AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್​ಡಿ ಪಾಟೀಲ್​ಗೆ ರಕ್ಷಣೆ ನೀಡಿದ ಇಬ್ಬರ ಬಂಧನ

ಕಲಬುರಗಿ ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್​ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಈತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು ಮ್ಯಾನೇಜರ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್​ಡಿ ಪಾಟೀಲ್​ಗೆ ರಕ್ಷಣೆ ನೀಡಿದ ಇಬ್ಬರ ಬಂಧನ
ಬಂಧಿತ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಯಾಳವಾರ್, ಮ್ಯಾನೇಜರ್ ದಿಲೀಪ್ ಪವಾರ್ ಹಾಗೂ ಪರಾರಿಯಾಗಿರುವ ಆರೋಪಿ ಆರ್​ಡಿ ಪಾಟೀಲ್
ಸಂಜಯ್ಯಾ ಚಿಕ್ಕಮಠ
| Edited By: Rakesh Nayak Manchi|

Updated on: Nov 10, 2023 | 8:21 AM

Share

ಕಲಬುರಗಿ, ನ.10: ಕೆಇಎ ಪರೀಕ್ಷೆ ಅಕ್ರಮ (KEA Exam Scam) ಪ್ರಕರಣದ ಪ್ರಮುಖ ಆರೋಪಿ ಆರ್.​ಡಿ. ಪಾಟೀಲ್ (R.D.Patil) ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಈತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು ಮ್ಯಾನೇಜರ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಬುರ್ಗಿಯ ವರದಾ ಲೇಔಟ್​ನಲ್ಲಿರುವ ಮಹಾಲಕ್ಷ್ಮಿ ಅಪಾರ್ಟಮೆಂಟ್​ನಲ್ಲಿದ್ದ ಆರ್​ಡಿ ಪಾಟೀಲ್, ನವೆಂಬರ್ 6 ರಂದು ಪೊಲೀಸರು ದಾಳಿ ನಡೆಸಿದಾಗ ಪರಾರಿಯಾಗಿದ್ದ. ಅದರಂತೆ ಆರೋಪಿಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಫ್ಲ್ಯಾಟ್ ಮಾಲೀಕ ಮತ್ತು ಅಪಾರ್ಟ್ಮೆಂಟ್ ವ್ಯವಸ್ಥಾಪಕರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಪರೀಕ್ಷಾ ಅಕ್ರಮದ ಕಿಂಗ್​ಪಿನ್ ಪರಾರಿ​​: ಅಫಜಲಪುರ ಕ್ಷೇತ್ರದ ಶಾಸಕನಾಗುವ ಕನಸು ಕಂಡಿದ್ದ ಆರ್‌ಡಿ ಪಾಟೀಲ್​​

ಆರ್ ಡಿ ಪಾಟೀಲ್​ಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಶಹಾಪೂರದ ಶಂಕರ್ ಗೌಡಯಾಳವಾರ್ ಮತ್ತು ಅಪಾರ್ಟ್ಮೆಂಟ್​ನ ವ್ಯವಸ್ಥಾಪಕ ದಿಲೀಪ್ ಪವಾರ್ ಬಂಧಿತರಾಗಿದ್ದಾರೆ. ಆರ್​ಡಿ ಪಾಟೀಲ್​ನಿಂದ ವ್ಯವಸ್ಥಾಪಕ ದಿಲೀಪ್ 10 ಸಾವಿರ ರೂ. ಅಡ್ವಾನ್ಸ್ ಪಡೆದು, ಆ ಹಣ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಗೆ ಕೊಟ್ಟಿದ್ದ.

ಕೆಇಎ ಪರೀಕ್ಷೆ ಆಕ್ರಮದಲ್ಲಿ ಆರ್​ಡಿ ಪಾಟೀಲ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಇದೇ ವೇಳೆ ಆರ್.ಡಿ ಪಾಟೀಲ್, ನ.5 ರಂದು ರಾತ್ರಿ 11 ಗಂಟೆಗೆ ಮಹಾಲಕ್ಷ್ಮೀ ಅಪಾರ್ಟಮೆಂಟ್​ಗೆ ಆಗಮಿಸಿ ರಾತ್ರಿ ಅಲ್ಲಿಯೇ ಅಡಗಿದ್ದ. ಮರು ದಿನ ಮದ್ಯಾಹ್ನ ಪೊಲೀಸರು ಆಗಮಿಸುವ ಮಾಹಿತಿ ಸಿಕ್ಕ ತಕ್ಷಣ ಹಿಂಬದಿಯ ಕಾಂಪೌಂಡ್ ಹಾರಿ ಪರಾರಿಯಾಗಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ