ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಇಂದು ಸಿಐಡಿ ಡಿವೈಎಸ್ಪಿ ತನ್ವೀರ್ ಹಾಗೂ ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ ಟೀಂ ವಶಕ್ಕೆ ಪಡೆದಿತ್ತು. ಹೌದು, ಪ್ರಮುಖ ಆರೋಪಿ ಆರ್​ಡಿ ಪಾಟೀಲ್​ ಸೂಚನೆಯಂತೆ ಅಭ್ಯರ್ಥಿಗಳಿಗೆ ಬ್ಲೂಟೂತ್ ಸಪ್ಲೈ ಮಾಡಿರುವ ಆರೋಪದಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಇದಾದ ಬಳಿಕ ಇದೀಗ ಇಬ್ಬರು ಉಪನ್ಯಾಸಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಪರೀಕ್ಷೆ ಅಕ್ರಮ: ಕಿಂಗ್​ ಪಿನ್ ರುದ್ರಗೌಡನ ಟವರ್ ಲೋಕೆಷನ್ ಜಾಡು ಹಿಡಿದು ಹೊರಟಿದ್ದ ಪೊಲೀಸರಿಗೆ ಶಾಕ್

ಆರ್​ಡಿ ಪಾಟೀಲ್​ನನ್ನು ಎಂಟು ದಿನಗಳ ಕಾಲ ಸಿಐಡಿ ವಶಕ್ಕೆ

ಹೌದು, ಎಫ್​ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್ ಪಿನ್​ ಆರ್​ಡಿ ಪಾಟೀಲ್​ ಅವರನ್ನು ತಮ್ಮ ವಶಕ್ಕೆ ನೀಡುವಂತೆ ಸಿಐಡಿ, ಕಲಬುರಗಿ ಎರಡನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಆರೋಪಿ ಆರ್​ಡಿ ಪಾಟೀಲ್​ನನ್ನು ಎಂಟು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ. ಪರೀಕ್ಷೆಯಲ್ಲಿ ಅಕ್ರಮವೆಸಗಿದ ಪ್ರಕರಣವನ್ನು ಇದೀಗ ಸಿಐಡಿಗೆ  ಹಸ್ತಾಂತರವಾಗುತ್ತಿದ್ದಂತೆಯೇ ಬೇಟೆ ಶುರುವಾಗಿದ್ದು, ಇನ್ನೇಷ್ಟು ಆರೋಪಿಗಳನ್ನು ಹೊರ ಬರುತ್ತಾರೋ ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us