AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್​ಡಿ ಪಾಟೀಲ್​ಗೆ ರಕ್ಷಣೆ ನೀಡಿದ ಇಬ್ಬರ ಬಂಧನ

ಕಲಬುರಗಿ ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್​ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಈತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು ಮ್ಯಾನೇಜರ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್​ಡಿ ಪಾಟೀಲ್​ಗೆ ರಕ್ಷಣೆ ನೀಡಿದ ಇಬ್ಬರ ಬಂಧನ
ಬಂಧಿತ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಯಾಳವಾರ್, ಮ್ಯಾನೇಜರ್ ದಿಲೀಪ್ ಪವಾರ್ ಹಾಗೂ ಪರಾರಿಯಾಗಿರುವ ಆರೋಪಿ ಆರ್​ಡಿ ಪಾಟೀಲ್
ಸಂಜಯ್ಯಾ ಚಿಕ್ಕಮಠ
| Edited By: |

Updated on: Nov 10, 2023 | 8:21 AM

Share

ಕಲಬುರಗಿ, ನ.10: ಕೆಇಎ ಪರೀಕ್ಷೆ ಅಕ್ರಮ (KEA Exam Scam) ಪ್ರಕರಣದ ಪ್ರಮುಖ ಆರೋಪಿ ಆರ್.​ಡಿ. ಪಾಟೀಲ್ (R.D.Patil) ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಈತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು ಮ್ಯಾನೇಜರ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಬುರ್ಗಿಯ ವರದಾ ಲೇಔಟ್​ನಲ್ಲಿರುವ ಮಹಾಲಕ್ಷ್ಮಿ ಅಪಾರ್ಟಮೆಂಟ್​ನಲ್ಲಿದ್ದ ಆರ್​ಡಿ ಪಾಟೀಲ್, ನವೆಂಬರ್ 6 ರಂದು ಪೊಲೀಸರು ದಾಳಿ ನಡೆಸಿದಾಗ ಪರಾರಿಯಾಗಿದ್ದ. ಅದರಂತೆ ಆರೋಪಿಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಫ್ಲ್ಯಾಟ್ ಮಾಲೀಕ ಮತ್ತು ಅಪಾರ್ಟ್ಮೆಂಟ್ ವ್ಯವಸ್ಥಾಪಕರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಪರೀಕ್ಷಾ ಅಕ್ರಮದ ಕಿಂಗ್​ಪಿನ್ ಪರಾರಿ​​: ಅಫಜಲಪುರ ಕ್ಷೇತ್ರದ ಶಾಸಕನಾಗುವ ಕನಸು ಕಂಡಿದ್ದ ಆರ್‌ಡಿ ಪಾಟೀಲ್​​

ಆರ್ ಡಿ ಪಾಟೀಲ್​ಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಶಹಾಪೂರದ ಶಂಕರ್ ಗೌಡಯಾಳವಾರ್ ಮತ್ತು ಅಪಾರ್ಟ್ಮೆಂಟ್​ನ ವ್ಯವಸ್ಥಾಪಕ ದಿಲೀಪ್ ಪವಾರ್ ಬಂಧಿತರಾಗಿದ್ದಾರೆ. ಆರ್​ಡಿ ಪಾಟೀಲ್​ನಿಂದ ವ್ಯವಸ್ಥಾಪಕ ದಿಲೀಪ್ 10 ಸಾವಿರ ರೂ. ಅಡ್ವಾನ್ಸ್ ಪಡೆದು, ಆ ಹಣ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಗೆ ಕೊಟ್ಟಿದ್ದ.

ಕೆಇಎ ಪರೀಕ್ಷೆ ಆಕ್ರಮದಲ್ಲಿ ಆರ್​ಡಿ ಪಾಟೀಲ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಇದೇ ವೇಳೆ ಆರ್.ಡಿ ಪಾಟೀಲ್, ನ.5 ರಂದು ರಾತ್ರಿ 11 ಗಂಟೆಗೆ ಮಹಾಲಕ್ಷ್ಮೀ ಅಪಾರ್ಟಮೆಂಟ್​ಗೆ ಆಗಮಿಸಿ ರಾತ್ರಿ ಅಲ್ಲಿಯೇ ಅಡಗಿದ್ದ. ಮರು ದಿನ ಮದ್ಯಾಹ್ನ ಪೊಲೀಸರು ಆಗಮಿಸುವ ಮಾಹಿತಿ ಸಿಕ್ಕ ತಕ್ಷಣ ಹಿಂಬದಿಯ ಕಾಂಪೌಂಡ್ ಹಾರಿ ಪರಾರಿಯಾಗಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು